Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶ ಪ್ರವಾಸ: ಜು.1ರಿಂದ ನಿರ್ಗಮನ...

ವಿದೇಶ ಪ್ರವಾಸ: ಜು.1ರಿಂದ ನಿರ್ಗಮನ ಪತ್ರದ ಅವಶ್ಯಕತೆ ಇಲ್ಲ

ವಾರ್ತಾಭಾರತಿವಾರ್ತಾಭಾರತಿ19 Jun 2017 11:08 PM IST
share
ವಿದೇಶ ಪ್ರವಾಸ: ಜು.1ರಿಂದ ನಿರ್ಗಮನ ಪತ್ರದ ಅವಶ್ಯಕತೆ ಇಲ್ಲ

ಹೊಸದಿಲ್ಲಿ, ಜೂ. 19: ವಿದೇಶಕ್ಕೆ ಪ್ರಯಾಣ ಬೆಳೆಸುವ ಭಾರತೀಯರಿಗೆ ಮುಂದಿನ ತಿಂಗಳಿನಿಂದ ನಿರ್ಗಮನ ಪತ್ರ ಭರ್ತಿ ಮಾಡುವ ಅವಶ್ಯಕತೆ ಇಲ್ಲ. ಆದರೂ, ರೈಲು ಮಾರ್ಗ, ಸಮುದ್ರ ಬಂದರು ಹಾಗೂ ಭೂಮಾರ್ಗವಾಗಿ ಚೆಕ್‌ಪೋಸ್ಟ್‌ಗಳನ್ನು ದಾಟುವವರು ಗಡಿ ದಾಟುವ ಪತ್ರವನ್ನು ಭರ್ತಿ ಮಾಡಬೇಕಿದೆ.

 ಜು. 1ರಿಂದ ಭಾರತೀಯರು ನಿರ್ಗಮನ ಪತ್ರವನ್ನು ಭರ್ತಿ ಮಾಡುವ ಪದ್ಧತಿಯನ್ನು ಎಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಸಂಪೂರ್ಣವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ. ಭಾರತೀಯರು ಸರಾಗವಾಗಿ ವಿದೇಶ ಪ್ರಯಾಣ ಬೆಳೆಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಸದ್ಯ ವಿದೇಶಗಳಿಗೆ ಪ್ರಯಾಣ ಬೆಳೆಸುವ ಭಾರತೀಯರು ತಮ್ಮ ಹೆಸರು, ಜನ್ಮ ದಿನಾಂಕ, ಪಾಸ್‌ಪೋರ್ಟ್ ಸಂಖ್ಯೆ, ಭಾರತದಲ್ಲಿನ ವಿಳಾಸ, ವಿಮಾನ ಸಂಖ್ಯೆ ಹಾಗೂ ಪ್ರಯಾಣದ ದಿನಾಂಕವನ್ನು ನಿರ್ಗಮನ ಪತ್ರದಲ್ಲಿ ಭರ್ತಿ ಮಾಡಬೇಕಾಗಿದೆ.

ಪ್ರಯಾಣಿಕರ ಇದೇ ವಿವರಗಳು ಇತರ ಮೂಲಗಳಿಂದ ಲಭ್ಯವಿರುತ್ತದೆ ಎಂದು ನಿರ್ಗಮನ ಪತ್ರ ಭರ್ತಿ ಮಾಡುವ ಪದ್ಧತಿಯನ್ನು ರದ್ದುಗೊಳಿಸಿರುವುದರ ಹಿಂದಿನ ಕಾರಣವನ್ನು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಈ ನಿರ್ಧಾರದಿಂದ ಹಲವಾರು ವಿದೇಶಿ ಪ್ರಯಾಣಿಗರ ವಲಸೆ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸುವ ವೇಳೆ ತಗ್ಗಲಿದ್ದು, ವಿಮಾನ ನಿಲ್ದಾಣ ಹಾಗೂ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ದೊಡ್ಡ ಮಟ್ಟದ ಪ್ರಯಾಣಿಕರಿಗೆ ಸಹಕರಿಸಲು ಅನುಕೂಲವಾಗುತ್ತದೆ. ಭಾರತಕ್ಕೆ ಆಗಮಿಸುವ ಸಂದರ್ಭದಲ್ಲಿ ಆಗಮನ ಪತ್ರವನ್ನು ಭರ್ತಿ ಮಾಡುವ ಪದ್ಧತಿಯನ್ನು ಈ ಹಿಂದೆಯೇ ಕೈಬಿಡಲಾಗಿದೆ.

ಅಂತಾರಾಷ್ಟ್ರೀಯ ಹಾಗೂ ನಾಗರಿಕ ವಿಮಾನ ಪ್ರಯಾಣಿಕರ ಅನುಕೂಲಕ್ಕಾಗಿ ವಿಮಾನ ಪ್ರಾಧಿಕಾರದ ಅಧಿಕಾರಿಗಳು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಕಳೆದ ವರ್ಷ ಕೇಂದ್ರ ಸುಂಕದ ಅಧಿಕಾರಿಗಳು ಒಂದು ವೇಳೆ ಭಾರತೀಯರು ಸುಂಕ ರಹಿತ ವಸ್ತುಗಳನ್ನು ವಿದೇಶದಿಂದ ತಂದಾಗ, ಅದನ್ನು ಘೋಷಿಸಿಕೊಳ್ಳುವ ಪದ್ಧತಿಯನ್ನು ಕೈಬಿಟ್ಟಿದ್ದರು.

ನಿರ್ಬಂಧಿತ ಹಾಗೂ ಸುಂಕಸಹಿತ ವಸುತಿಗಳನ್ನು ಹೊಂದಿರುವವರು ಮಾತ್ರ ಭಾರತೀಯ ಸುಂಕ ಘೋಷಣಾ ಪತ್ರವನ್ನು ಭರ್ತಿ ಮಾಡಬೇಕಿದೆ. ಈ ಮುನ್ನ ಈ ಪದ್ಧತಿ ದೇಶವನ್ನು ಪ್ರವೇಶಿಸುವ ಎಲ್ಲರಿಗೂ ಅನ್ವಯವಾಗುತ್ತಿತ್ತು.

  ಇದರ ಬೆನ್ನಿಗೇ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯವರು ದೇಶದಲ್ಲಿರುವ ನಾಗರಿಕ ವಿಮಾನ ನಿಲ್ದಾಣಗಳಲ್ಲಿ ಸ್ವದೇಶಿ ಪ್ರಯಾಣಿಕರ ಕೈ ಸರಕುಗಳಿಗೆ ಮುದ್ರೆ ಹಾಕುವ ಪದ್ಧತಿಯನ್ನು ಕೈಬಿಟ್ಟಿತ್ತು . ಈ ಪದ್ಧತಿ ದಿಲ್ಲಿ, ಮುಂಬೈ, ಕೊಚ್ಚಿ, ಬೆಂಗಳೂರು, ಹೈದರಾಬಾದ್, ಕೋಲ್ಕತಾ ಮತ್ತು ಅಹಮದಾಬಾದ್ ಸೇರಿದಂತೆ ದೇಶದ ಕೆಲವು ವಾಣಿಜ್ಯ ವಿಮಾನ ನಿಲ್ದಾಣಗಳಲ್ಲಿ ಈಗಾಗಲೇ ಸ್ಥಗಿತಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X