Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕ್‌ನ ಉದಯೋನ್ಮುಖ ಬೌಲರ್ ಹಸನ್ ಅಲಿ

ಪಾಕ್‌ನ ಉದಯೋನ್ಮುಖ ಬೌಲರ್ ಹಸನ್ ಅಲಿ

ವಾರ್ತಾಭಾರತಿವಾರ್ತಾಭಾರತಿ15 Jun 2017 11:43 PM IST
share
ಪಾಕ್‌ನ ಉದಯೋನ್ಮುಖ ಬೌಲರ್ ಹಸನ್ ಅಲಿ

ಲಂಡನ್, ಜೂ.15: ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ಯುವ ಆಟಗಾರ ಹಸನ್ ಅಲಿ ಮುಂಬರುವ ವರ್ಷಗಳಲ್ಲಿ ಪಾಕಿಸ್ತಾನದ ಪ್ರಮುಖ ಆಟಗಾರನಾಗಿ ಹೊರಹೊಮ್ಮುವ ಸೂಚನೆ ನೀಡಿದ್ದಾರೆ. ವಿವಿಧ ಶೈಲಿಯಲ್ಲಿ ಬೌಲಿಂಗ್ ಮಾಡಬಲ್ಲ ಅಲಿ ಉತ್ತಮ ಫೀಲ್ಡರ್ ಆಗಿದ್ದು, ಪಾಕ್ ತಂಡದಲ್ಲಿರುವ ಓರ್ವ ಅತ್ಯುತ್ತಮ ಆಟಗಾರನಾಗಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪಾಕ್ ಆಡಿದ್ದ ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ 10 ಓವರ್‌ಗಳಲ್ಲಿ 70 ರನ್ ನೀಡಿ ದುಬಾರಿ ಬೌಲರ್ ಎನಿಸಿಕೊಂಡಿದ್ದ ಅಲಿ ಆ ನಂತರ ನಡೆದ ದಕ್ಷಿಣ ಆಫ್ರಿಕ ವಿರುದ್ಧದ ಪಂದ್ಯದಲ್ಲಿ 24 ರನ್‌ಗೆ 3 ವಿಕೆಟ್‌ಗಳನ್ನು ಕಬಳಿಸಿ ಮೊದಲಿನ ಲಯಕ್ಕೆ ಮರಳಿದ್ದರು. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ 3 ವಿಕೆಟ್‌ಗಳನ್ನು ಉಡಾಯಿಸಿ ಪಾಕಿಸ್ತಾನ ತಂಡವನ್ನು ಸೆಮಿಫೈನಲ್‌ಗೆ ತಲುಪಿಸಿದ್ದರು.

ಟೂರ್ನಿಯ ಫೇವರಿಟ್ ಆಗಿ ಗುರುತಿಸಿಕೊಂಡಿದ್ದ ಇಂಗ್ಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಮುಖ ವೇಗದ ಬೌಲರ್ ಮುಹಮ್ಮದ್ ಆಮಿರ್ ಅನುಪಸ್ಥಿತಿಯಲ್ಲಿ ಪಾಕ್ ಬೌಲಿಂಗ್ ದಾಳಿಯ ನೇತೃತ್ವ ವಹಿಸಿದ್ದ ಅಲಿ ಸೋಫಿಯಾ ಗಾರ್ಡನ್‌ನ ಸ್ಲೋ-ಪಿಚ್‌ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿ ಮೂರು ವಿಕೆಟ್‌ಗಳನ್ನು ಕಬಳಿಸಿದ್ದರು. ಮೊದಲಿಗೆ ಜಾನಿ ಬೈರ್‌ಸ್ಟೋವ್ ವಿಕೆಟ್ ಪಡೆದಿದ್ದ ಅಲಿ ತನ್ನ ಎರಡನೆ ಸ್ಪೆಲ್‌ನಲ್ಲಿ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗನ್ ವಿಕೆಟ್ ಕಬಳಿಸಿದ್ದರು. ಬೆನ್ ಸ್ಟೋಕ್ಸ್ ವಿಕೆಟ್‌ನ್ನು ಪಡೆದು ಇಂಗ್ಲೆಂಡ್‌ನ ಬ್ಯಾಟಿಂಗ್ ಬೆನ್ನಲುಬು ಮುರಿದಿದ್ದ ಅಲಿ 10 ಓವರ್‌ಗಳಲ್ಲಿ ಕೇವಲ 35 ರನ್ ನೀಡಿ ಮೂರು ವಿಕೆಟ್‌ಗಳನ್ನು ಕಬಳಿಸಿದ್ದರು.

ಹಸನ್ ಅಲಿ ಟೂರ್ನಿಯಲ್ಲಿ ಈತನಕ ಒಟ್ಟು 10 ವಿಕೆಟ್‌ಗಳನ್ನು ಪಡೆದು ಗರಿಷ್ಠ ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ಪರ ಉತ್ತಮ ಪ್ರದರ್ಶನ ನೀಡಿದ ಬೌಲರ್ ಆಗಿದ್ದಾರೆ.

ಹಸನ್ ಅಲಿ 20 ಏಕದಿನ ಪಂದ್ಯಗಳಲ್ಲಿ 8ನೆ ಬಾರಿ ಮೂರು ವಿಕೆಟ್ ಗೊಂಚಲು ಪಡೆದಿದ್ದಾರೆ. ಅಲಿ ಏಕದಿನಕ್ಕೆ ಪಾದಾರ್ಪಣೆಗೈದ ಬಳಿಕ ಪಾಕ್‌ನ ಉಳಿದ ಬೌಲರ್‌ಗಳು ಒಟ್ಟಿಗೆ ಏಳು ಬಾರಿ ಮೂರು ವಿಕೆಟ್ ಗೊಂಚಲು ಪಡೆದಿದ್ದಾರೆ.

‘‘ನಾನು ದಕ್ಷಿಣ ಆಫ್ರಿಕ ವಿರುದ್ಧ ಹೇಗೆ ಬೌಲಿಂಗ್ ಮಾಡಿದ್ದೇನೋ ಅದೇ ರೀತಿ ಇಂಗ್ಲೆಂಡ್ ವಿರುದ್ಧ ಬೌಲಿಂಗ್ ಮಾಡಿದ್ದೆ. ಭಾರತ ವಿರುದ್ಧದ ಪಂದ್ಯದಲ್ಲಿ ಕೊನೆಯ 3 ಓವರ್‌ಗಳಲ್ಲಿ ಚೆನ್ನಾಗಿ ಬೌಲಿಂಗ್ ಮಾಡಿರಲಿಲ್ಲ. ಬೌಲಿಂಗ್ ಕೋಚ್ ಅಝರ್ ಮಹಮೂದ್ ಮಾರ್ಗದರ್ಶನದಲ್ಲಿ ನನ್ನ ಯೋಜನೆಯಂತೆ ಬೌಲಿಂಗ್ ಮಾಡಿ ಯಶಸ್ಸು ಸಾಧಿಸಿದ್ದೇನೆ’’ ಎಂದು ಹಸನ್ ಅಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X