Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಏಕದಿನ ರ್ಯಾಂಕಿಂಗ್: ಪಾಕ್‌ಗೆ...

ಐಸಿಸಿ ಏಕದಿನ ರ್ಯಾಂಕಿಂಗ್: ಪಾಕ್‌ಗೆ ಭಡ್ತಿ

ವಾರ್ತಾಭಾರತಿವಾರ್ತಾಭಾರತಿ19 Jun 2017 11:45 PM IST
share
ಐಸಿಸಿ ಏಕದಿನ ರ್ಯಾಂಕಿಂಗ್: ಪಾಕ್‌ಗೆ ಭಡ್ತಿ

ದುಬೈ, ಜೂ.19: ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತವನ್ನು ಹೀನಾಯವಾಗಿ ಸೋಲಿಸಿದ್ದ ಪಾಕಿಸ್ತಾನ ತಂಡ ಐಸಿಸಿ ಏಕದಿನ ಟೀಮ್ ರ್ಯಾಂಕಿಂಗ್‌ನಲ್ಲಿ ಎರಡು ಸ್ಥಾನ ಭಡ್ತಿ ಪಡೆದು ಆರನೆ ಸ್ಥಾನಕ್ಕೆ ತಲುಪಿದೆ.

ರನ್ನರ್-ಅಪ್ ಭಾರತ ತಂಡ ಮೂರನೆ ಸ್ಥಾನ ಉಳಿಸಿಕೊಂಡಿದೆ.
ಐಸಿಸಿ ರ್ಯಾಂಕಿಂಗ್‌ನಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶವನ್ನು ಹಿಂದಿಕ್ಕಿರುವ ಪಾಕಿಸ್ತಾನ ತಂಡ 2019ರ ವಿಶ್ವಕಪ್‌ನಲ್ಲಿ ನೇರ ಪ್ರವೇಶ ಗಿಟ್ಟಿಸಿಕೊಳ್ಳುವತ್ತ ಹೆಜ್ಜೆ ಇಟ್ಟಿದೆ. ಆತಿಥೇಯ ಇಂಗ್ಲೆಂಡ್ ಸಹಿತ ಏಳು ತಂಡಗಳು ಸೆಪ್ಟಂಬರ್ 30ರಂದು ವಿಶ್ವಕಪ್‌ಗೆ ನೇರ ಪ್ರವೇಶ ಪಡೆಯಲಿವೆ.
 ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಗರಿಷ್ಠ ರ್ಯಾಂಕಿನ ಭಾರತ ಹಾಗೂ ಇಂಗ್ಲೆಂಡ್‌ನ ವಿರುದ್ಧ ಜಯ ಸಾಧಿಸಿರುವ ಪಾಕ್ ನಾಲ್ಕಂಕವನ್ನು ಗಳಿಸಿದ್ದು,ಪಾಕ್‌ನ ಒಟ್ಟು ಅಂಕ 95ಕ್ಕೆ ತಲುಪಿದೆ.

ದಕ್ಷಿಣ ಆಫ್ರಿಕ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದು, ರ್ಯಾಂಕಿಂಗ್‌ನಲ್ಲಿ ಬೇರ್ಯಾವುದೇ ಬದಲಾವಣೆಯಾಗಿಲ್ಲ. ಭಾರತ, ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ತಲಾ ಒಂದು ಅಂಕ ಕಳೆದುಕೊಂಡಿದೆ.

 ಏಕದಿನ ಆಟಗಾರರ ರ್ಯಾಂಕಿಂಗ್‌ನಲ್ಲಿ ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮ ಮೂರು ಸ್ಥಾನ ಭಡ್ತಿ ಪಡೆದು 10ನೆ ಸ್ಥಾನಕ್ಕೇರಿದ್ದಾರೆ. ಬೌಲಿಂಗ್ ರ್ಯಾಂಕಿಂಗ್‌ನಲ್ಲಿ ಭುವನೇಶ್ವರ ಕುಮಾರ್(19ನೆ ಸ್ಥಾನ) ಹಾಗೂ ಜಸ್‌ಪ್ರಿತ್ ಬುಮ್ರಾ(24) ಕ್ರಮವಾಗಿ 4 ಹಾಗೂ 19 ಸ್ಥಾನ ಭಡ್ತಿ ಪಡೆದಿದ್ದಾರೆ.
ಪಾಕ್‌ನ ವೇಗದ ಬೌಲರ್ ಹಸನ್ ಅಲಿ ಹಾಗೂ ಆರಂಭಿಕ ಆಟಗಾರ ಫಖಾರ್ ಝಮಾನ್ ರ್ಯಾಂಕಿಂಗ್‌ನಲ್ಲಿ ಭಾರೀ ಪ್ರಗತಿ ಸಾಧಿಸಿದ್ದಾರೆ. ಟೂರ್ನಿಯಲ್ಲಿ ಒಟ್ಟು 13 ವಿಕೆಟ್‌ಗಳನ್ನು ಪಡೆದು ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಅಲಿ 12 ಸ್ಥಾನ ಮೇಲಕ್ಕೇರಿ 7ನೆ ಸ್ಥಾನಕ್ಕೆ ತಲುಪಿದ್ದಾರೆ.

ಫೈನಲ್ ಪಂದ್ಯದಲ್ಲಿ 114 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದ್ದ ಫಖಾರ್ ಝಮಾನ್ ಇದೇ ಮೊದಲ ಬಾರಿ ಅಗ್ರ-100ಕ್ಕೆ ಪ್ರವೇಶಿಸಿದ್ದಾರೆ. ನಾಲ್ಕನೆ ಏಕದಿನ ಪಂದ್ಯವನ್ನಾಡಿದ ಝಮಾನ್ 58 ಸ್ಥಾನ ಭಡ್ತಿ ಪಡೆದು 97ನೆ ಸ್ಥಾನಕ್ಕೇರಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X