Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೂನ್ 22ರಂದು ಅಂತಿಮ ನಿರ್ಧಾರ:...

ಜೂನ್ 22ರಂದು ಅಂತಿಮ ನಿರ್ಧಾರ: ಕಾಂಗ್ರೆಸ್

ರಾಮ್‌ನಾಥ್ ಕೋವಿಂದ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ19 Jun 2017 7:56 PM IST
share
ಜೂನ್ 22ರಂದು ಅಂತಿಮ ನಿರ್ಧಾರ: ಕಾಂಗ್ರೆಸ್

ಹೊಸದಿಲ್ಲಿ, ಜೂ.19: ರಾಷ್ಟ್ರಪತಿ ಹುದ್ದೆಗೆ ದಲಿತ ಮುಖಂಡ ರಾಮ್‌ನಾಥ್ ಕೋವಿಂದ್ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ವಿರೋಧ ಪಕ್ಷಗಳು ಎಚ್ಚರದ ಪ್ರತಿಕ್ರಿಯೆ ನೀಡಿವೆ.

 *22ರಂದು ಅಂತಿಮ ನಿರ್ಧಾರ- ಕಾಂಗ್ರೆಸ್: ಕೋವಿಂದ್ ಅವರ ಆಯ್ಕೆಯ ಬಗ್ಗೆ ಪಕ್ಷ ತಕ್ಷಣದ ಪ್ರತಿಕ್ರಿಯೆ ನೀಡುವುದಿಲ್ಲ. ಬಿಜೆಪಿ ಏಕಪ್ಷಕೀಯ ನಿರ್ಧಾರ ಕೈಗೊಂಡಿದೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಜೂನ್ 22ರಂದು ಪ್ರಮುಖ ವಿಪಕ್ಷ ನಾಯಕರ ಸಭೆ ನಡೆಯಲಿದ್ದು ಆ ಬಳಿಕ ತಮ್ಮ ಅಂತಿಮ ನಿರ್ಧಾರ ತಿಳಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಝಾದ್ ತಿಳಿಸಿದ್ದಾರೆ.

 *ಪ್ರಣವ್, ಸುಷ್ಮಾ, ಅಡ್ವಾಣಿಯಂತಹ ಘನತೆಯವರು ಸೂಕ್ತ- ಟಿಎಂಸಿ: ರಾಷ್ಟ್ರಪತಿ ಹುದ್ದೆಗೆ ಕೋವಿಂದ್ ಅಸಮರ್ಥರು ಎಂದು ತನ್ನ ಭಾವನೆಯಲ್ಲ. ಆದರೆ ಪ್ರಣವ್ ಮುಖರ್ಜಿ, ಸುಷ್ಮಾ ಸ್ವರಾಜ್, ಎಲ್.ಕೆ.ಅಡ್ವಾಣಿ ಅವಂತಹ ಘನತೆಯ ವ್ಯಕ್ತಿಗಳು ಈ ಹುದ್ದೆಗೆ ಸೂಕ್ತರು ಎಂದು ಪ.ಬಂಗಾಲ ಮುಖ್ಯಮಂತ್ರಿ ಮತ್ತು ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
 ದೇಶದಲ್ಲಿ ಬಹಳಷ್ಟು ಉನ್ನತ ದಲಿತ ಮುಖಂಡರಿದ್ದಾರೆ. ಯಾರನ್ನೇ ಆಗಲಿ, ಬೆಂಬಲಿಸುವ ಮೊದಲು ಅವರ ಬಗ್ಗೆ ನಮಗೆ ತಿಳಿದಿರಬೇಕು. ಅದೇನಿದ್ದರೂ ಜೂನ್ 22ರಂದು ವಿಪಕ್ಷಗಳು ಸಭೆ ನಡೆಸಲಿದ್ದು ಆ ಬಳಿಕ ನಮ್ಮ ನಿರ್ಧಾರ ತಿಳಿಸಲಿದ್ದೇವೆ ಎಂದವರು ಹೇಳಿದ್ದಾರೆ.

   * ಸಂಪೂರ್ಣ ಬೆಂಬಲ- ಟಿಡಿಪಿ: ಕೋವಿಂದರಿಗೆ ತೆಲುಗು ದೇಶಂನ ಸಂಪೂರ್ಣ ಬೆಂಬಲವಿದೆ. ಭಾರತದ ರಾಷ್ಟ್ರಪತಿ ಹುದ್ದೆಗೆ ಅವರೋರ್ವ ಸೂಕ್ತ ವ್ಯಕ್ತಿ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

 * ಕೆಲ ದಿನಗಳಲ್ಲಿ ನಿರ್ಧಾರ- ಶಿವಸೇನೆ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶಿವಸೇನೆಯ ಅಧ್ಯಕ್ಷ ಉದ್ಧವ್ ಠಾಕ್ರೆಯವರಿಗೆ ದೂರವಾಣಿ ಕರೆ ಮಾಡಿ ಕೋವಿಂದ್ ಅವರನ್ನು ಬೆಂಬಲಿಸುವಂತೆ ಕೋರಿದ್ದಾರೆ. ಶೀಘ್ರ ಪಕ್ಷದ ಸಭೆ ನಡೆಸಿ ನಿರ್ಧಾರ ತಿಳಿಸಲಾಗುವುದು ಎಂದು ಶಿವಸೇನೆ ತಿಳಿಸಿದೆ.

* ವಿಪಕ್ಷಗಳು ದಲಿತ ಅಭ್ಯರ್ಥಿ ಕಣಕ್ಕಿಳಿಸದಿದ್ದರೆ ಬೆಂಬಲ- ಬಿಎಸ್ಪಿ: ಕೋವಿಂದ್ ದಲಿತ ಸಮುದಾಯದವರಾದ ಕಾರಣ ಅವರ ಬಗ್ಗೆ ನಮ್ಮ ಪ್ರತಿಕ್ರಿಯೆ ಧನಾತ್ಮಕವಾಗಿದೆ. ವಿಪಕ್ಷಗಳೂ ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ನಾವು ಅವರನ್ನು ಬೆಂಬಲಿಸಲಿದ್ದೇವೆ. ಆದರೆ ರಾಜಕೀಯ ಹಿನ್ನೆಲೆ ಇರದ ದಲಿತ ಮುಖಂಡರನ್ನು ಈ ಹುದ್ದೆಗೆ ಆಯ್ಕೆ ಮಾಡಬೇಕಿತ್ತು ಎಂದು ಬಿಎಸ್ಪಿ ನಾಯಕಿ ಮಾಯಾವತಿ ಪ್ರತಿಕ್ರಿಯಿಸಿದ್ದಾರೆ.

  * ಸಿಪಿಐ(ಎಂ) ವಿರೋಧ: ಜೂನ್ 22ರಂದು ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಿಳಿಸಿದ್ದಾರೆ. ಇದೊಂದು ರಾಜಕೀಯ ಸಂಘರ್ಷವಾಗಿದೆ. ಮೂವರು ಸದಸ್ಯರ ಬಿಜೆಪಿ ಸಮಿತಿ ನಮ್ಮನ್ನು ಭೇಟಿ ಮಾಡಿ ಚರ್ಚಿಸಿದಾಗ ಯಾವುದೇ ಅಭ್ಯರ್ಥಿಯ ಹೆಸರನ್ನು ಸೂಚಿಸಿರಲಿಲ್ಲ. ಆದರೆ ಇದೀಗ ಏಕಾಏಕಿ ಅಭ್ಯರ್ಥಿಯನ್ನು ಘೋಷಿಸಿದ್ದಾರೆ. ಆದ್ದರಿಂದ ಈ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದವರು ತಿಳಿಸಿದ್ದಾರೆ.

ವೈಯಕ್ತಿಕವಾಗಿ ಹರ್ಷವಾಗಿದೆ- ನಿತೀಶ್ ಕುಮಾರ್: ಕೋವಿಂದ್ ಅವರನ್ನು ಬೆಂಬಲಿಸುವ ಬಗ್ಗೆ ಜೂನ್ 22ರಂದು ನಡೆಯುವ ವಿಪಕ್ಷಗಳ ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಜೆಡಿ(ಯು) ತಿಳಿಸಿದೆ.
ಅದಾಗ್ಯೂ, ಕೋವಿಂದ್ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ವೈಯಕ್ತಿಕವಾಗಿ ತನಗೆ ಖುಷಿಯಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಬಿಹಾರದ ರಾಜ್ಯಪಾಲರಾಗಿ ಅವರು ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದಾರೆ. ಪಕ್ಷಪಾತವಿಲ್ಲದೆ, ರಾಜ್ಯ ಸರಕಾರದೊಡನೆ ಉತ್ತಮ ಬಾಂಧವ್ಯ ಹೊಂದಿದ್ದರು ಎಂದವರು ಹೇಳಿದ್ದಾರೆ. ಆದರೆ ಬೆಂಬಲಿಸುವ ಬಗ್ಗೆ ಈಗೇನೂ ಹೇಳಲಾಗದು ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X