Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಶಿವಮೊಗ್ಗ: ಗಾಂಜಾ ದಂಧೆ ವಿರುದ್ಧ ಪೊಲೀಸ್...

ಶಿವಮೊಗ್ಗ: ಗಾಂಜಾ ದಂಧೆ ವಿರುದ್ಧ ಪೊಲೀಸ್ ಇಲಾಖೆ ಸಮರ

ಬಿ. ರೇಣುಕೇಶ್ಬಿ. ರೇಣುಕೇಶ್19 Jun 2017 11:59 PM IST
share
ಶಿವಮೊಗ್ಗ: ಗಾಂಜಾ ದಂಧೆ ವಿರುದ್ಧ ಪೊಲೀಸ್ ಇಲಾಖೆ ಸಮರ

ಶಿವಮೊಗ್ಗ ನಗರದಲ್ಲಿ ವಿಪರೀತ ಮಟ್ಟಕ್ಕೆ ತಲುಪಿರುವ ಗಾಂಜಾ ಮಾರಾಟ ದಂಧೆಯ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಅಕ್ಷರಶಃ ಸಮರ ಸಾರಿದೆ! ಇತ್ತೀಚೆಗಷ್ಟೆ ಗಾಂಜಾ ಮಾರಾಟ ಅಡ್ಡೆಗಳ ಮೇಲೆ ದಿಢೀರ್ ದಾಳಿ ನಡೆಸಿ, 24 ಜನರನ್ನು ಬಂಧಿಸುವ ಮೂಲಕ ಗಾಂಜಾ ದಂಧೆಕೋರರ ನಿದ್ದೆಗೆಡುವಂತೆ ಮಾಡಿದ್ದ ಪೊಲೀಸರು, ಈಗ ಗಾಂಜಾದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಗಾಂಜಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಇಲಾಖೆಯು ಕರಪತ್ರ ಮುದ್ರಿಸಿ ಸಾರ್ವಜನಿಕರಿಗೆ ವಿತರಣೆ ಮಾಡುತ್ತಿದೆ. ಹೊಟೇಲ್, ಅಂಗಡಿ-ಮುಂಗಟ್ಟು, ಬಸ್ ನಿಲ್ದಾಣ, ಆಟೊ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಈ ಕರಪತ್ರವನ್ನು ಪೊಲೀಸರೇ ಖುದ್ದು ಅಂಟಿಸುವುದರ ಜೊತೆಗೆ ಸಾರ್ವಜನಿಕರಿಗೆ ವಿತರಣೆ ಮಾಡುತ್ತಿದ್ದಾರೆ.

ಸಾಮಾಜಿಕ ಸಂಪರ್ಕ ಜಾಲತಾಣಗಳ ಮೂಲಕವೂ ಪೊಲೀಸ್ ಇಲಾಖೆ ಕರಪತ್ರ ರವಾನಿಸುತ್ತಿದೆ. ವ್ಯಾಟ್ಸ್‌ಆ್ಯಪ್, ಫೇಸ್‌ಬುಕ್ ಮತ್ತಿತರ ಸಂಪರ್ಕ ತಾಣಗಳಲ್ಲಿ ಕರಪತ್ರಗಳು ದೊಡ್ಡ ಮಟ್ಟದಲ್ಲಿ ಹರಿದಾಡುತ್ತಿವೆ.

ನಗರದಲ್ಲಿ ಅವ್ಯಾಹತವಾಗಿ ನಡೆದುಕೊಂಡು ಬಂದಿದ್ದ ಗಾಂಜಾ ಮಾರಾಟ ದಂಧೆಗೆ ಕಳೆದ ಕೆಲ ದಿನಗಳಿಂದ ಭಾರೀ ದೊಡ್ಡ ಪ್ರಮಾಣದಲ್ಲಿ ಕಡಿವಾಣ ಬೀಳುವಂತಾಗಿದೆ. ದಂಧೆಯಲ್ಲಿ ತೊಡಗಿದ್ದ ಕೆಲವರು ಬಂಧನ ಭೀತಿಯಿಂದ ತಲೆಮರೆಸಿಕೊಳ್ಳಲಾರಂಭಿಸಿದ್ದಾರೆಂಬ ಮಾಹಿತಿಯನ್ನು ಪೊಲೀಸ್ ಇಲಾಖೆಯ ಮೂಲಗಳು ಹೇಳುತ್ತವೆ.

ಅವ್ಯಾಹತ

ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಗಾಂಜಾ ಮಾರಾಟ ದಂಧೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿತ್ತು. ದೊಡ್ಡ ಜಾಲವೇ ಕಾರ್ಯಾನಿರ್ವಹಣೆ ಮಾಡುತ್ತಿದ್ದ ಶಂಕೆ ವ್ಯಕ್ತವಾಗಿತ್ತು. ಯುವಕರು, ಶಾಲಾ - ಕಾಲೇಜು ವಿದ್ಯಾರ್ಥಿಗಳು ಭಾರೀ ದೊಡ್ಡ ಸಂಖ್ಯೆಯಲ್ಲಿ ಗಾಂಜಾ ದುಶ್ಚಟಕ್ಕೆ ಬಲಿಯಾಗಿದ್ದರು. ನಗರದ ಕೆಲ ಬಡಾವಣೆಗಳಲ್ಲಿ ಹೋಟೆಲ್, ಅಂಗಡಿಗಳಲ್ಲಿಯೂ ಗಾಂಜಾ ಪೊಟ್ಟಣಗಳ ಮಾರಾಟ ನಡೆಯುತ್ತಿದ್ದ ಆರೋಪ ಕೇಳಿಬಂದಿತ್ತು. ಉಳಿದಂತೆ ದಂಧೆಕೋರರೇ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸೆಳೆದು, ಗಾಂಜಾ ಮಾರಾಟ ನಡೆಸುತ್ತಿದ್ದರು. ಈ ದಂಧೆ ಅತ್ಯಂತ ವ್ಯವಸ್ಥಿತವಾಗಿ, ಗುಪ್ತವಾಗಿ ನಡೆದುಕೊಂಡು ಬಂದಿತ್ತು. ಇತ್ತೀಚೆಗೆ ಪೊಲೀಸ್ ಇಲಾಖೆಯ ವಿಶೇಷ ತಂಡಗಳು ನಗರದ ವಿವಿಧೆಡೆ ಗಾಂಜಾ ಮಾರಾಟ ಅಡ್ಡೆಗಳ ಮೇಲೆ ಮಿಂಚಿನ ಕಾರ್ಯಾಚರಣೆ ನಡೆಸಿ, 24 ಜನರ ಸೆರೆ ಹಿಡಿದಿತ್ತು. ಈ ದಂಧೆಯ ವಿರುದ್ಧ ಸಮರ ಸಾರಿತ್ತು.

ಬಡಾವಣೆಗಳಲ್ಲಿ ಸಭೆ

ಬಡಾವಣೆಗಳಲ್ಲಿ ಸಾರ್ವಜನಿಕ ಸಭೆೆ ನಡೆಸಿ, ‘‘ನಿಮ್ಮ ಪ್ರದೇಶದ ಸುತ್ತಮುತ್ತ ಗಾಂಜಾ ಮಾರಾಟ ನಡೆಯುತ್ತಿದ್ದರೆ, ಇದರ ಬಗ್ಗೆ ಮಾಹಿತಿ ನೀಡಿ. ನಿಮ್ಮ ಹೆಸರನ್ನು ಗೌಪ್ಯವಾಗಿಡಲಾಗುವುದು’’ ಎಂದು ಪೊಲೀಸ್ ಅಧಿಕಾರಿಗಳು ಮನವಿ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆಯ ಜನಹಿತವಾದ ಈ ಕ್ರಮ ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿದ್ದು, ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಮ್ಮ ವ್ಯಾಪ್ತಿಯಲ್ಲಿ ಗುಪ್ತವಾಗಿ ನಡೆಯುತ್ತಿದ್ದ ಗಾಂಜಾ ದಂಧೆಯ ಬಗ್ಗೆ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮಾಹಿತಿ ರವಾನಿಸಲಾರಂಭಿಸಿದ್ದಾರೆ.

ಏನಿದೆ ಕರಪತ್ರದಲ್ಲಿ?

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆಯವರು ಮನವಿ ಮಾಡಿಕೊಂಡಿರುವ ಕರಪತ್ರದಲ್ಲಿ ‘‘ಶಿವಮೊಗ್ಗ ನಗರದಲ್ಲಿ ಗಾಂಜಾ ನಿಯಂತ್ರಣದ ಬಗ್ಗೆ ಕರಪತ್ರ ಆರಂಭಿಸಿದೆ. ನಿಮ್ಮ ಸುತ್ತಮುತ್ತಲಿನಲ್ಲಿ ಯಾರಾದರೂ ಗಾಂಜಾ ಬೆಳೆಯುವುದು, ಮಾರಾಟ ಮಾಡುವುದು ಅಥವಾ ಸೇವನೆ ಮಾಡುವುದು ಕಂಡುಬಂದಲ್ಲಿ ತಕ್ಷಣವೇ ಶಿವಮೊಗ್ಗದ ಪೊಲೀಸ್ ಅಧೀಕ್ಷಕರಿಗೆ ಈ ಕೆಳಕಂಡ ದೂರವಾಣಿ ಮೂಲಕ ಅಥವಾ ವ್ಯಾಟ್ಸ್‌ಆ್ಯಪ್ ಮುಖಾಂತರ ತಿಳಿಸಬೇಕಾಗಿ ವಿನಂತಿ. ದೂರವಾಣಿ ಸಂಖ್ಯೆ-9480803300, 9480803301ನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು. ತಮ್ಮ ಹೆಸರನ್ನು ಗೌಪ್ಯವಾಗಿಡಲಾಗುವುದು’’ ಎಂದು ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ತಿಳಿಸಿದೆ.

share
ಬಿ. ರೇಣುಕೇಶ್
ಬಿ. ರೇಣುಕೇಶ್
Next Story
X