Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟ್ರಾಫಿಕ್ ಅಟೋಮೇಶನ್ ಎನ್‌ಫೋರ್ಸ್‌ಮೆಂಟ್...

ಟ್ರಾಫಿಕ್ ಅಟೋಮೇಶನ್ ಎನ್‌ಫೋರ್ಸ್‌ಮೆಂಟ್ ಸೆಂಟರ್ ಉದ್ಘಾಟನೆ

ಟ್ರಾಫಿಕ್ ನಿಯಮ ಉಲ್ಲಂಘನೆ ಸಹಿತ ಅಪರಾಧ ಚಟುವಟಿಕೆ ಪತ್ತೆಗೆ ಸಹಕಾರಿ

ವಾರ್ತಾಭಾರತಿವಾರ್ತಾಭಾರತಿ20 Jun 2017 8:14 PM IST
share
ಟ್ರಾಫಿಕ್ ಅಟೋಮೇಶನ್ ಎನ್‌ಫೋರ್ಸ್‌ಮೆಂಟ್ ಸೆಂಟರ್ ಉದ್ಘಾಟನೆ

ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಅಳವಡಿಕೆ
ನಗರದ 75 ಕಡೆ ಸಿಸಿ ಕ್ಯಾಮೆರಾ ಅಳವಡಿಕೆ

ಮಂಗಳೂರು, ಜೂ.20: ನಗರದ ಕದ್ರಿ ಠಾಣೆಯಲ್ಲಿ ಸ್ಥಾಪಿಸಲಾದ ಟ್ರಾಫಿಕ್ ಅಟೋಮೇಶನ್ ಎನ್‌ಫೋರ್ಸ್‌ಮೆಂಟ್ ಸೆಂಟರ್ ಮಂಗಳವಾರ ಸಂಜೆ ಉದ್ಘಾಟನೆಗೊಂಡಿತು.

ಮಂಗಳೂರು ನಗರ ಪೊಲೀಸ್ ಉಪಾಯುಕ್ತರಾದ ಕೆ.ಎಂ.ಶಾಂತರಾಜು ಮತ್ತು ಹನುಮಂತರಾಯ ಈ ಸೆಂಟರ್‌ಗೆ ಚಾಲನೆ ನೀಡಿದರು. ಈ ಸಂದರ್ಭ ಎಸಿಪಿಗಳಾದ ತಿಲಕಚಂದ್ರ, ಉದಯ ಎಂ.ನಾಯಕ್, ಶ್ರುತಿ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ಪ್ರಥಮ: ರಾಜ್ಯದ ಪ್ರಮುಖ ನಗರಗಳಲ್ಲಿ ಈ ಸೆಂಟರ್‌ನ್ನು ಪೊಲೀಸ್ ಇಲಾಖೆ ಅಳವಡಿಸಿದ್ದರೂ ಕೂಡ ಮಂಗಳೂರಿನಲ್ಲಿ ಇದೇ ಪ್ರಥಮ ಬಾರಿಗೆ ತೆರೆಯಲಾಗಿದೆ. ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಸುಮಾರು 75 ಕಡೆ ಹೊಸ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಟ್ರಾಫಿಕ್ ನಿಯಮ ಉಲ್ಲಂಘನೆ ಸಹಿತ ಅಪರಾಧ ಚಟುವಟಿಕೆಗಳನ್ನು ಪತ್ತೆ ಹಚ್ಚಲು ಇದು ಸಹಕಾರಿಯಾಗಿದೆ. ಅಂದರೆ, ಸಂಚಾರ ನಿಯಮ ಉಲ್ಲಂಘಿಸಿದರೆ, ಅಪರಾಧ ಚಟುವಟಿಕೆ ನಡೆದರೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯವನ್ನು ಪರಿಶೀಲನೆ ನಡೆಸಲಾಗುತ್ತದೆ. ಅದರಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಇದರಿಂದ ಸಾಧ್ಯವಾಗುತ್ತದೆ.

ಇವೆಲ್ಲವನ್ನೂ ಕದ್ರಿ ಠಾಣೆಯಲ್ಲಿ ತೆರೆಯಲಾದ ಈ ಸೆಂಟರ್‌ನಲ್ಲಿ ನಿಯಂತ್ರಿಸಲಾಗುತ್ತದೆ. ಇದಕ್ಕಾಗಿ ನುರಿತ ಸಿಬ್ಬಂದಿ ವರ್ಗವನ್ನೂ ನೇಮಿಸಲಾಗಿದೆ. ಪೊಲೀಸ್ ಇಲಾಖೆಯು ಆರ್‌ಟಿಒ ಜೊತೆ ಈಗಾಗಲೆ ಒಪ್ಪಂದ ಮಾಡಿಕೊಂಡಿದ್ದು, ಅದರಂತೆ ಸಂಚಾರ ನಿಯಮ ಉಲ್ಲಂಘಿಸಿದ ಚಾಲಕರ ವಿವರವನ್ನು ತಕ್ಷಣ ಪತ್ತೆ ಹಚ್ಚಲಾಗುತ್ತದೆ.
 
ಹಿಂದೆ ಸಂಚಾರ ನಿಯಮ ಉಲ್ಲಂಘಿಸಿದರೆ ಅಂತಹವರ ವಿಳಾಸ ಪತ್ತೆ ಹಚ್ಚಿ ನೋಟಿಸ್ ನೀಡಲಾಗುತ್ತಿತ್ತು. ಆದರೆ, ಈ ಪ್ರಕ್ರಿಯೆಯಲ್ಲಿ ಭಾರೀ ವಿಳಂಬವಾಗುತ್ತಿತ್ತು. ಅಲ್ಲದೆ ಕೆಲವೊಮ್ಮೆ ಆ ವಿಳಾಸದಲ್ಲಿ ಯಾರೂ ಇರದಿದ್ದರೆ ಅಂತಹವರನ್ನು ಪತ್ತೆ ಹಚ್ಚುವುದು ಸಾಹಸವಾಗುತ್ತಿತ್ತು. ಅದಲ್ಲದೆ ದಂಡ ಕಟ್ಟುವಾಗ ಕೆಲವೊಂದು ಕಾರಣದಿಂದ ವಿಳಂಬವೂ ಆಗುತ್ತದೆ. ಇದನ್ನು ತಪ್ಪಿಸಲು ಮತ್ತು ಕಾನೂನು ಉಲ್ಲಂಘಿಸಿದ ತಕ್ಷಣ ವಿಳಾಸ ಪತ್ತೆ ಹಚ್ಚಿ ಕ್ಷಣಾರ್ಧದಲ್ಲಿ ತಪ್ಪಿತಸ್ಥರಿಗೆ ದಂಡ ಪಾವತಿಯ ನೋಟಿಸ್ ರವಾನೆ ಮಾಡಲು ಈ ಸೆಂಟರ್ ಸಹಕಾರಿಯಾಗಲಿದೆ.

ನೋಟಿಸ್ ಸ್ವೀಕರಿಸಿದ ಸವಾರರು ಆಯುಕ್ತಾಲಯ ವ್ಯಾಪ್ತಿಯ ಯಾವುದೇ ಸಂಚಾರ ಠಾಣೆಯಲ್ಲಿ ದಂಡ ಪಾವತಿಸಬಹುದು. ಒಂದೊಮ್ಮೆ ದಂಡ ಪಾವತಿಸದಿದ್ದರೆ ಇನ್ನೊಮ್ಮೆ ಸಿಕ್ಕಿ ಬಿದ್ದಾಗ ಹಳೆಯ ದಂಡ ಪಾವತಿ ಬಾಕಿ ಇರುವುದನ್ನೂ ಕೂಡ ಇವು ಸೂಚಿಸುತ್ತದೆ. ಒಟ್ಟಿನಲ್ಲಿ ಆಧುನಿಕ ತಂತ್ರಜ್ಞಾನಕ್ಕೆ ಅನುಗುಣವಾಗಿ ಮಂಗಳೂರು ನಗರ ಪೊಲೀಸ್ ಹೊಂದಿಕೊಳ್ಳುತ್ತಿದ್ದು, ಸಾರ್ವಜನಿಕರಿಗೆ ಮತ್ತಷ್ಟು ಜನಸ್ನೇಹಿಯಾಗಲು ಪ್ರಯತ್ನಿಸುತ್ತಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X