Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಏಳು ನಗರಗಳಲ್ಲಿ ಪಾಸ್‌ಪೋರ್ಟ್...

ರಾಜ್ಯದ ಏಳು ನಗರಗಳಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ಸ್ಥಾಪನೆಗೆ ವಿದೇಶಾಂಗ ಇಲಾಖೆ ಅನುಮತಿ

ವಾರ್ತಾಭಾರತಿವಾರ್ತಾಭಾರತಿ20 Jun 2017 5:29 PM IST
share
ರಾಜ್ಯದ ಏಳು ನಗರಗಳಲ್ಲಿ  ಪಾಸ್‌ಪೋರ್ಟ್ ಸೇವಾ ಕೇಂದ್ರ ಸ್ಥಾಪನೆಗೆ ವಿದೇಶಾಂಗ ಇಲಾಖೆ ಅನುಮತಿ

ಶಿವಮೊಗ್ಗ, ಜೂ. 20: ಶಿವಮೊಗ್ಗ ಸೇರಿದಂತೆ ರಾಜ್ಯದ ಏಳು ನಗರಗಳಲ್ಲಿ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರ (ಪಿ.ಓ.ಪಿ.ಎಸ್.ಕೆ.) ಸ್ಥಾಪನೆಗೆ ಕೇಂದ್ರ ವಿದೇಶಾಂಗ ಇಲಾಖೆ ಅನುಮತಿ ನೀಡಿದೆ. ಬಳ್ಳಾರಿ, ಬೀದರ್, ರಾಯಚೂರು, ತುಮಕೂರು, ಉಡುಪಿ ಹಾಗೂ ವಿಜಯಪುರ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರ ಆರಂಭವಾಗುತ್ತಿರುವ ಇತರೆ ನಗರಗಳಾಗಿವೆ.

ಪ್ರಥಮ ಹಂತದಲ್ಲಿ ದೇಶದ 86 ನಗರಗಳಲ್ಲಿ ಪಿ.ಓ.ಪಿ.ಎಸ್.ಕೆ. ಸ್ಥಾಪನೆಗೆ ವಿದೇಶಾಂಗ ಇಲಾಖೆಯು ಅನುಮತಿ ನೀಡಿತ್ತು. ಇದೀಗ ಎರಡನೇ ಹಂತದಲ್ಲಿ 149 ಕೇಂದ್ರಗಳ ಸ್ಥಾಪನೆಗೆ ಹಸಿರು ನಿಶಾನೆ ತೋರಿಸಿದ್ದು, ಇದರಲ್ಲಿ ಶಿವಮೊಗ್ಗ ಸೇರಿದಂತೆ ಕರ್ನಾಟಕದ ಏಳು ನಗರಗಳಿವೆ.

ವರದಿ ಕೇಳಿತ್ತು: ಇತ್ತೀಚೆಗೆ ವಿದೇಶಾಂಗ ಸಚಿವಾಲಯವು ಶಿವಮೊಗ್ಗ ಅಂಚೆ ಕಚೇರಿಯಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲು ಚಿಂತನೆ ನಡೆಸಿತ್ತು. ಇದಕ್ಕೆ ಪೂರ್ವಭಾವಿಯಾಗಿ ಅಂಚೆ ಕಚೇರಿಯಲ್ಲಿ ಕೇಂದ್ರ ಸ್ಥಾಪನೆಗೆ ಅಗತ್ಯ ಸೌಲಭ್ಯಗಳಿವೆಯೇ? ಎಂಬುವುದರ ಮಾಹಿತಿ ನೀಡುವಂತೆ ಅಂಚೆ ಕಚೇರಿಗೆ ಪತ್ರ ಕೂಡ ಬರೆದಿತ್ತು ಎನ್ನಲಾಗಿದೆ.

ಸಂತಸ: ಶಿವಮೊಗ್ಗ ನಗರದ ಅಂಚೆ ಕಚೇರಿಯಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ಸ್ಥಾಪನೆಗೆ ವಿದೇಶಾಂಗ ಇಲಾಖೆ ಮುಂದಾಗಿರುವುದಕ್ಕೆ ಸ್ಥಳೀಯ ನಾಗರೀಕರು ಸಂತಸ ವ್ಯಕ್ತಪಡಿಸುತ್ತಿದ್ದು, ಪಾಸ್‌ಪೋರ್ಟ್ ಪಡೆಯಲು ಇತರೆ ನಗರಗಳಿಗೆ ಓಡಾಡುವ ಕಷ್ಟ ತಪ್ಪಲಿದೆ ಎಂದು ಹೇಳುತ್ತಿದ್ದಾರೆ.

’ಪಾಸ್‌ಪೋರ್ಟ್‌ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ದಾಖಲೆಗಳ ಪರಿಶೀಲನೆ ಹಾಗೂ ಬಯೋ ಮೆಟ್ರಿಕ್ ವಿವರ ನೀಡಲು ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಪಾಸ್‌ಪೋಟ್ ಸೇವಾ ಕೇಂದ್ರಕ್ಕೆ ತೆರಳಬೇಕಾಗಿತ್ತು. ನಿಗದಿತ ದಿನಾಂಕ, ಸಮಯದಂದೆ ಈ ಕೇಂದ್ರಗಳಿಗೆ ಹೋಗಬೇಕಾಗಿತ್ತು. ಇದರಿಂದ ಸಾಕಷ್ಟು ಸಮಯ, ಹಣ ವ್ಯರ್ಥವಾಗುತ್ತಿತ್ತು. ಕೆಲವೊಮ್ಮೆ ನಾನಾ ಕಾರಣಗಳಿಂದ ಕೇಂದ್ರಗಳಲ್ಲಿ ಪಾಸ್‌ಪೋರ್ಟ್ ಮಂಜೂರಾಗುತ್ತಿರಲಿಲ್ಲ. ಇದರಿಂದ ಕೇಂದ್ರಗಳಿಗೆ ನಿರಂತರವಾಗಿ ಅಲೆದಾಡುವಂತಾಗುತ್ತಿತ್ತು. ಇದೀಗ ಶಿವಮೊಗ್ಗದಲ್ಲಿಯೇ ಕೇಂದ್ರ ಸ್ಥಾಪನೆ ಮಾಡುವುದರಿಂದ ಜಿಲ್ಲೆಯ ನಾಗರೀಕರಿಗೆ ಪಾಸ್‌ಪೋರ್ಟ್ ಮಾಡಿಸುವ ಕಾರ್ಯ ಮತ್ತಷ್ಟು ಸರಳವಾಗಲಿದೆ. ಇದರಿಂದ ಹೆಚ್ಚಿನ ಜನರು ಪಾಸ್‌ಪೋರ್ಟ್ ಮಾಡಿಸಲು ಸಹಾಯಕವಾಗುತ್ತದೆ ಎಂದು ನಾಗರೀಕರು ಅಭಿಪ್ರಾಯಪಡುತ್ತಾರೆ.

ಹಿಂದಿನ ಬೇಡಿಕೆ: ಬದಲಾದ ಸನ್ನಿವೇಶದಲ್ಲಿ ಶಿವಮೊಗ್ಗ ನಗರ ಹಾಗೂ ಜಿಲ್ಲೆಯಿಂದ ಉದ್ಯೋಗ, ಶಿಕ್ಷಣ, ಪ್ರವಾಸ ಸೇರಿದಂತೆ ನಾನಾ ಕಾರ್ಯಗಳ ನಿಮಿತ್ತ ವಿದೇಶಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಪಾಸ್‌ಪೋರ್ಟ್ ಮಾಡಿಸುವವರ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಶಿವಮೊಗ್ಗ ನಗರದಲ್ಲಿಯೇ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಬೇಕೆಂಬ ಬೇಡಿಕೆ ಸಾರ್ವಜನಿಕರದ್ದಾಗಿತ್ತು. 


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X