Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಹಕರ ಸೋಗಿನಲ್ಲಿ ಕಳ್ಳರ ಕೈ ಚಳಕ:...

ಗ್ರಾಹಕರ ಸೋಗಿನಲ್ಲಿ ಕಳ್ಳರ ಕೈ ಚಳಕ: ಚಿನ್ನಾಭರಣ ಸಹಿತ ನಗದು ದೋಚಿದ ಖದೀಮರು

ವಾರ್ತಾಭಾರತಿವಾರ್ತಾಭಾರತಿ16 Jun 2017 6:23 PM IST
share
ಗ್ರಾಹಕರ ಸೋಗಿನಲ್ಲಿ ಕಳ್ಳರ ಕೈ ಚಳಕ: ಚಿನ್ನಾಭರಣ ಸಹಿತ ನಗದು ದೋಚಿದ ಖದೀಮರು

ಗುಂಡ್ಲುಪೇಟೆ : ತಾಲೂಕಿನ ತೆರಕಣಾಂಬಿ ಗ್ರಾಮದ ಚಿನ್ನದ ಅಂಗಡಿಯಲ್ಲಿ ವ್ಯಾಪಾರ ಮಾಡುವ ಸೋಗಿನಲ್ಲಿ ಬಂದ ಇಬ್ಬರು ಕಳ್ಳರು ಅಂಗಡಿ ಮಾಲೀಕನಿಗೆ ಮಂಕುಬೂದಿ ಎರಚಿ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ.

ಗ್ರಾಮದ ಪ್ರದೀಪ್ ಜುವೆಲ್ಲರ್ ಹಾಗೂ ಪಾನ್ ಬ್ರೋಕರ್ ಅಂಗಡಿಯಲ್ಲಿ ಜೂನ್ 15ರ ಸಂಜೆ ಘಟನೆ ನಡೆದಿದ್ದು ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಲಾಲ್‌ಜಿ ಎಂಬುವರಿಗೆ ಸೇರಿದ ಚಿನ್ನದ ಅಂಗಡಿಗೆ ಆಗಮಿಸಿದ ಇಬ್ಬರು ಮಲೆಯಾಳಂ ಮಾನತಾಡುತ್ತಿದ್ದ ಕಳ್ಳರು ಆಭರಣ ಖರೀದಿಸುವ ನೆಪದಲ್ಲಿ ಸಂಜೆ 7 ಗಂಟೆ ಸಮಯದಲ್ಲಿ ಕೃತ್ಯವೆಸಗಿದ್ದಾರೆ.

ಅಂಗಡಿಯಲ್ಲಿದ್ದ ಮಾಲೀಕರ ಮಗ ಪ್ರದೀಪ್‌ಗೆ 500 ರೂಪಾಯಿ ನೋಟು ನೀಡಿ 300 ರೂಪಾಯಿಗೆ ಬೆಳ್ಳಿಯ ಆಭರಣ ಖರೀದಿಸಿ 200 ರೂಪಾಯಿ ವಾಪಸ್ಸು ಪಡೆದಿದ್ದಾರೆ. ನಂತರ 100 ರೂಪಾಯಿಗೆ ಚಿಲ್ಲರೆ ಕೊಡುವಂತೆ ಕೇಳಿ ಪಡೆದಿದ್ದಾರೆ. ನಂತರ ಕ್ಯಾಷ್ ಕೌಂಟರಿನಲ್ಲಿ ಕುಳಿತಿದ್ದರೂ 18 ಬಾರಿ ಒಳಗೆ ಕೈಹಾಕಿ ಡ್ರಾಗಳಿಂದ ಚಿನ್ನಾಭರಣಗಳನ್ನು ಹೊರತೆಗೆದು ಜೇಬಿಗೆ ಹಾಕಿಕೊಳ್ಳುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಸಮಯದಲ್ಲಿ ಎಚ್ಚರ ತಪ್ಪಿಸುವ ರಾಸಾಯನಿಕ ಬಳಸಿರುವ ಪರಿಣಾಮವಾಗಿ ಪ್ರದೀಪ್ ಮಂಕಾಗಿ ಕುಳಿತಿದ್ದು ಯಾವುದೇ ಪ್ರತಿರೋಧ ತೋರಿಸಿಲ್ಲ ಎನ್ನಲಾಗಿದೆ. ಕಳ್ಳರು 30 ಸಾವಿರ ರೂಪಾಯಿ ನಗದು ಹಾಗೂ ಒಡವೆಗಳೊಡನೆ ಪರಾರಿಯಾಗಿದ್ದಾರೆ. ಬಹಳ ಹೊತ್ತಿನವರೆಗೂ ಮಂಕಾಗಿ ಕುಳಿತಿದ್ದ ಪ್ರದೀಪ್ ಎಚ್ಚರ ಬಂದಾಗ ಘಟನೆ ನಡೆದ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾನೆ. ನಂತರ ಹುಡುಕಾಡಿದರೂ ಕಳ್ಳರ ಪತ್ತೆಯಾಗಿಲ್ಲ.

ಘಟನೆಯಲ್ಲಿ 30 ಸಾವಿರ ರೂಪಾಯಿ ನಗದು ಹಾಗೂ 70 ಗ್ರಾಂ ಚಿನ್ನದ ಆಭರಣಗಳು ಕಳ್ಳತನವಾಗಿದೆ. ಈ ಬಗ್ಗೆ ತೆರಕಣಾಂಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಅಡಿಷನಲ್ ಎಸ್‌ಪಿ ಗೀತಾಪ್ರಸನ್ನ, ಡಿವೈಎಸ್‌ಪಿ ಎಸ್.ಇ.ಗಂಗಾಧರಸ್ವಾಮಿ ಹಾಗೂ ಸಿಪಿಐ ಕೆ.ವಿ.ಕೃಷ್ಣಪ್ಪ ಭೇಟಿ ನೀಡಿ ಸಿಸಿ ಟಿವಿಯ ವಿಡಿಯೋ ತುಣುಕುಗಳನ್ನು ಪಡೆದುಕೊಂಡು ಕಳ್ಳರ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X