Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಾಕಿ ವರ್ಲ್ಡ್ ಲೀಗ್ ಸೆಮಿಫೈನಲ್ಸ್...

ಹಾಕಿ ವರ್ಲ್ಡ್ ಲೀಗ್ ಸೆಮಿಫೈನಲ್ಸ್ ಟೂರ್ನಿ: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಹರ್ಮನ್‌ಪ್ರೀತ್, ತಲ್ವಿಂದರ್, ಆಕಾಶ್‌ದೀಪ್ ತಲಾ 2 ಗೋಲು

ವಾರ್ತಾಭಾರತಿವಾರ್ತಾಭಾರತಿ18 Jun 2017 9:05 PM IST
share
ಹಾಕಿ ವರ್ಲ್ಡ್ ಲೀಗ್ ಸೆಮಿಫೈನಲ್ಸ್ ಟೂರ್ನಿ: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಲಂಡನ್, ಜೂ.18: ಹರ್ಮನ್‌ಪ್ರೀತ್ ಸಿಂಗ್, ತಲ್ವಿಂದರ್ ಸಿಂಗ್ ಹಾಗೂ ಆಕಾಶ್‌ದೀಪ್ ಸಿಂಗ್ ಬಾರಿಸಿದ ತಲಾ ಎರಡು ಗೋಲುಗಳ ನೆರವಿನಿಂದ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಹಾಕಿ ವರ್ಲ್ಡ್ ಲೀಗ್ ಸೆಮಿಫೈನಲ್ಸ್ ಟೂರ್ನಿಯ ತನ್ನ ಮೂರನೆ ಪಂದ್ಯದಲ್ಲಿ 7-1 ಅಂತರದಿಂದ ಜಯ ಸಾಧಿಸಿದೆ.

ರವಿವಾರ ಏಕಪಕ್ಷೀಯವಾಗಿ ನಡೆದ ಪಂದ್ಯದಲ್ಲಿ ಪಾಕಿಸ್ತಾನದ ಪರ ಉಮರ್ ಬಟ್ 57ನೆ ನಿಮಿಷದಲ್ಲಿ ಸಮಾಧಾನಕರ ಗೋಲು ಬಾರಿಸಿದ್ದರು. ಈಗಾಗಲೇ ಮೊದಲೆರಡು ಪಂದ್ಯಗಳಲ್ಲಿ ಸ್ಕಾಟ್ಲೆಂಡ್(4-1) ಹಾಗೂ ಕೆನಡಾ(3-0) ತಂಡವನ್ನು ಮಣಿಸಿದ್ದ ಭಾರತ ತಂಡ ‘ಹ್ಯಾಟ್ರಿಕ್’ ಗೆಲುವು ಸಾಧಿಸಿದ್ದು, ‘ಬಿ’ ಗುಂಪಿನಲ್ಲಿ 3 ಪಂದ್ಯಗಳಲ್ಲಿ 9 ಅಂಕ ಗಳಿಸಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.

ಹಾಲೆಂಡ್ ವಿರುದ್ಧ ಇನ್ನೊಂದು ಪಂದ್ಯ ಬಾಕಿ ಇರುವಾಗಲೇ ಭಾರತ ಟೂರ್ನಮೆಂಟ್‌ನಲ್ಲಿ ಕ್ವಾರ್ಟರ್ ಫೈನಲ್ ಸ್ಥಾನವನ್ನು ದೃಢಪಡಿಸಿದೆ. ಪ್ರಚಂಡ ಪ್ರದರ್ಶನ ನೀಡಿದ ಭಾರತದ ಪರ ಹರ್ಮನ್‌ಪ್ರೀತ್(13ನೆ, 33ನೆ ನಿಮಿಷ),ತಲ್ವಿಂದರ್ ಸಿಂಗ್(21, 24ನೆ ನಿಮಿಷ) ಹಾಗೂ ಆಕಾಶ್‌ದೀಪ್ ಸಿಂಗ್(47ನೆ, 59ನೆ ನಿಮಿಷ) ಅವಳಿ ಗೋಲು ಬಾರಿಸಿ ಭರ್ಜರಿ ಗೆಲುವಿಗೆ ದೊಡ್ಡ ಕಾಣಿಕೆ ನೀಡಿದರು. 48ನೆ ನಿಮಿಷದಲ್ಲಿ ಪ್ರದೀಪ್ ಮೊರ್ ಏಕೈಕ ಗೋಲು ಬಾರಿಸಿ ತಂಡದ ಗೆಲುವಿನ ಅಂತರವನ್ನು ಹಿಗ್ಗಿಸಿದರು.

ಭಾರತ ಹರ್ಮನ್‌ಪ್ರೀತ್ ಹಾಗೂ ತಲ್ವಿಂದರ್ ಸಿಂಗ್ ಸಾಹಸದ ನೆರವಿನಿಂದ ಮೊದಲಾರ್ಧದಲ್ಲಿ 3-0 ಮುನ್ನಡೆ ಸಾಧಿಸಿತ್ತು. ದ್ವಿತೀಯಾರ್ಧದಲ್ಲಿ ಪಾಕ್ ಮೇಲೆ ಸವಾರಿ ಮಾಡಿದ ಭಾರತ ಇನ್ನೂ ನಾಲ್ಕು ಗೋಲುಗಳನ್ನು ಬಾರಿಸಿತು. ಭಾರತ 2016ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್‌ನ್ನು ಕೊನೆಯ ಬಾರಿ ಮುಖಾಮುಖಿಯಾಗಿದ್ದವು. ಪಾಕ್ ತಂಡ ಭಾರತ ವಿರುದ್ಧ ಪಂದ್ಯಕ್ಕೆ ಮೊದಲು ಹಾಲೆಂಡ್(0-4) ಹಾಗೂ ಕೆನಡಾ(0-6) ವಿರುದ್ಧ ಹೀನಾಯವಾಗಿ ಸೋತಿತ್ತು.

ಉಭಯ ತಂಡಗಳು 168 ಬಾರಿ ಮುಖಾಮುಖಿಯಾಗಿದ್ದು, ಭಾರತ 55ರಲ್ಲಿ ಜಯ ಸಾಧಿಸಿದ್ದರೆ, ಪಾಕಿಸ್ತಾನ 82 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. 30 ಪಂದ್ಯಗಳು ಡ್ರಾಗೊಂಡಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X