Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಝಾಫರ್ ಹುಸೈನ್‌ರನ್ನು ಕೊಂದು ಹಾಕಿ...

ಝಾಫರ್ ಹುಸೈನ್‌ರನ್ನು ಕೊಂದು ಹಾಕಿ ಎಂದಿದ್ದ ಸರಕಾರಿ ಅಧಿಕಾರಿಗಳು: ಪ್ರತ್ಯಕ್ಷದರ್ಶಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ17 Jun 2017 7:51 PM IST
share
ಝಾಫರ್ ಹುಸೈನ್‌ರನ್ನು ಕೊಂದು ಹಾಕಿ ಎಂದಿದ್ದ ಸರಕಾರಿ ಅಧಿಕಾರಿಗಳು: ಪ್ರತ್ಯಕ್ಷದರ್ಶಿ ಹೇಳಿಕೆ

ಪ್ರತಾಪ್‌ಗಢ್, ಜೂ. 17: ರಾಜಸ್ಥಾನದ ಆಯುಕ್ತ ಸೇರಿದಂತೆ ಸರಕಾರಿ ಅಧಿಕಾರಿಗಳಿಂದ ಶುಕ್ರವಾರ ಥಳಿತಕ್ಕೊಳಗಾಗಿ ಮೃತಪಟ್ಟ ಝಾಫರ್ ಹುಸೈನ್‌ರ ಪ್ರತಾಪ್‌ಗಢ್‌ನಲ್ಲಿರುವ ನಿವಾಸದಲ್ಲಿ ಗಾಢ ವೌನ ಆವರಿಸಿದೆ.

ಝಾಫರ್ ಹುಸೈನ್ ಅವರ ಪತ್ನಿ ರಶೀದಾ ಬಿ ದಿಗ್ಭ್ರಮೆಗೊಳಗಾಗಿದ್ದಾರೆ. ಬಿಳಿಯ ದುಪ್ಪಟದಿಂದ ತನ್ನ ಮುಖ ಮುಚ್ಚಿಕೊಂಡಿರುವ ಅವರು ಖಾಲಿ ಗೋಡೆಯನ್ನು ತದೇಕ ದೃಷ್ಟಿಯಿಂದ ನೋಡುತ್ತಿದ್ದಾರೆ. ಅವರ ಪುತ್ರಿ 14 ವರ್ಷದ ಸಾಬ್ರಾ ತಂದೆಯ ಸಾವಿನ ನೋವು ಮರೆಯಲು ಖುರಾನ್ ಪಠಿಸುತ್ತಿದ್ದಾಳೆ.

   ಪತ್ನಿ ಹಾಗೂ ಪುತ್ರಿ ಶೌಚ ಕಾರ್ಯ ಪೂರೈಸುತ್ತಿದ್ದ ಸಂದರ್ಭ ಆಯುಕ್ತ ಸೇರಿದಂತೆ ಸರಕಾರಿ ಅಧಿಕಾರಿಗಳು ಫೋಟೋ ತೆಗೆಯುತ್ತಿರುವುದನ್ನು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಸಾಬ್ರಾಳ ತಂದೆ ಸಿಪಿಐ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಝಾಫರ್ ಹುಸೈನ್ ಥಳಿತಕ್ಕೊಳಗಾಗಿದ್ದರು.

ಅವರು ನನ್ನ ಮಗಳಿಗೆ ಬೆದರಿಕೆ ಒಡ್ಡಿದರು. ಅವಳ ತಂದೆಯನ್ನು ದಹಿಸುವುದಾಗಿ, ನನ್ನ ಮುಖವನ್ನು ವಿರೂಪಗೊಳಿಸುವುದಾಗಿ ಹೇಳಿದರು ಎಂದು ರಶೀದಾ ಬಿ ರೋದಿಸುತ್ತಾ ತಿಳಿಸಿದ್ದಾರೆ.

 ಅದು ಸುಮಾರು 6.30ರ ಸಮಯ. ನಾವು ಶೌಚಕ್ಕಾಗಿ ಬಯಲು ಪ್ರದೇಶಕ್ಕೆ ತೆರಳಿದ್ದೆವು. ಈ ಸಂದರ್ಭ ನಗರಸಭೆಯ ಅಧಿಕಾರಿಗಳ ಕಾರೊಂದು ಬಂತು. ಅವರು ನಮ್ಮ ಫೋಟೋ ತೆಗೆಯಲು ಆರಂಭಿಸಿದರು. ನಮಗೆ ಅವಾಚ್ಯ ಶಬ್ದದಿಂದ ಬೈಯಲು ಆರಂಭಿಸಿದರು. ನಮ್ಮ ನೀರಿನ ಮಗ್‌ಗಳನ್ನು ಕಾಲಿನಿಂದ ತುಳಿದರು. ಅವರು ನಮಗೆ ಥಳಿಸಲು ಆರಂಭಿಸಿದಾಗ ಅಪ್ಪ ಬಂದು ತಡೆಯಲು ಪ್ರಯತ್ನಿಸಿದರು. ನಗರಸಭೆಯ ನೌಕರ ಕಮಲ್ ನನ್ನ ಅಪ್ಪನ ತಲೆಗೆ ಕಲ್ಲಿನಿಂದ ಹಲ್ಲೆ ನಡೆಸಿದ. ಹಲ್ಲೆ ನಡೆಯುವ ಸಂದರ್ಭ ಕಾರಿನಲ್ಲಿ ಕುಳಿತಿದ್ದ ಆಯುಕ್ತರು ಉತ್ತೇಜನ ನೀಡುತ್ತಿದ್ದರು ಎಂದು ಸಾಬ್ರಾ ತಿಳಿಸಿದ್ದಾಳೆ.

ಹತ್ಯೆ ವಿರೋಧಿಸಿ ಪ್ರತಿಭಟನೆ

48ರ ಹರೆಯದ ಝಾಫರ್ ಹುಸೈನ್ ಮೇಲೆ ಅಧಿಕಾರಿಗಳು ನಡೆಸಿದ ಹಲ್ಲೆ ನಡೆಸಿ ಸಾವಿಗೆ ಕಾರಣವಾಗಿರುವುದನ್ನು ಖಂಡಿಸಿ ಪ್ರತಾಪ್‌ಗಢದಲ್ಲಿರುವ ಝಾಫರ್ ಹುಸೈನ್‌ನ ನಿವಾಸದ ಹೊರಭಾಗದಲ್ಲಿ ಗ್ರಾಮಸ್ಥರು ಸಂಘಟಿತರಾಗಿ ಪ್ರತಿಭಟನೆ ನಡೆಸಿದ್ದಾರೆ. ಘಟನೆಯ ಪ್ರತ್ಯಕ್ಷ ಸಾಕ್ಷಿಯಾಗಿರುವ ಶಾಹಿದಾ, ಹಲ್ಲೆಯಿಂದಾಗಿ ಕಮಲ್‌ನ ಕೈ ಹಾಗೂ ಅಂಗಿಯಲ್ಲಿ ಝಾಫರ್‌ನ ರಕ್ತದ ಕಲೆಗಳಾಗಿವೆ ಎಂದು ಹೇಳಿದ್ದಾರೆ.

ಪೊಲೀಸರು ಪ್ರಥಮ ಮಾಹಿತಿ ವರದಿಯಲ್ಲಿ ಆಯುಕ್ತ ಅಶೋಕ್ ಜೈನ್ ಸೇರಿದಂತೆ 5 ಮಂದಿ ಸರಕಾರಿ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದಾರೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X