Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಪಿಎಂ ಹಿರಿಯ ಸದಸ್ಯ ಈಶ್ವರ ಶಕ್ತಿನಗರ...

ಸಿಪಿಎಂ ಹಿರಿಯ ಸದಸ್ಯ ಈಶ್ವರ ಶಕ್ತಿನಗರ ನಿಧನ

ವಾರ್ತಾಭಾರತಿವಾರ್ತಾಭಾರತಿ16 Jun 2017 10:24 PM IST
share
ಸಿಪಿಎಂ ಹಿರಿಯ ಸದಸ್ಯ ಈಶ್ವರ ಶಕ್ತಿನಗರ ನಿಧನ

ಮಂಗಳೂರು, ಜೂ. 16: ಸಿಪಿಎಂ ಪಕ್ಷದ ಹಿರಿಯ ಸದಸ್ಯ, ಮಂಗಳೂರು ನಗರ ಸಮಿತಿಯ ಮಾಜಿ ಸದಸ್ಯ ಎ.ಈಶ್ವರ ಶಕ್ತಿನಗರ (78) ಶುಕ್ರವಾರ ತಮ್ಮ ಶಕ್ತಿನಗರದಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.

ತಮ್ಮ ಯೌವನಾವಸ್ಥೆಯಲ್ಲಿ ಹೆಂಚು ಕಾರ್ಮಿಕನಾಗಿ ದುಡಿಯುದ ಸಂದರ್ಭದಲ್ಲಿ ಯೂನಿಯನ್ ಸದಸ್ಯರಾಗುವ ಮೂಲಕ ಹೆಂಚು ಕಾರ್ಮಿಕರ ಸಂಘಟನೆಯಲ್ಲಿ ಸಕ್ರಿಯ ಪಾತ್ರ ವಹಿಸಿದ ಈಶ್ವರ ಅವರು ಅನೇಕ ಹೋರಾಟ, ಚಳುವಳಿಗಳಲ್ಲಿ ಭಾಗವಹಿಸಿದ್ದಾರೆ. ಇದೇ ಸಂದರ್ಭದಲ್ಲಿ ಗೇರು ಬೀಜ ಕಾರ್ಮಿಕರ ಸಂಘಟನೆಯು ಪ್ರಬಲವಾಗಿ ಬೆಳೆಯುವಲ್ಲಿ ಸಕ್ರಿಯಪಾತ್ರ ವಹಿಸಿದ್ದಾರೆ. ಕ್ರಮೇಣ ಹಂಚಿನ ಫ್ಯಾಕ್ಟರಿಯ ಸಮಿತಿಯಲ್ಲಿ ಮುಖಂಡರಾಗುವ ಮೂಲಕ ಹಂಚು ಕಾರ್ಮಿಕರ ಯೂನಿಯನ್‌ನಲ್ಲಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡರು.

1964ರಲ್ಲಿ ಪಕ್ಷ ಇಬ್ಬಾಗವಾದಾಗ ಹೆಂಚು ಕಾರ್ಮಿಕರ ಮಧ್ಯೆ ಸಿಪಿಎಂಗೆ ಭಾರೀ ಪ್ರಭಾವ ಇದ್ದುದರಿಂದ ಸಿಪಿಎಂನತ್ತ ಬಂದರು. ತನ್ನ ಬಾಲ್ಯ ಜೀವನದಲ್ಲಿ ಜಪ್ಪಿನಮೊಗರುವಿನಲ್ಲಿದ್ದ ಈಶ್ವರ್ 1973ರಲ್ಲಿ ಶಕ್ತಿನಗರಕ್ಕೆ ಬಂದು ನೆಲೆಸಿದರು. ನಂತರ ಶಕ್ತಿನಗರದಲ್ಲಿ ಪಕ್ಷದ ಸಂಘಟನೆಗೆ ಚಾಲನೆ ನೀಡಿ ಪಕ್ಷದ ಶಾಖೆಯನ್ನು ಪ್ರಾರಂಭಿಸಿದರು. ಆ ಶಾಖೆಯ ಕಾರ್ಯದರ್ಶಿಯಾಗಿದ್ದುಕೊಂಡು ಕ್ರಮೇಣ ಪಕ್ಷದ ನಗರ ಸಮಿತಿ ಸದಸ್ಯರಾದರು. ಪ್ರದೇಶದಲ್ಲಿ ಬೀಡಿ ಸಂಘಟನೆಗೆ ಭಾರೀ ಪ್ರಭಾವವಿದ್ದು, ಬೀಡಿ ಸಂಘಟನೆ ವಿಸ್ತಾರಕ್ಕೆ ಗಮನ ನೀಡಿದರು. ಪಕ್ಷದ ಪತ್ರಿಕೆ ಜನಶಕ್ತಿಯಲ್ಲೂ ಸಕ್ರಿಯ ಪಾತ್ರ ವಹಿಸಿದರು. ಇಂತಹ ಸಂಗಾತಿಯನ್ನು ಕಳೆದುಕೊಂಡಿರುವುದು ಕಮ್ಯೂನಿಸ್ಟ್ ಚಳವಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಿಪಿಎಂ ತಿಳಿಸಿದೆ.

ಮೃತರ ಅಂತಿಮ ದರ್ಶನದಲ್ಲಿ ಸಿಪಿಎಂ ಮುಖಂಡರಾದ ಕೆ. ಆರ್. ಶ್ರೀಯಾನ್, ವಸಂತ ಆಚಾರಿ, ಜೆ. ಬಾಲಕೃಷ್ಣ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಯಾದವ ಶೆಟ್ಟಿ, ಯು ಬಿ. ಲೋಕಯ್ಯ, ಜಯಂತ ನಾಯ್ಕಿ, ರಮಣಿ ಮೂಡಬಿದ್ರಿ, ಜಯಂತಿ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು ಪಕ್ಷದ ನಗರ ಸಮಿತಿ ಮುಖಂಡರಾದ ಸುರೇಶ್ ಬಜಾಲ್, ದಯಾನಂದ ಶೆಟ್ಟಿ, ಸಂತೋಷ್ ಶಕ್ತಿನಗರ, ಸಂತೋಷ್ ಬಜಾಲ್ ಮುಂತಾದವರು ಪಾಲ್ಗೊಂಡಿದ್ದರು.

ಅವರ ನಿಧನಕ್ಕೆ ಸಿಪಿಎಂ ಮಂಗಳೂರು ನಗರ ಸಮಿತಿ, ಡಿ.ವೈ.ಎಫ್.ಐ. ಮಂಗಳೂರು ನಗರ ಸಮಿತಿ, ಸ್ಥಳೀಯ ಶತ್ತಿನಗರದ ಸಿಪಿಎಂ, ಡಿ.ವೈ.ಎಫ್.ಐ., ಎಸ್.ಎಫ್.ಐ, ನಿವೇಶನರಹಿತರ ಹೋರಾಟ ಸಮಿತಿ ಹಾಗೂ ಜನಶಕ್ತಿ ಬಳಗ ಸೇರಿದಂತೆ ಅನೇಕ ಸಂಘಸಂಸ್ಥೆಗಳು ಅತೀವ ಶೋಕ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X