Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಬಾಮರ ಕ್ಯೂಬಾ ಒಪ್ಪಂದಕ್ಕೆ ಟ್ರಂಪ್ ಖೊಕ್

ಒಬಾಮರ ಕ್ಯೂಬಾ ಒಪ್ಪಂದಕ್ಕೆ ಟ್ರಂಪ್ ಖೊಕ್

ಮತ್ತೆ ಶೀತಲಸಮರದ ದಾರಿ ಹಿಡಿದ ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ17 Jun 2017 10:24 PM IST
share
ಒಬಾಮರ ಕ್ಯೂಬಾ ಒಪ್ಪಂದಕ್ಕೆ ಟ್ರಂಪ್ ಖೊಕ್

ವಾಶಿಂಗ್ಟನ್,ಜೂ.17: ತನ್ನ ಪೂರ್ವಾಧಿಕಾರಿ ಬರಾಕ್ ಒಬಾಮ ಅವರ ಕ್ಯೂಬಾ ಒಪ್ಪಂದವು ಏಕಪಕ್ಷೀಯವಾಗಿದ್ದು, ಅಮೆರಿಕದ ಹಿತಾಸಕ್ತಿಗೆ ಧಕ್ಕೆಯುಂಟು ಮಾಡಿದೆ ಎಂದು ಆರೋಪಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಐತಿಹಾಸಿಕ ಒಡಂಬಡಿಕೆಯನ್ನು ರದ್ದುಪಡಿಸಿರುವುದಾಗಿ ಶನಿವಾರ ಘೋಷಿಸಿದ್ದಾರೆ. ಆ ಮೂಲಕ ಶೀತಲ ಸಮರದ ಸಮಯದಲ್ಲಿ ಬದ್ಧವೈರಿಗಳಾಗಿದ್ದ ಈ ಎರಡು ರಾಷ್ಟ್ರಗಳ ನಡುವೆ ಮತ್ತೆ ತಿಕ್ಕಾಟ ಆರಂಭಗೊಳ್ಳುವ ಸೂಚನೆ ನೀಡಿದ್ದಾರೆ.ಕ್ಯೂಬಾ ಅಧ್ಯಕ್ಷ ರಾವುಲ್ ಕ್ಯಾಸ್ಟ್ರೋ ಅವರ ಮಿಲಿಟರಿ ಏಕಸ್ವಾಮ್ಯದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವು ದಾಗಿಯೂ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

    ‘‘ಒಬಾಮ ಆಡಳಿತದಲ್ಲಿ ಏರ್ಪಟ್ಟ ಕ್ಯೂಬಾದೊಂದಿಗಿನ ಒಪ್ಪಂದವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಪಡಿಸುತ್ತಿದ್ದೇನೆ. ಚುನಾವಣೆ ವೇಳೆ ನಾನು ಭರವಸೆ ನೀಡಿದ್ದ ನೂತನ ಕ್ಯೂಬಾ ನೀತಿಯನ್ನು ಜಾರಿಗೊಳಿಸುವುದಾಗಿ ಇಂದೇ ಘೋಷಿಸುತ್ತೇನೆ’’ ಎಂದು ಟ್ರಂಪ್ ಹೇಳಿದ್ದಾರೆ.
ಅವರು ಅಮೆರಿಕದ ಮಿಯಾಮಿಯಲ್ಲಿರುವ ‘ಲಿಟಲ್ ಹವಾನಾ’ದಲ್ಲಿ ನೆಲೆಸಿರುವ ಕ್ಯೂಬಾದ ರಾಜಕೀಯ ನಿರಾಶ್ರಿತರನ್ನುದ್ದೇಶಿಸಿ ಮಾತನಾಡುತ್ತಿದ್ದರು.

 ‘‘ನಮ್ಮ ನೀತಿಯು ಕ್ಯೂಬಾ ಹಾಗೂ ಅಮೆರಿಕದ ಜನತೆಗೆ ಹೆಚ್ಚು ಉತ್ತಮವಾದಂತಹ ನೀತಿಯೊಂದನ್ನು ಜಾರಿಗೊಳಿಸಲು ಬಯಸಿದೆ. ಕ್ಯೂಬಾ ಆಡಳಿತದ ಸೇನಾ ಏಕಸ್ವಾಮ್ಯವನ್ನು ಕಾಪಾಡಲು ಹಾಗೂ ಕ್ಯೂಬಾ ನಾಗರಿಕರ ಮೇಲೆ ದೌರ್ಜನ್ಯಗಳನ್ನು ನಡೆಸುವುದಕ್ಕೆ ಅಮೆರಿಕದ ಡಾಲರ್‌ಗಳು ವ್ಯಯವಾಗುವುದು ನಮಗೆ ಬೇಕಿಲ್ಲ’’ ಎಂದು ಟ್ರಂಪ್ ಹೇಳಿದ್ದಾರೆ.

ಟ್ರಂಪ್ ಆಡಳಿತವು ಕ್ಯೂಬಾದ ಜೊತೆಗಿನ ಅಮೆರಿಕದ ಬಾಂಧವ್ಯಕ್ಕೆ ಹೊಸ ನಿರ್ಬಂಧಗಳನ್ನು ವಿಧಿಸಿರುವುದ್ನು ರಾವುಲ್ ಕ್ಯಾಸ್ಟ್ರೋ ಆಡಳಿತವು ಟೀಕಿಸಿತ್ತು. ಆದಾಗ್ಯೂ ಅಮೆರಿಕದ ಜೊತೆ ಗೌರವಯುತ ಮಾತುಕತೆಗಳನ್ನು ನಡೆಸುವ ತನ್ನ ಆಶಯವನ್ನು ಅದು ಪುನರುಚ್ಚರಿಸಿತ್ತು.

    2016ರಲ್ಲಿ ಬರಾಕ್ ಒಬಾಮ ಕ್ಯೂಬಾಗೆ ಐತಿಹಾಸಿಕ ಭೇಟಿ ನೀಡಿದ ಬಳಿಕ ರಾಜಧಾನಿ ಹವಾನದಲ್ಲಿ ಅಮೆರಿಕದ ರಾಯಭಾರಿ ಕಚೇರಿಯು ಪುನಾರಂಭಗೊಂಡಿತ್ತು. ಈ ಎರಡೂ ದೇಶಗಳ ನಡುವೆ ವಾಣಿಜ್ಯ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ವಿಸ್ತರಿಸಲು ಒಬಾಮ ಮುತುವರ್ಜಿ ವಹಿಸಿದ್ದರು. ಆದಾಗ್ಯೂ ಇದೀಗ ಟ್ರಂಪ್ ಅವರು ಕ್ಯೂಬಾ ಕುರಿತ ಒಬಾಮ ನೀತಿಯಿಂದ ಸಂಪೂರ್ಣ ಹಿಂದೆ ಸರಿದಿದ್ದಾರೆ.

ಕ್ಯೂಬಾ ತನ್ನ ಎಲ್ಲಾ ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸುವ ತನಕ ಹಾಗೂ ನಾಗರಿಕ ಸ್ವಾತಂತ್ರಕ್ಕೆ ಮನ್ನಣೆ ನೀಡುವವರೆಗೆ ಆ ದೇಶದ ಮೇಲೆ ಹೇರಿರುವ ನಿರ್ಬಂಧಗಳನ್ನು ರದ್ದುಪಡಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X