Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೊಮ್ಮಲಾಪುರದಲ್ಲಿ ಜಿಲ್ಲಾಡಳಿತದಿಂದ...

ಬೊಮ್ಮಲಾಪುರದಲ್ಲಿ ಜಿಲ್ಲಾಡಳಿತದಿಂದ ಶಾಂತಿ ಸಭೆ : ದುರ್ಘಟನೆ ತಡೆಯಲು ಬಿಗಿ ಬಂದೋ ಬಸ್ತ್

ವಾರ್ತಾಭಾರತಿವಾರ್ತಾಭಾರತಿ16 Jun 2017 6:28 PM IST
share
ಬೊಮ್ಮಲಾಪುರದಲ್ಲಿ ಜಿಲ್ಲಾಡಳಿತದಿಂದ ಶಾಂತಿ ಸಭೆ :  ದುರ್ಘಟನೆ ತಡೆಯಲು ಬಿಗಿ ಬಂದೋ ಬಸ್ತ್

ಗುಂಡ್ಲುಪೇಟೆ, ಜೂ.16: ಸಾಮಾಜಿಕ ಬಹಿಷ್ಕಾರದಿಂದ ಪ್ರಕ್ಷುಬ್ದವಾಗಿರುವ ತಾಲೂಕಿನ ಬೊಮ್ಮಲಾಪುರದಲ್ಲಿ ಜೂನ್ 17 ರಂದು ಶಾಂತಿ ಸಭೆ ಏರ್ಪಡಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ಅಧಿಕಾರಿಗಳು ಹೇಳಿದ್ದು, ದುರ್ಘಟನೆಗಳನ್ನು ತಡೆಯಲು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.

ಜೂನ್ 14ರಂದು ಗ್ರಾಮಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಮಣಿ ಬಾಯಿ ಭೇಟಿ ಸಂದರ್ಭದಲ್ಲಿ ಎರಡೂ ಗುಂಪುಗಳ ಜನರು ಕೈಕೈ ಮಿಲಾಯಿಸಿದ ಘಟನೆ ನಡೆದ ನಂತರ ಗ್ರಾಮದಲ್ಲಿ ಪರಿಸ್ಥಿತಿ ಇನ್ನೂ ಪ್ರಕ್ಷುಬ್ದವಾಗಿತ್ತು. ಬಹಿಷ್ಕಾರಕ್ಕೊಳಗಾಗಿದ್ದವರು ಗ್ರಾಮಕ್ಕೆ ಹಿಂದುರುಗಿದ ನಂತರ ಪರಿಸ್ಥಿತಿ ಉದ್ವಿಗ್ನವಾಗಿದ್ದು ಅಲ್ಲಲ್ಲಿ, ಮಾತಿನ ಚಕಮಕಿಗಳು ನಡೆದಿದ್ದವು.

ಇದನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸ್ ಬಲ ನಿಯೋಜಿಸಿದ ಪೊಲೀಸ್ ಜಿಲ್ಲಾ ವರಿಷ್ಟ ಧರಣೇಂದ್ರ ಕುಮಾರ್ ಮೀನಾ ಸಂಜೆ 7.30ರಲ್ಲಿ ಎರಡೂ ಕಡೆಯವರನ್ನು ಒಂದೆಡೆ ಸೇರಿಸಿ ಸಭೆ ನಡೆಸಿದರೂ ಯಾವುದೇ ಉಪಯೋಗವಾಗಿಲ್ಲ. ಆದ್ದರಿಂದ ನಾಯಕ ಜನಾಂಗದ ಸಂಪ್ರದಾಯದಂತೆ ತಾಲೂಕಿನ ಎಲ್ಲಾ ಗ್ರಾಮಗಳ ಮುಖಂಡರನ್ನೂ ಸಭೆಗೆ ಆಹ್ವಾನಿಸಿ 17ರ ಶನಿವಾರ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಗ್ರಾಮದ ಮುಖಂಡರು ಹೇಳಿದ್ದಾರೆ.

ಸದ್ಯ ಗ್ರಾಮದಲ್ಲಿ ಹೆಚ್ಚಿನ ಜನರು ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಬಯಸುತ್ತಿದ್ದರೂ, ಪರಿಸ್ತಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಗ್ರಾಮಕ್ಕೆ ಯಾವುದೇ ವಾಹನ ಬಂದರೂ ಕುತೂಹಲದಿಂದ ಇಣುಕಿ ನೋಡುತ್ತಿದ್ದರೆ, ಅಕ್ಕಪಕ್ಕದವರ ಜೊತೆಗೂಡಿ ಮನೆಯ ಮುಂಭಾಗ ಕುಳಿತು ಮಾತನಾಡುತ್ತಾ ಮುಂದೇನಾಗಬಹುದು ಎಂದು ಚರ್ಚೆ ನಡೆಸುತ್ತಿದ್ದಾರೆ.

ಯಾವುದೇ ದುರ್ಘಟನೆಯನ್ನು ನಿಯಂತ್ರಿಸಲು ಗ್ರಾಮದಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ, ಒಂದು ಜಿಲ್ಲಾ ಸಶತ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ. ಬೇಗೂರು ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಕಿರಣ್ ಕುಮಾರ್ ಹಾಗೂ ಪಟ್ಟಣದ ಅಪರಾಧ ವಿಭಾಗದ ಸಬ್‌ಇನ್ಸ್‌ಪೆಕ್ಟರ್ ದಾಸಪ್ಪ ಗ್ರಾಮದಲ್ಲಿಯೇ ಬೀಡು ಬಿಟ್ಟಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X