Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ಲಾಸ್ಟಿಕ್ ಬಾಟ್ಲಿಗಳಲ್ಲಿ ಔಷಧಿಗಳು...

ಪ್ಲಾಸ್ಟಿಕ್ ಬಾಟ್ಲಿಗಳಲ್ಲಿ ಔಷಧಿಗಳು ಸುರಕ್ಷಿತವೇ ಎನ್ನುವುದನ್ನು ಕಂಡುಕೊಳ್ಳಲು ಸರಕಾರದ ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 Jun 2017 6:07 PM IST
share
ಪ್ಲಾಸ್ಟಿಕ್ ಬಾಟ್ಲಿಗಳಲ್ಲಿ ಔಷಧಿಗಳು ಸುರಕ್ಷಿತವೇ  ಎನ್ನುವುದನ್ನು ಕಂಡುಕೊಳ್ಳಲು ಸರಕಾರದ ಸೂಚನೆ

ಹೊಸದಿಲ್ಲಿ,ಜೂ.18: ಪ್ಲಾಸ್ಟಿಕ್ ಬಾಟ್ಲಿಗಳು ಕರಗುವ ಮೂಲಕ ಅವುಗಳಲ್ಲಿನ ಔಷಧಿ ಗಳು ಕಲುಷಿತಗೊಳ್ಳುತ್ತವೆಯೇ ಎಂಬ ಬಗ್ಗೆ ವಿವರವಾದ ಅಧ್ಯಯನವೊಂದನ್ನು ಕೈಗೊಳ್ಳುವಂತೆ ಕೇಂದ್ರವು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಗೆ ಸೂಚಿಸಿದೆ.

 ಕೇಂದ್ರ ಆರೋಗ್ಯ ಸಚಿವಾಲಯವು ಎರಡು ವರ್ಷಗಳ ಹಿಂದೆ ಸಿದ್ಧಗೊಳಿಸಿದ್ದ ಕರಡು ನಿರ್ದೇಶನವು ಪ್ರಬಲ ಔಷಧಿಗಳನ್ನು ದಾಸ್ತಾನಿರಿಸಲು ಪ್ಲಾಸ್ಟಿಕ್ ಮತ್ತು ಪೆಟ್ ಬಾಟ್ಲಿಗಳ ಬದಲಾಗಿ ಗಾಜಿನ ಬಾಟ್ಲಿಗಳನ್ನು ಬಳಸಬೇಕೆಂಬ ಪ್ರಸ್ತಾವವನ್ನು ಹೊಂದಿತ್ತು.

 ಕೆಮ್ಮಿನ ಸಿರಪ್‌ಗಳು ಮತ್ತು ಇತರ ದ್ರವ ಔಷಧಿಗಳ ಪ್ಲಾಸ್ಟಿಕ್ ಬಾಟ್ಲಿಗಳಲ್ಲಿ ಸೀಸ ಸೇರಿದಂತೆ ವಿಷಕಾರಿ ವಸ್ತುಗಳನ್ನು ಕಳೆದ ವರ್ಷ ಸರಕಾರದ ಅಧ್ಯಯನವೊಂದು ಪತ್ತೆ ಹಚ್ಚಿತ್ತು. ಇಂತಹ ಬಾಟ್ಲಿಗಳಿಂದ ಹಾನಿಕಾರಕ ವಸ್ತುಗಳು ಬಿಡುಗಡೆಯಾಗುತ್ತವೆ ಎಂಬ ತೀರ್ಮಾನಕ್ಕೆ ಬಂದಿದ್ದ ಅದು, ಔಷಧಿಗಳಿಗೆ ಇಂತಹ ಬಾಟ್ಲಿಗಳ ಬಳಕೆಯನ್ನು ನಿಷೇಧಿಸು ವಂತೆ ಸೂಚಿಸಿತ್ತು. ಔಷಧಿಗಳ ಗುಣಮಟ್ಟವನ್ನು ನಿರ್ಧರಿಸುವ ದೇಶದ ಅತ್ಯುನ್ನತ ಶಾಸನಬದ್ಧ ಪ್ರಾಧಿಕಾರವಾಗಿರುವ ಔಷಧಿಗಳ ತಾಂತ್ರಿಕ ಸಲಹಾ ಮಂಡಳಿ(ಡಿಟಿಎಬಿ) ಯು ಈ ಅಧ್ಯಯನ ವರದಿಗೆ ತನ್ನ ಸಹಮತವನ್ನು ವ್ಯಕ್ತಪಡಿಸಿತ್ತು ಎಂದು ಸಚಿವಾಲಯದ ಮೂಲವೊಂದು ತಿಳಿಸಿದೆ.

2016,ಮೇ ತಿಂಗಳಿನಲ್ಲಿ ಸಲ್ಲಿಸಲಾಗಿದ್ದ ಅಖಿಲ ಭಾರತ ನೈರ್ಮಲ್ಯ ಮತ್ತು ಜನಾರೋಗ್ಯ ಸಂಸ್ಥೆಯ ಈ ಅಧ್ಯಯನ ವರದಿಯು ಅದೇ ವರ್ಷದ ಮಾರ್ಚ್‌ನಲ್ಲಿ ಮಾಜಿ ಜೈವಿಕ ತಂತ್ರಜ್ಞಾನ ಕಾರ್ಯದರ್ಶಿ ಎಂ.ಕೆ.ಭಾನ್ ನೇತೃತ್ವದ ಇನ್ನೊಂದು ತಜ್ಞರ ಸಮಿತಿಯು ಸಲ್ಲಿಸಿದ್ದ ವರದಿಗೆ ವ್ಯತಿರಿಕ್ತವಾಗಿದೆ. ಪೆಟ್ ಬಾಟ್ಲಿಗಳಲ್ಲಿನ ಔಷಧಿಗಳು ಬಾಟ್ಲಿಯ ಕರಗುವಿಕೆಯಿಂದ ಕಲುಷಿತಗೊಳ್ಳುತ್ತವೆ ಎಂಬ ಬಗ್ಗೆ ಯಾವುದೇ ಸಾಕ್ಷಾಧಾರ ವಿಲ್ಲ ಎಂದು ಭಾನ್ ಸಮಿತಿಯು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ಸಲ್ಲಿಸಿದ್ದ ವರದಿಯಲ್ಲಿ ತಿಳಿಸಿತ್ತು.

ತಾನು ಪರೀಕ್ಷೆಗೊಳಪಡಿಸಿದ್ದ ಐದು ಔಷಧಿಗಳಲ್ಲಿ ಪ್ಲಾಸ್ಟಿಕ್ ಬಾಟ್ಲಿಯು ಕರಗಿ ಬಿಡುಗಡೆಯಾಗಿದ್ದ ನಾಲ್ಕು ಭಾರಲೋಹಗಳಾದ ಸೀಸ,ಆ್ಯಂಟಿಮನಿ,ಡಿಇಎಚ್‌ಪಿ ಮತ್ತು ಕ್ರೋಮಿಯಂ ಅಂಶಗಳು ಪತ್ತೆಯಾಗಿವೆ ಎಂದು ಮೇ,2016ರ ವರದಿಯು ತಿಳಿಸಿತ್ತು.

ಈ ಬಗ್ಗೆ ಅಧ್ಯಯನ ನಡೆಸುವ ಹೊಣೆಯನ್ನು ಐಸಿಎಂಆರ್ ಹೈದರಾಬಾದ್‌ನ ರಾಷ್ಟ್ರೀಯ ಪೋಷಕಾಂಶ ಸಂಸ್ಥೆಗೆ ಒಪ್ಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X