Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲಂಕಾರಿಕ ಮೀನುಗಳ ಮಾರಾಟಕ್ಕೆ ನಿಷೇಧ:...

ಅಲಂಕಾರಿಕ ಮೀನುಗಳ ಮಾರಾಟಕ್ಕೆ ನಿಷೇಧ: ಕೇಂದ್ರದ ಅಧಿಸೂಚನೆ ಹಿಂಪಡೆಯಲು ಕೇರಳ ಸರಕಾರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Jun 2017 6:09 PM IST
share
ಅಲಂಕಾರಿಕ ಮೀನುಗಳ ಮಾರಾಟಕ್ಕೆ ನಿಷೇಧ: ಕೇಂದ್ರದ ಅಧಿಸೂಚನೆ ಹಿಂಪಡೆಯಲು ಕೇರಳ ಸರಕಾರ ಒತ್ತಾಯ

ತಿರುವನಂತಪುರಂ, ಜೂ.17: ಅಂಗಡಿಗಳಲ್ಲಿ ಅಲಂಕಾರಿಕ ಮೀನುಗಳ ಪ್ರದರ್ಶನ ಮತ್ತು ಮಾರಾಟವನ್ನು ನಿಷೇಧಿಸಿರುವ ಕೇಂದ್ರ ಸರಕಾರದ ಅಧಿಸೂಚನೆಯಿಂದ ಲಕ್ಷಾಂತರ ಜನರು ಕೆಲಸ ಕಳೆದುಕೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಇದನ್ನು ತಕ್ಷಣ ಹಿಂಪಡೆಯುವಂತೆ ಕೇರಳ ಸರಕಾರ ಒತ್ತಾಯಿಸಿದೆ.


 ಕೊಚ್ಚಿ ಮೆಟ್ರೋ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಪ್ರಧಾನಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಲ್ಲಿಸಿದ ಮನವಿ ಪತ್ರದಲ್ಲಿ ಈ ಪ್ರಮುಖ ಬೇಡಿಕೆಯೂ ಸೇರಿದೆ.ಅಲಂಕಾರಿಕ ಮೀನುಗಳ ಕುರಿತ ಅಧಿಸೂಚನೆಗೆ ಸಂಬಂಧಿಸಿ ಚರ್ಚೆ ನಡೆಸಲು ಎಲ್ಲಾ ರಾಜ್ಯಗಳ ಮೀನುಗಾರಿಕಾ ಸಚಿವರ ಸಭೆ ಕರೆಯುವಂತೆಯೂ ಅವರು ಒತ್ತಾಯಿಸಿದ್ದಾರೆ.
 
ಪಿಣರಾಯಿ ವಿಜಯನ್ ಸಲ್ಲಿಸಿದ ಮನವಿ ಪತ್ರದಲ್ಲಿ ಒಳಗೊಂಡಿರುವ ಪ್ರಮುಖ ಬೇಡಿಕೆಗಳಿವು: *ಕೇರಳದಲ್ಲಿ ಅಖಿಲ ಭಾರತ ವೈದ್ಯವಿಜ್ಞಾನ ಸಂಸ್ಥೆ (ಎಐಐಎಂಎಸ್) ಮತ್ತು ಅಂತರಾಷ್ಟ್ರೀಯ ಆಯುರ್ವೇದ ಸಂಸ್ಥೆ ಸ್ಥಾಪಿಸಬೇಕೆಂಬ ಬೇಡಿಕೆಗೆ ಶೀಘ್ರ ಅನುಮತಿ ನೀಡಬೇಕು.ಎಐಐಎಂಎಸ್‌ಗೆ ಕೇರಳ ಸರಕಾರ ಕೋಝಿಕೋಡ್‌ನಲ್ಲಿ 200 ಎಕರೆ ಜಮೀನು ಕಾದಿರಿಸಿದೆ.

*ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತರಿ ಯೋಜನೆಯಲ್ಲಿ ಬಾಕಿಯಾಗಿರುವ 636 ಕೋಟಿ ರೂ. ಮೊತ್ತವನ್ನು ಶೀಘ್ರ ಕೇರಳಕ್ಕೆ ಪಾವತಿಸುವುದು.


 *2577 ಕೋಟಿ ರೂ. ಅಂದಾಜು ವೆಚ್ಚದ ಕೊಚ್ಚಿ ಮೆಟ್ರೋ ದ್ವಿತೀಯ ಹಂತದ ವಿಸ್ತರಣೆ ಯೋಜನೆಯ ಪ್ರಸ್ತಾವನೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಬಾಕಿ ಇದೆ. ಇದಕ್ಕೆ ಶೀಘ್ರ ಅನುಮೋದನೆ ನೀಡುವುದು.

*ರಬ್ಬರ್ ಉತ್ಪಾದಕರಿಗೆ ನೀಡಲಾಗುತ್ತಿರುವ ಪ್ರೋತ್ಸಾಹ ಧನವನ್ನು ಕಿ.ಗ್ರಾಂ.ಗೆ 150 ರೂ.ನಿಂದ 200 ರೂ.ಗೆ ಹೆಚ್ಚಿಸುವ ಯೋಜನೆಯಿದ್ದು ಇದಕ್ಕೆ ಕೇಂದ್ರ ಸರಕಾರ ಆರ್ಥಿಕ ನೆರವು ನೀಡಬೇಕು.


  *ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಪೂರ್ಣಗೊಳ್ಳಲು ಕೇಂದ್ರ ಸರಕಾರ ಒಂದಾವರ್ತಿಯಲ್ಲಿ 500 ಕೋಟಿ ರೂ. ಆರ್ಥಿಕ ನೆರವು ನೀಡಬೇಕು.


*ಎಚ್‌ಎಲ್‌ಎಲ್ ಲಿ. ಸಂಸ್ಥೆ ಸೇರಿದಂತೆ ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಯೋಜನೆಯನ್ನು ಕೈಬಿಡಬೇಕು. 100 ಎಕರೆ ವಿಸ್ತೀರ್ಣವಿರುವ ಕೊಚ್ಚಿ ವಿಶೇಷ ಆರ್ಥಿಕ ವಲಯಕ್ಕೆ ಇನ್ನೂ 200 ಎಕರೆ ಸೇರಿಸಿ ವಿಸ್ತರಿಸುವ ಯೋಜನೆಗೆ ನೆರವು ನೀಡಬೇಕು.


* ಕೊಚ್ಚಿಯಲ್ಲಿರುವ ‘ಎಫ್‌ಎಸಿಟಿ’ಯಲ್ಲಿ ಅನಿಲ ಆಧಾರಿತ ಯೂರಿಯ ಸ್ಥಾವರ ನಿರ್ಮಿಸಲು ಕೇಂದ್ರ ರಸಗೊಬ್ಬರ ಇಲಾಖೆ 200 ಎಕರೆ ಜಮೀನು ನೀಡಲು ಸಮ್ಮತಿಸಿದೆ. 1200 ಕೋಟಿ ರೂ. ವೆಚ್ಚದ ಈ ಯೋಜನೆಗೆ ರಾಜ್ಯ ಸರಕಾರಕ್ಕೆ ಆರ್ಥಿಕ ನೆರವು ನೀಡಬೇಕು- ಇತ್ಯಾದಿ ಪ್ರಮುಖ ಬೇಡಿಕೆಯುಳ್ಳ ಮನವಿಯನ್ನು ಪ್ರಧಾನಿಗೆ ಅರ್ಪಿಸಲಾಗಿದೆ.


 ಈ ಮಧ್ಯೆ ರಾಜ್ಯ ವಿಧಾನಸಭೆಯಲ್ಲಿ ವಿಪಕ್ಷ ನಾಯಕನಾಗಿರುವ ರಮೇಶ್ ಚೆನ್ನಿತ್ತಿಲ ಅವರೂ ಪ್ರಧಾನಿಗೆ ಮನವಿ ಸಲ್ಲಿಸಿದ್ದು, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಸಂಬಂಧಿಸಿದ ಪ್ರದೇಶಗಳಿಗೆ ಶೀಘ್ರ ಅನುಮತಿ ನೀಡುವಂತೆ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X