ಮರ್ದಾಳ:ಕೃಷಿಕರಿಗೆ ಉಚಿತ ತರಕಾರಿ ಬೀಜ ವಿತರಣೆ
ಕಡಬ, ಜೂ.17. ವಿಜಯ ಬ್ಯಾಂಕ್ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಕೃಷಿಕರಿಗೆ ಉಚಿತ ತರಕಾರಿ ಬೀಜ ವಿತರಣೆ ಹಾಗೂ ಮಾಹಿತಿ ಕಾರ್ಯಕ್ರಮವು ಮರ್ದಾಳದಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಹೆಗ್ಡೆ ಅವರು ಮಾತನಾಡಿ, ಸಮಾಜ ಸೇವೆಯ ಉದ್ದೇಶದಿಂದ ವಿಜಯ ಬ್ಯಾಂಕ್ ಆರಂಭಿಸಿರುವ ಪ್ರತಿಷ್ಠಾನವು ಕಳೆದ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಹೊಲಿಗೆ ತರಬೇತಿ ಕೇಂದ್ರ, ಗೃಹೋಪಯೋಗಿ ವಸ್ತುಗಳ ತಯಾರಿಕಾ ತರಬೇತಿ, ರಬ್ಬರ್ ಟ್ಯಾಪಿಂಗ್ ತರಬೇತಿ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಪರಿಸರ, ಅರಣ್ಯ ಸಂರಕ್ಷಣೆ, ಜಲ ಮರುಪೂರಣ, ಶಿಕ್ಷಣ ಕ್ಷೇತ್ರ ಹಾಗೂ ಕೃಷಿ ಚಟುವಟಿಕೆಗಳಿಗೆ ಪೂರಕವಾದ ಹಲವು ಕಾರ್ಯಕ್ರಮಗಳನ್ನು ಕೂಡ ನಡೆಸಲಾಗಿದೆ ಎಂದರು.
Next Story