Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಂದ್ರಶೇಖರ್ ಆಝಾದ್ ಬಿಡುಗಡೆಗೆ ಆಗ್ರಹಿಸಿ...

ಚಂದ್ರಶೇಖರ್ ಆಝಾದ್ ಬಿಡುಗಡೆಗೆ ಆಗ್ರಹಿಸಿ ದಲಿತರ ಬೃಹತ್ ರ‍್ಯಾಲಿ

ದಿಲ್ಲಿಯಲ್ಲಿ ಭೀಮ್ ಆರ್ಮಿ ರಣಕಹಳೆ

ವಾರ್ತಾಭಾರತಿವಾರ್ತಾಭಾರತಿ18 Jun 2017 7:57 PM IST
share
ಚಂದ್ರಶೇಖರ್ ಆಝಾದ್ ಬಿಡುಗಡೆಗೆ ಆಗ್ರಹಿಸಿ ದಲಿತರ ಬೃಹತ್ ರ‍್ಯಾಲಿ

ಹೊಸದಿಲ್ಲಿ,ಜೂ.18: ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ಹಿಂಸಾಚಾರವನ್ನು ಖಂಡಿಸಿ ಹಾಗೂ ತಮ್ಮ ನಾಯಕ ಚಂದ್ರಶೇಖರ್ ಆಝಾದ್‌ರ ಬಿಡುಗಡೆಗೆ ಆಗ್ರಹಿಸಿ ಭೀಮ್ ಆರ್ಮಿಯ ಕಾರ್ಯಕರ್ತರು ರವಿವಾರ ರಾಜಧಾನಿ ದಿಲ್ಲಿಯಲ್ಲಿ ಬೃಹತ್ ರ‍್ಯಾಲಿ ನಡೆಸಿದರು.

 2500ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದ ಈ ರ‍್ಯಾಲಿಯಲ್ಲಿ ಚಂದ್ರಶೇಖರ್‌ರ ತಾಯಿ ಕಮಲೇಶ್ ದೇವಿ ಹಾಗೂ ಬಿಎಸ್ಪಿ ಪಕ್ಷದ ಸ್ಥಾಪಕ ದಿವಂಗತ ಕಾನ್ಸಿರಾಮ್‌ರ ಸಹೋದರ ಸ್ವರ್ಣ್ ಕೌರ್ ಮತ್ತಿತ್ತರು ಉಪಸ್ಥಿತರಿದ್ದರು.

  ಸಂಸತ್‌ಭವನ ರಸ್ತೆಯಿಂದ ಹಿಡಿದು ಹೊಸದಿಲ್ಲಿ ಮನ್ಸಿಪಲ್ ಮಂಡಳಿ ಸಭಾಭವನದವರೆಗಿನ ರಸ್ತೆಯವರೆಗೆ ನೀಲಿ ಬಣ್ಣದ ಸಮವಸ್ತ್ರ ಧರಿಸಿದ್ದ ಭೀಮ್‌ಸೇನಾ ಕಾರ್ಯಕರ್ತರ ಪ್ರವಾಹವೇ ಹರಿದುಬಂದಿತ್ತು. ಉ.ಪ್ರ., ರಾಜಸ್ಥಾನ, ಹರ್ಯಾಣ ಹಾಗೂ ಪಂಜಾಬ್ ರಾಜ್ಯಗಳಿಂದ ಆಗಮಿಸಿದ್ದ ದಲಿತ ಪ್ರತಿಭಟನಕಾರರು ಜೈಭೀಮ್ ಘೋಷಣೆಗಳನ್ನು ಕೂಗುತ್ತಿದ್ದರು.

  ರ‍್ಯಾಲಿ ಯಲ್ಲಿ ಭಾಷಣ ಮಾಡಿದ ಭೀಮ್‌ಆರ್ಮಿಯ ಎಲ್ಲಾ ಮುಖಂಡರು ಸಂಘಟನೆಯು ರಾಜಕೀಯದಿಂದ ದೂರವಿದ್ದುಕೊಂಡೇ, ದಲಿತ ಚಳವಳಿಯನ್ನು ಮುನ್ನಡೆಸುವಂತೆ ಕರೆ ನೀಡಿದರು.

ಬಿಎಸ್ಪಿ ಸ್ಥಾಪಕ ಕಾನ್ಶಿರಾಮ್ ಅವರ ಸಹೋದರಿ ಸ್ವರ್ಣ ಕೌರ್ ಮಾತನಾಡಿ, ‘‘ ನನ್ನ ಸಹೋದರನ ಶ್ರಮದ ಬಲದಿಂದಲೇ ಬಿಎಸ್ಪಿ ಅಧಿನಾಯಕಿ ಮಾಯಾವತಿ ತನ್ನ ಇಡೀ ರಾಜಕೀಯ ಬದುಕನ್ನು ರೂಪಿಸಿಕೊಂಡರು. ಭೀಮ್ ಆರ್ಮಿಯು ಯುವಕರೇ ಮುಂಚೂಣಿಯಲ್ಲಿರುವ ಸಂಘಟನೆಯಾಗಿದೆ. ಅನ್ಯಾಯವಾದಾಗಲೆಲ್ಲಾ ಯುವಜನರ ಸಿಡಿದೇಳಲಿದ್ದಾರೆ’’ ಎಂದರು.

  ಭೀಮ್ ಆರ್ಮಿಯ ಸ್ಥಾಪಕರಾದ ಚಂದ್ರಶೇಖರ್ ವಕೀಲರಾಗಿದ್ದು, ಸಹರಣ್‌ಪುರ್ ನಲ್ಲಿ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಘರ್ಷಣೆಯಲ್ಲಿ ಪಾತ್ರವಹಿಸಿದ್ದರೆಂಬ ಆರೋಪದಲ್ಲಿ ಅವರನ್ನು ಉತ್ತರಪ್ರದೇಶ ಪೊಲೀಸರು ಜೂನ್ 8ರಂದು ಹಿಮಾಚಲ ಪ್ರದೇಶದ ಡಾಲ್‌ಹೌಸಿ ಎಂಬಲ್ಲಿ ಬಂಧಿಸಿದ್ದರು.

ರ‍್ಯಾಲಿಯಲ್ಲಿ ಅವರ ಸಹೋದರರಾದ ಭಗತ್‌ಸಿಂಗ್ ಹಾಗೂ ಕಮಲ್ ಕಿಶೋರ್ ಕೂಡಾ ಉಪಸ್ಥಿತರಿದ್ದರು. ಮೇ 9ರಂದು ರಾಮ್‌ನಗರದಲ್ಲಿ ಹಾಜಿಗಠಿೂ ಮೇ 5ರಂದು ಸಹರಣ್‌ಪುರದಲ್ಲಿ ಸವರ್ಣೀಯರು ಹಾಗೂ ದಲಿತರ ನಡುವೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಸಹರಣ್‌ಪುರ್‌ನಲ್ಲಿ ಭೀಮ್ ಆರ್ಮಿಯ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಗಿದೆ.

  ‘‘ನನ್ನ ಪುತ್ರ ಬಿಡುಗಡೆಗೊಳ್ಳುವ ತನಕ ನಾನು ಪ್ರತಿಭಟನೆ ಹಾಗೂ ಧರಣಿ ನಡೆಸಲಿದ್ದೇನೆ ಮತ್ತು ಅನಿರ್ದಿಷ್ಟಾವಧಿ ನಿರಶನ ಕೂಡಾ ಕೈಗೊಳ್ಳುವೆ.ಯೋಗಿ ಆದಿತ್ಯನಾಥ್ ಅಧಿಕಾರಕ್ಕೇರಿದ ಬಳಿಕ ಹಿಂಸಾಚಾರ ಉಲ್ಬಣಿಸಿದ್ದು, ಉತ್ತರಪ್ರದೇಶ ಸರಕಾರಲ್ಲಾಗಲಿ ಅಥವಾ ನರೇಂದ್ರ ಮೋದಿ ಸರಕಾರದಿಂದ ಯಾವುದೇ ನ್ಯಾಯ ದೊರೆಯಬಹುದೆಂಬ ನಿರೀಕ್ಷೆ ನನಗಿಲ್ಲ’’.

ಕಮಲೇಶ್ ದೇವಿ

ಭೀಮ್ ಆರ್ಮಿ ಸ್ಥಾಪಕ ಚಂದ್ರಶೇಖರ್ ಆಝಾದ್‌ರ ತಾಯಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X