Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕತರ್‌ನಲ್ಲಿನ್ನು ಉದ್ಯೋಗಗಳಿಗೂ ಸಂಚಕಾರ

ಕತರ್‌ನಲ್ಲಿನ್ನು ಉದ್ಯೋಗಗಳಿಗೂ ಸಂಚಕಾರ

ಭಾರತೀಯ ಕಾರ್ಮಿಕರಿಗೆ ಹೆಚ್ಚಿನ ಸಂಕಷ್ಟ

ವಾರ್ತಾಭಾರತಿವಾರ್ತಾಭಾರತಿ16 Jun 2017 4:16 PM IST
share
ಕತರ್‌ನಲ್ಲಿನ್ನು ಉದ್ಯೋಗಗಳಿಗೂ ಸಂಚಕಾರ

ದೋಹಾ,ಜೂ.16: ಕತರ್‌ನಲ್ಲಿ ಇಲೆಕ್ಟ್ರಿಷಿಯನ್ ಆಗಿರುವ ಅಜಿತ್ ಏಳು ತಿಂಗಳ ಹಿಂದಷ್ಟೇ ತನ್ನ ಹೊಸ ಉದ್ಯೋಗಕ್ಕೆ ಸೇರಿಕೊಂಡಿದ್ದ. ಆದರೆ ಈಗ ಈ ದೇಶದಲ್ಲಿ ಭಾರೀ ಸಂಖ್ಯೆಯಲ್ಲಿರುವ ಇತರ ವಲಸಿಗ ಕಾರ್ಮಿಕರಂತೆ ಅಜಿತ್ ಕೂಡ ಚಿಂತೆಗೆ ಸಿಲುಕಿದ್ದಾನೆ.

ಅಜಿತ್‌ನಲ್ಲಿ ತನ್ನ ಉದ್ಯೋಗದ ಬಗ್ಗೆ ಮಾತ್ರವಲ್ಲ, ಈ ದೇಶದಲ್ಲಿ ತನ್ನ ಭವಿಷ್ಯದ ಜೊತೆಗೆ ಆಹಾರದ ಬೆಲೆಗಳಲ್ಲಿ ತೀವ್ರ ಏರಿಕೆಯ ಬಗ್ಗೆಯೂ ಆತಂಕ ಮಡುವುಗಟ್ಟಿದೆ.

ಇದು ಹೀಗೆಯೇ ಮುಂದುವರಿದರೆ ನಮ್ಮಂತಹ ಕಾರ್ಮಿಕರು ಸಮಸ್ಯೆಗಳಿಗೆ ಸಿಲುಕಲಿದ್ದಾರೆ. ಆಹಾರ ಬೆಲೆಗಳು ಗಗನಚುಂಬಿಯಾಗಲಿವೆ ಮತ್ತು ಉದ್ಯೋಗಗಳಿಗೂ ಸಂಚಕಾರ ಬರಲಿದೆ ಎಂದು ಸೌದಿ ಅರೇಬಿಯಾ ಮತ್ತು ಇತರ ಹಲವಾರು ಗಲ್ಫ್ ರಾಷ್ಟ್ರಗಳು ಕತರ್‌ನೊಂದಿಗೆ ಎಲ್ಲ ಸಂಬಂಧಗಳನ್ನು ಕಡಿದುಕೊಂಡ ಬಳಿಕ ಉದ್ಭವಿಸಿರುವ ರಾಜತಾಂತ್ರಿಕ ಬಿಕ್ಕಟ್ಟನ್ನು ಪ್ರಸ್ತಾಪಿಸಿ ಆತ ಹೇಳಿದ.

ಅಜಿತ್ ಕತರ್‌ನಲ್ಲಿ ಪ್ರತಿ ತಿಂಗಳಿಗೆ 1,000 ರಿಯಾಲ್(ಭಾರತೀಯ ರೂ.ಸುಮಾರು 17,600) ದುಡಿಯುತ್ತಿದ್ದು, ಈ ಪೈಕಿ 600 ರಿಯಾಲ್‌ಗಳನ್ನು ಸ್ವದೇಶದಲ್ಲಿರುವ ತನ್ನ ಕುಟುಂಬಕ್ಕೆ ಕಳುಹಿಸುತ್ತಾನೆ. ಆದರೆ ಇನ್ನು ಮುಂದೆ ಅದು ಸಾಧ್ಯವಾಗಲಿಕ್ಕಿಲ್ಲ ಎಂಬ ಚಿಂತೆ ಆತನನ್ನು ಕಾಡುತ್ತಿದೆ.

ಕೆಲವು ಸೂಪರ್ ಮಾರ್ಕೆಟ್‌ಗಳಲ್ಲಿ ಅಕ್ಕಿ, ಟೊಮೆಟೋ ಮತ್ತು ಈರುಳ್ಳ್ಳಿ ಬೆಲೆಗಳು ಸಿಕ್ಕಾಪಟ್ಟೆ ಏರಿವೆ. ಪ್ರತಿಯೊಂದಕ್ಕೂ ದುಪ್ಪಟ್ಟು ಖರ್ಚು ಮಾಡಬೇಕಾಗಿದೆ ಎಂದು ಆತ ಹೇಳಿದ. ಬೆಲೆಏರಿಕೆಯೊಂದಿಗೆ ಹೊಂದಿಕೊಳ್ಳಲು ಅಜಿತ್ ಈಗ ದಿನಕ್ಕೆ ಒಂದೇ ಹೊತ್ತು ಊಟ ಮಾಡುತ್ತಿದ್ದಾನೆ.

ದ.ಏಷ್ಯಾದವರೇ ಹೆಚ್ಚಿರುವ ಎರಡು ಮಿಲಿಯನ್‌ಗೂ ಅಧಿಕ ವಲಸಿಗ ಕಾರ್ಮಿಕರು ಕತರ್‌ನ್ನು ಕಾಡುತ್ತಿರುವ ಬಿಕ್ಕಟ್ಟಿನ ಮೊದಲ ಬಲಿಪಶುಗಳಾಗಿದ್ದಾರೆ. ಪಾಶ್ಚಾತ್ಯ ದೇಶಗಳ ವಲಸಿಗರ ಮೇಲೆ ಯಾವುದೇ ಆರ್ಥಿಕ ಪರಿಣಾಮಗಳಾಗುವ ಸಾಧ್ಯತೆಗಳು ಕಡಿಮೆ. ಆದರೆ ಅಜಿತ್ ಮತ್ತು ಆತನಂತಹ ಇತರರಿಗೆ ಈ ನಿರಾಳತೆ ಇಲ್ಲ.

ನೆರೆಯ ರಾಷ್ಟ್ರಗಳು ಹೇರಿರುವ ನಿರ್ಬಂಧಗಳಿಂದಾಗಿ ಕತರ್‌ನಲ್ಲಿ ಆರ್ಥಿಕ ಅನಿಶ್ಚಿತತೆ ಹೆಚ್ಚುತ್ತಿರುವುದರಿಂದ ಉದ್ಯೋಗ ಭದ್ರತೆಯ ಕಳವಳಗಳು ಹೆಚ್ಚುತ್ತಿವೆ, ಜೊತೆಗೆ ತಮಗೆ ಅತ್ಯಗತ್ಯವಾಗಿದ್ದ, ಹೆಚ್ಚುವರಿ ಆದಾಯ ಗಳಿಕೆಗೆ ಅವಕಾಶ ನೀಡುತ್ತಿದ್ದ ಓವರ್‌ಟೈಂ ಕೆಲಸದ ಕೊರತೆಯೂ ಈ ಜನರನ್ನು ಕಾಡುತ್ತಿದೆ. ಅಜಿತ್ ಜೊತೆಯಲ್ಲಿದ್ದ ಬಾಂಗ್ಲಾದೇಶದ ಅನಿಲ್ ಮತ್ತು ಅಬ್ದುಲ್ ಬಾರಿಕ್ ಅವರದ್ದೂ ಇದೇ ವ್ಯಥೆ.

ನಿರ್ಬಂಧದಿಂದಾಗಿ ದೇಶದ ಆರ್ಥಿಕತೆಯ ಮೇಲೆ ಯಾವುದೇ ಪರಿಣಾಮ ವುಂಟಾಗಿಲ್ಲ ಎಂದು ಕತರ್ ಅಧಿಕಾರಿಗಳು ವಿಶ್ವಾಸದಿಂದ ಹೇಳುತ್ತಿದ್ದಾರಾದರೂ ವಲಸಿಗ ಕಾರ್ಮಿಕರು ಮಾತ್ರ ಹಾಗೆ ಭಾವಿಸುತ್ತಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X