Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿ.31ರೊಳಗೆ ಆಧಾರ್ ಸಲ್ಲಿಸದಿದ್ದರೆ...

ಡಿ.31ರೊಳಗೆ ಆಧಾರ್ ಸಲ್ಲಿಸದಿದ್ದರೆ ಬ್ಯಾಂಕ್ ಖಾತೆ ನಿರ್ವಹಣೆ ಅಸಾಧ್ಯ

ವಾರ್ತಾಭಾರತಿವಾರ್ತಾಭಾರತಿ16 Jun 2017 6:23 PM IST
share
ಡಿ.31ರೊಳಗೆ ಆಧಾರ್ ಸಲ್ಲಿಸದಿದ್ದರೆ ಬ್ಯಾಂಕ್ ಖಾತೆ ನಿರ್ವಹಣೆ ಅಸಾಧ್ಯ

ಹೊಸದಿಲ್ಲಿ,ಜೂ.16: ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು 50,000 ರೂ.ಹಾಗೂ ಹೆಚ್ಚಿನ ಹಣಕಾಸು ವ್ಯವಹಾರಕ್ಕೆ ಆಧಾರ್ ಸಂಖ್ಯೆಯನ್ನು ಸರಕಾರವು ಕಡ್ಡಾಯಗೊಳಿಸಿದೆ. ಹಾಲಿ ಬ್ಯಾಂಕ್ ಖಾತೆದಾರರು ಡಿ.31ರೊಳಗೆ ಆಧಾರ್ ಸಂಖ್ಯೆ ಯನ್ನು ತಮ್ಮ ಬ್ಯಾಂಕಿಗೆ ಸಲ್ಲಿಸುವಂತೆ ಸೂಚಿಸಲಾಗಿದ್ದು, ವಿಫಲಗೊಂಡರೆ ಅವರ ಖಾತೆ ಸ್ಥಗಿತಗೊಳ್ಳಲಿದೆ ಎಂದು ಕಂದಾಯ ಇಲಾಖೆಯ ಅಧಿಸೂಚನೆಯು ತಿಳಿಸಿದೆ.

ವ್ಯಕ್ತಿಗಳು ತೆರಿಗೆಗಳನ್ನು ತಪ್ಪಿಸಲು ಒಂದಕ್ಕಿಂತ ಹೆಚ್ಚಿನ ಪಾನ್ ಕಾರ್ಡ್‌ಗಳನ್ನು ಬಳಸುವುದಕ್ಕೆ ಕಡಿವಾಣ ಹಾಕಲು ಸರಕಾರವು ಈಗಾಗಲೇ 2017ನೇ ಸಾಲಿನ ಮುಂಗಡಪತ್ರದಲ್ಲಿ ಪಾನ್‌ನೊಂದಿಗೆ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಿದೆ.

ಹಣ ಚಲುವೆ ತಡೆ (ದಾಖಲೆಗಳ ನಿರ್ವಹಣೆ) ಕಾಯ್ದೆ,2005ಕ್ಕೆ ತಿದ್ದುಪಡಿಯೊಂದಿಗೆ ಹೊರಡಿಸಲಾಗಿರುವ ಅಧಿಸೂಚನೆಯು 50,000 ರೂ.ಮತ್ತು ಹೆಚ್ಚಿನ ಎಲ್ಲ ಹಣಕಾಸು ವಹಿವಾಟುಗಳಿಗೆ ವ್ಯಕ್ತಿಗಳು, ಕಂಪನಿಗಳು ಮತ್ತು ಪಾಲುದಾರಿಕೆ ಸಂಸ್ಥೆಗಳು ಆಧಾರ್ ಜೊತೆ ಪಾನ್ ಉಲ್ಲೇಖಿಸುವುದನ್ನು ಅಥವಾ ನಮೂನೆ 60 ಸಲ್ಲಿಸುವುದನ್ನು ಜೂ.1ರಿಂದ ಕಡ್ಡಾಯಗೊಳಿಸಿದೆ.

ಅಧಿಕೃತ ಕೆವೈಸಿ ದಾಖಲೆಗಳಿಲ್ಲದೆ ತೆರೆಯಬಹುದಾದ ಸಣ್ಣ ಖಾತೆಗಳಿಗೆ ನಿಯಮಗಳನ್ನು ಬಿಗಿಗೊಳಿಸಲಾಗಿದ್ದು, ಗರಿಷ್ಠ 50,000 ರೂ.ಠೇವಣಿಯಿಡಲು ಅವಕಾಶವಿರುವ ಈ ಖಾತೆಗಳನ್ನು ಕೋರ್ ಬ್ಯಾಂಕಿಂಗ್ ಇರುವ ಬ್ಯಾಂಕ್ ಶಾಖೆಗಳಲ್ಲಿ ಮಾತ್ರ ತೆರೆಯ ಬಹುದು ಎಂದು ಸ್ಪಷ್ಟಪಡಿಸಿದೆ.

ವ್ಯಕ್ತಿಗತ ನಿಗಾ ಸಾಧ್ಯವಿರುವ ಬ್ಯಾಂಕ್ ಶಾಖೆಗಳಲ್ಲಿಯೂ ಈ ಖಾತೆಗಳನ್ನು ತೆರೆಯಬಹುದಾಗಿದೆ ಮತ್ತು ಇಂತಹ ಖಾತೆಗಳಲ್ಲಿ ಯಾವುದೇ ವಿದೇಶಿ ಹಣ ಜಮೆಯಾಗದಂತೆ ಹಾಗೂ ವಹಿವಾಟುಗಳು ಮತ್ತು ಶಿಲ್ಕಿನ ವಾರ್ಷಿಕ ಸರಾಸರಿಯ ನಿಗದಿತ ಮಿತಿಯ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಗಿದೆ.

ಇಂತಹ ಸಣ್ಣ ಖಾತೆಯು ಮೊದಲ 12 ತಿಂಗಳು ಸಕ್ರಿಯವಾಗಿರುತ್ತದೆ ಮತ್ತು ಖಾತೆದಾರನು ಅಧಿಕೃತ ಗುರುತಿನ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿರುವ ರುಜುವಾತನ್ನು ಒದಗಿಸಿದರೆ ಇನ್ನೂ 12 ತಿಂಗಳ ಅವಧಿಗೆ ಖಾತೆಯು ಸಕ್ರಿಯವಾಗಿರುತ್ತದೆ.

ಜೂ.1ರ ನಂತರ ಬ್ಯಾಂಕ ಖಾತೆಯನ್ನು ತೆರೆಯುವ ಸಂದರ್ಭ ವ್ಯಕ್ತಿಯು ಆಧಾರ್ ಹೊಂದಿರದಿದ್ದಲ್ಲಿ ಆತ/ಆಕೆ ಆಧಾರ್‌ಗೆ ಅರ್ಜಿ ಸಲ್ಲಿಸಿರುವ ರುಜುವಾತನ್ನು ಒದಗಿಸ ಬೇಕು ಮತ್ತು ಖಾತೆ ತೆರೆದ ಆರು ತಿಂಗಳುಗಳಲ್ಲಿ ಬ್ಯಾಂಕಿಗೆ ಆಧಾರ್ ಸಂಖ್ಯೆಯನ್ನು ಸಲ್ಲಿಸಬೇಕು.
ಈ ತಿದ್ದುಪಡಿಯಿಂದಾಗಿ ಆಧಾರ್ ಮತ್ತು ಪಾನ್ ಪಡೆದುಕೊಳ್ಳುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಲಭಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X