Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಯೋಗದಲ್ಲಿ ಪ್ರತೀ ವರ್ಷ ಸರಾಸರಿ 6 ಸಾವಿರ...

ಆಯೋಗದಲ್ಲಿ ಪ್ರತೀ ವರ್ಷ ಸರಾಸರಿ 6 ಸಾವಿರ ದೂರುಗಳು ದಾಖಲು: ಮೀರಾ ಸಕ್ಸೆನಾ

ವಾರ್ತಾಭಾರತಿವಾರ್ತಾಭಾರತಿ20 Jun 2017 7:41 PM IST
share
ಆಯೋಗದಲ್ಲಿ ಪ್ರತೀ ವರ್ಷ ಸರಾಸರಿ 6 ಸಾವಿರ ದೂರುಗಳು ದಾಖಲು: ಮೀರಾ ಸಕ್ಸೆನಾ

ಉಡುಪಿ, ಜೂ.20: ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಈವರೆಗೆ ಒಟ್ಟು 66,991 ದೂರುಗಳು ಬಂದಿದ್ದು, ಇವುಗಳಲ್ಲಿ ಸುಮಾರು 58,740 ದೂರು ಗಳನ್ನು ಇತ್ಯರ್ಥ ಪಡಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 1,131 ದೂರುಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 1,009 ವಿಲೇವಾರಿ ಮಾಡಲಾಗಿದೆ. ಇನ್ನು 122 ದೂರುಗಳು ಇತ್ಯರ್ಥಕ್ಕೆ ಬಾಕಿ ಇವೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಿ. ಸಕ್ಸೇನಾ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಉಡುಪಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಗ್ಲೋಬಲ್ ಕನ್ಸರ್ನ್ಸ್ ಇಂಡಿಯಾ, ಅಕಾಡೆಮಿ ಆಫ್ ಗಾಂಧಿಯನ್ ಸ್ಟಡೀಸ್‌ನ ಸಹಯೋಗದೊಂದಿಗೆ ಮಂಗಳವಾರ ಉಡುಪಿ ಜಿಪಂ ಸಭಾಂಗಣದಲ್ಲಿ ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳಿಗೆ ಆಯೋಜಿಸಲಾದ ಮಾನವ ಹಕ್ಕು, ಲಿಂಗತ್ವ ಸಮಾನತೆ, ಮಾನವ ಮತ್ತು ಮಕ್ಕಳ ಕಳ್ಳಸಾಗಾಣಿಕೆ, ಮಾನವ ಮತ್ತು ಪರಿಸರ ಹಕ್ಕು ಸಂರಕ್ಷಣೆ ಕುರಿತ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಆಯೋಗಕ್ಕೆ ಪ್ರತಿವರ್ಷ ಸರಾಸರಿ ಆರು ಸಾವಿರ ದೂರುಗಳು ಬರುತ್ತವೆ. ಇತ್ಯರ್ಥಕ್ಕೆ ಬಾಕಿ ಇರುವ ಸುಮಾರು 8,000 ದೂರುಗಳು ಬೇರೆ ಬೇರೆ ಹಂತದಲ್ಲಿವೆ. ಈವರೆಗೆ ಒಟ್ಟು 9,000 ಸ್ವಯಂಪ್ರೇರಿತ ದೂರುಗಳನ್ನು ಸಹ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಆಯೋಗಕ್ಕೆ ಅತಿ ಹೆಚ್ಚು ದೂರುಗಳು ಬೆಂಗಳೂರು, ಮೈಸೂರುಗಳಿಂದ ಬರುತ್ತಿವೆ. ಬೆಂಗಳೂರಿನಲ್ಲಿ ಮಾನವ ಹಕ್ಕುಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿ ರುವುದಲ್ಲದೆ ಉಲ್ಲಂಘನೆ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗುತ್ತಿದೆ. ಭೂವಿವಾದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಬರುತ್ತಿವೆ. ಆದರೆ ನ್ಯಾಯಾಲಯದಲ್ಲಿ ತೀರ್ಮಾನಗೊಂಡ ಹಾಗೂ ವಿಚಾರಣೆಯಲ್ಲಿರುವ ಪ್ರಕರಣಗಳ ದೂರುಗಳನ್ನು ಆಯೋಗ ಸ್ವೀಕರಿಸುವುದಿಲ್ಲ. ಅದೇ ರೀತಿ ಕೌಟುಂಬಿಕ ವಿವಾದಗಳ ಕುರಿತ ದೂರುಗಳು ಕೂಡ ಹೆಚ್ಚು ಬರುತ್ತವೆ ಎಂದರು.

ಆಯೋಗದ ಹೆಸರು ಬಳಸಿಕೊಂಡು ಕೆಲವು ವ್ಯಕ್ತಿಗಳು ವಂಚನೆ, ಕಾನೂನು ಉಲ್ಲಂಘನೆಯಂತಹ ಚಟುವಟಿಕೆ ನಡೆಸುತ್ತಿದ್ದು, ಅಂತಹವರ ವಿರುದ್ದ ದೂರು ನೀಡಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ವಾಹನಗಳ ಮೇಲೆ ಮಾನವ ಹಕ್ಕುಗಳ ಸಂಘಟನೆಯ ಹೆಸರನ್ನು ಸರಕಾರಿ ಇಲಾಖೆಯ ಮಾದರಿಯಲ್ಲಿ ಹಾಕಿಸಿಕೊಂಡು ಸಂಚರಿಸುವವರ ಕುರಿತು ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪೊಲೀಸರು ಮನೆಯವರಿಗೆ ಮಾಹಿತಿ ಕೊಡದೆ ಅಥವಾ ಸಮವಸ್ತ್ರ ಧರಿಸದೆ ಯಾರನ್ನು ಕೂಡ ವಿಚಾರಣೆಗೆ ಕರೆದುಕೊಂಡು ಹೋಗುವಂತೆ ಇಲ್ಲ. ಆ ರೀತಿ ಮಾಡಿದರೆ ಅದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅಕ್ರಮ, ಅನ ಧಿಕೃತ ಕಟ್ಟಡಗಳಿಗೆ ಯಾವುದೇ ರೀತಿಯ ಬೆಂಬಲವನ್ನು ಆಯೋಗ ನೀಡಲ್ಲ. ಅಂತಹ ದೂರುಗಳು ಬಂದರೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗು ವುದು ಎಂದು ಅವರು ಹೇಳಿದರು.

ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಪಸ್ಥಿತರಿದ್ದರು. ಜಿಪಂ ಯೋಜನಾಧಿಕಾರಿ ಶ್ರೀನಿವಾಸ ರಾವ್ ಸ್ವಾಗತಿಸಿದರು. ಗ್ಲೋಬಲ್ ಕನ್ಸರ್ನ್ಸ್ ಇಂಡಿಯಾದ ನಿರ್ದೇಶಕಿ ಬೃಂದಾ ಅಡಿಗೆ ವಂದಿಸಿದರು. ಮಲ್ಲಿಕಾರ್ಜುನ ಕಾರ್ಯಕ್ರಮ ನಿರೂಪಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X