Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಪ್ರತಿಭಟನೆ ಸಂದರ್ಭ ಅಪ್ರಾಪ್ತ...

ರೈತರ ಪ್ರತಿಭಟನೆ ಸಂದರ್ಭ ಅಪ್ರಾಪ್ತ ಅಮಾಯಕರ ಬಂಧನ: ಆರೋಪ

ವಾರ್ತಾಭಾರತಿವಾರ್ತಾಭಾರತಿ16 Jun 2017 8:51 PM IST
share
ರೈತರ ಪ್ರತಿಭಟನೆ ಸಂದರ್ಭ ಅಪ್ರಾಪ್ತ ಅಮಾಯಕರ ಬಂಧನ: ಆರೋಪ

  ಭೋಪಾಲ್, ಜೂ.16: ಮಂದ್‌ಸೋರ್ ಜಿಲ್ಲೆಯಲ್ಲಿ ಇತ್ತೀಚೆಗೆ ಪೊಲೀಸರ ಗೋಲೀಬಾರ್‌ಗೆ ರೈತರು ಬಲಿಯಾದ ಘಟನೆಯನ್ನು ವಿರೋಧಿಸುತ್ತಿದ್ದ ಪ್ರತಿಭಟನಾಕಾರರನ್ನು ಹತೋಟಿಗೆ ತರುವ ಪ್ರಯತ್ನವಾಗಿ ಪೊಲೀಸರು ಅಕ್ರಮವಾಗಿ ಕೆಲವು ಅಪ್ರಾಪ್ತರನ್ನು ಥಳಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜೂನ್ 9ರಂದು ಭೋಪಾಲ್ ಸಮೀಪದ ಫಂಡಾ ಎಂಬಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ಈ ಅಪ್ರಾಪ್ತರು ತಮ್ಮ ಮನೆಯಲ್ಲಿದ್ದುಕೊಂಡು ಘಟನೆಯನ್ನು ವೀಕ್ಷಿಸುತ್ತಿದ್ದರು. ಆದರೂ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ .

    ನವಿ ಪಥಾರಿಯ(17 ವರ್ಷ) ಎಂಬಾತನ ತಂದೆ ಕ್ಯಾನ್ಸರ್ ರೋಗಿಯಾದ ಕಾರಣ ಕಾಲೇಜೊಂದರಲ್ಲಿ ಬಿಎಸ್ಸಿ ಪದವಿಗೆ ಪ್ರವೇಶ ಪಡೆಯುವ ಬಗ್ಗೆ ಸಲಹೆ ಸೂಚನೆ ನೀಡುವಂತೆ ತನ್ನ ಸ್ನೇಹಿತ ರವೀಶ್ ಮೇವಾಡ(17 ವರ್ಷ) ಎಂಬಾತನನ್ನು ಮನೆಗೆ ಕರೆಸಿಕೊಂಡಿದ್ದ. ಇಬ್ಬರೂ ಮನೆಯಲ್ಲಿ ಕುಳಿತಿದ್ದಾಗ ಹೊರಗಡೆ ಭಾರೀ ಗದ್ದಲ ಕೇಳಿ ಬಂದಿದೆ. ಕೂಡಲೇ ಹೊರಬಂದು ನೋಡಿದಾಗ ಜನರು ಮತ್ತು ಪೊಲೀಸರು ದಿಕ್ಕುಪಾಲಾಗಿ ಓಡುತ್ತಿದ್ದರು. ಏನೋ ದುರ್ಘಟನೆ ನಡೆಯುತ್ತಿದೆ ಎಂದು ಅರಿತ ಇಬ್ಬರೂ ತಕ್ಷಣ ಮನೆಯೊಳಗೆ ಓಡಿದ್ದಾರೆ. ಆದರೆ ಇವರನ್ನು ಗಮನಿಸಿದ ಪೊಲೀಸರು ಮನೆಯತ್ತ ಬಂದು ಬಾಗಿಲು ಬಡಿದಿದ್ದಾರೆ. ನೀವು ನಿರಪರಾಧಿಗಳಾದರೆ ಹೊರಬನ್ನಿ ಎಂದು ಪೊಲೀಸರು ಹೇಳಿದ ಮಾತಿಗೆ ಇವರಿಬ್ಬರು ಮನೆಯಿಂದ ಹೊರಗೆ ಬಂದಿದ್ದಾರೆ. ತಕ್ಷಣ ಇವರನ್ನು ಬಂಧಿಸಿದ ಪೊಲೀಸರು ಜೈಲಿಗಟ್ಟಿದ್ದಾರೆ. ತಾವಿನ್ನೂ 17 ವರ್ಷದವರು. ಘಟನೆಯ ಬಗ್ಗೆ ತಮಗೆ ಏನೂ ತಿಳಿದಿಲ್ಲ ಎಂದು ಗೋಗರೆದರೂ ತಮ್ಮನ್ನು ಬಂಧಿಸಿದ್ದಾರೆ ಎಂದು ಗುರುವಾರ ಜಾಮೀನು ಪಡೆದು ಹೊರ ಬಂದಿರುವ ನವಿ ಮತ್ತು ರವೀಶ್ ಹೇಳಿದ್ದಾರೆ.

  ತನ್ನ ತಂದೆ ಕ್ಯಾನ್ಸರ್ ರೋಗಿಯಾದ ಕಾರಣ ಅವರನ್ನು ಒಬ್ಬರನ್ನೇ ಮನೆಯಲ್ಲಿ ಬಿಟ್ಟು ತಾನು ಹೋಗುವಂತಿಲ್ಲ. ಅಲ್ಲದೆ ತಾನು ನಿರಪರಾಧಿ ಎಂದು ಹೇಳಿಕೊಂಡರೂ ಪೊಲೀಸರು ಕೇಳಲಿಲ್ಲ.ಕ್ಯಾನ್ಸರ್ ರೋಗಿಯಾದ ನನ್ನ ತಂದೆ ಗುಲಾಬ್ ಸಿಂಗ್ ಪೊಲೀಸ್ ಸಿಬ್ಬಂದಿಯೋರ್ವರ ಕಾಲಿಗೆ ಬಿದ್ದು ಬೇಡಿಕೊಂಡರೂ ಅವರ ಮನಸ್ಸು ಕರಗಲಿಲ್ಲ.ತಂದೆಯೆದುರೇ ತನ್ನನ್ನು ಥಳಿಸಲಾಯಿತು. ಇದರಿಂದ ನಾನು ನೆಮ್ಮದಿ ಕಳೆದುಕೊಂಡಿದ್ದು ನನ್ನ ಭವಿಷ್ಯದ ಬಗ್ಗೆ ಚಿಂತೆ ಮೂಡಿದೆ ಎಂದು ನವಿ ಹೇಳಿದ್ದಾನೆ.

80ರ ವೃದ್ಧೆಯನ್ನೂ ಥಳಿಸಿದರು: ಪ್ರತಿಭಟನಾಕಾರರನ್ನು ಚದುರಿಸುವ ಪ್ರಯತ್ನದಲ್ಲಿ ಪೊಲೀಸರು 80 ವರ್ಷದ ವೃದ್ಧೆಯ ಮೇಲೂ ಕೈಮಾಡಿದ್ದಾರೆ. ಪ್ರತಿಭಟನಾಕಾರರಿಗೆ ಆಶ್ರಯ ನೀಡಿದ್ದಾರೆ ಎಂಬ ಕಾರಣ ನೀಡಿ ವೃದ್ದೆ ಕಮಲಾ ಬಾಯಿ ಮೆವಾಡ ಎಂಬವರನ್ನು ಎಳೆದಾಡಿ ಆಕೆಯನ್ನು ಥಳಿಸಿದ್ದಾರೆ. ಇದರಿಂದ ಈಕೆಯ ಕೈಯ ಮೂಳೆ ಮುರಿದಿದೆ.

     ಈಕೆಯ ರಕ್ಷಣೆಗೆ ಮುಂದಾದ ಓರ್ವ ಪುತ್ರ ಮತ್ತು ನಾಲ್ವರು ಮೊಮ್ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದಾಗ ಅವರು ದಿಕ್ಕಾಪಾಲಾಗಿ ಓಡಿದರು. ನಾನಾಗ ಮನೆಯ ಹೊರಗೆ ಕುಳಿತಿದ್ದೆ. ಕೆಲವರು ತನ್ನ ಮನೆಯೆಡೆಗೆ ಓಡಿ ಬಂದರು. ಅವರನ್ನು ಬೆಂಬತ್ತಿ ಬಂದ ಪೊಲೀಸರು ಮನೆಯೊಳಗೆ ಪ್ರವೇಶಿಸಿ ತನ್ನನ್ನು ಮತ್ತು ಕುಟುಂಬದವರನ್ನು ಥಳಿಸಿದ್ದಾರೆ ಎಂದು ಕಮಲಾ ಬಾಯಿ ದೂರಿದ್ದಾರೆ.

ಆದರೆ ಈ ಆರೋಪವನ್ನು ನಿರಾಕರಿಸಿರುವ ಭೋಪಾಲ್ (ಉತ್ತರ) ಪೊಲೀಸ್ ಅಧೀಕ್ಷಕ ಅರವಿಂದ್ ಸಕ್ಸೇನ, ಕಮಲಾ ಬಾಯಿ ಕೂಡಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಈಗ ಸುಳ್ಳು ಹೇಳುತ್ತಿದ್ದಾಳೆ ಎಂದು ಹೇಳಿಕೆ ನೀಡಿದ್ದಾರೆ.

           

share
ವಾರ್ತಾಭಾರತಿ
ವಾರ್ತಾಭಾರತಿ
Next Story
X