Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರ್‌ಬಿಐಗೆ ಮತ್ತೊಮ್ಮೆ ಪತ್ರ:...

ಆರ್‌ಬಿಐಗೆ ಮತ್ತೊಮ್ಮೆ ಪತ್ರ: ಸಿದ್ದರಾಮಯ್ಯ

ಡಿಸಿಸಿ ಬ್ಯಾಂಕುಗಳಲ್ಲಿ 473 ಕೋಟಿ ರೂ.ಬಾಕಿ

ವಾರ್ತಾಭಾರತಿವಾರ್ತಾಭಾರತಿ20 Jun 2017 9:07 PM IST
share
ಆರ್‌ಬಿಐಗೆ ಮತ್ತೊಮ್ಮೆ ಪತ್ರ: ಸಿದ್ದರಾಮಯ್ಯ

ಬೆಂಗಳೂರು, ಜೂ.20: ಕೇಂದ್ರ ಸರಕಾರವು ಗರಿಷ್ಠ ಮುಖಬೆಲೆಯ ನೋಟುಗಳ ಮಾನ್ಯತೆಯನ್ನು ರದ್ದುಗೊಳಿಸಿದ ಬಳಿಕ ರಾಜ್ಯದ ಡಿಸಿಸಿ ಬ್ಯಾಂಕುಗಳಲ್ಲಿ ಸಂಗ್ರಹಿಸಲಾಗಿರುವ 473 ಕೋಟಿ ರೂ.ಗಳ ಬಗ್ಗೆ ಶೀಘ್ರದಲ್ಲೆ ತೀರ್ಮಾನ ಕೈಗೊಳ್ಳುವಂತೆ ಆರ್‌ಬಿಐ ಗವರ್ನರ್ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಶಿವಾನಂದ ಪಾಟೀಲ್ ಶೂನ್ಯವೇಳೆಯಲ್ಲಿ ಈ ಸಂಬಂಧ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಈ ಹಣದ ಬಗ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ತೀರ್ಮಾನ ಕೈಗೊಳ್ಳಬೇಕು. ಸುಮಾರು 473 ಕೋಟಿ ರೂ.ಗಳು ಡಿಸಿಸಿ ಬ್ಯಾಂಕುಗಳಲ್ಲಿ ಜಮೆಯಾಗಿದೆ ಎಂದರು.

ಕೇಂದ್ರ ಸರಕಾರವು ನವೆಂಬರ್ 8ರಂದು ನೋಟುಗಳ ಮಾನ್ಯತೆಯನ್ನು ರದ್ದುಗೊಳಿಸಿ, ಡಿಸೆಂಬರ್ 30ರವರೆಗೆ ಬ್ಯಾಂಕುಗಳಿಗೆ ಜಮೆ ಮಾಡಲು ಕಾಲಾವಕಾಶ ನೀಡಿತ್ತು. ಆದರೆ, ಏಕಾಏಕಿ ನವೆಂಬರ್ 14ರಂದು ಡಿಸಿಸಿ ಬ್ಯಾಂಕುಗಳಲ್ಲಿ ಹಣವನ್ನು ಜಮೆ ಮಾಡುವುದನ್ನು ಸ್ಥಗಿತಗೊಳಿಸಿದ ಪರಿಣಾಮ, ಸಾಕಷ್ಟು ಪ್ರಮಾಣದಲ್ಲಿ ಗ್ರಾಹಕರು ತೊಂದರೆಗೆ ಸಿಲುಕಿಕೊಂಡರು ಎಂದು ಅವರು ಹೇಳಿದರು.

ಈ ಹಣದ ಪಾರದರ್ಶಕತೆಗೆ ಸಂಬಂಧಿಸಿದಂತೆ ನಬಾರ್ಡ್‌ನಿಂದ ಆರ್‌ಬಿಐ ಪರಿಶೀಲನೆ ನಡೆಸಿತು. ಡಿಸಿಸಿ ಬ್ಯಾಂಕುಗಳಲ್ಲಿ ಜಮೆಯಾಗಿರುವ ಹಣದಲ್ಲಿ ಯಾವುದೆ ರೀತಿಯ ಅಕ್ರಮವಾಗಿಲ್ಲ ಎಂದು ನಬಾರ್ಡ್ ವರದಿಯನ್ನು ನೀಡಿದೆ. ಆದರೂ, ಆರ್‌ಬಿಐ ಈ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

ಡಿಸಿಸಿ ಬ್ಯಾಂಕುಗಳು ಪ್ರತಿ ತಿಂಗಳು ಸುಮಾರು 18-20 ಕೋಟಿ ರೂ.ಗಳಷ್ಟು ಬಡ್ಡಿಯನ್ನು ಪಾವತಿಸಬೇಕಿದೆ. ಈಗಾಗಲೆ 6-7 ತಿಂಗಳಾಗಿದೆ. ಯಾವುದೆ ಕ್ರಮ ಕೈಗೊಳ್ಳಲಾಗಿಲ್ಲ. ಮತ್ತೊಮ್ಮೆ ಆರ್‌ಬಿಐ ಗವರ್ನರ್ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದು ಚರ್ಚೆ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಶಿವಾನಂದ ಪಾಟೀಲ್, ಡಿಸಿಸಿ ಬ್ಯಾಂಕುಗಳನ್ನು ಉಳಿಸಲು ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಆರ್‌ಬಿಐ ಗವರ್ನರ್ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಮುಖ್ಯಮಂತ್ರಿ ಬರೆದಿರುವ ಪತ್ರದ ಪ್ರತಿಗಳು, ನಬಾರ್ಡ್ ನೀಡಿರುವ ಪರಿಶೀಲನಾ ವರದಿಯನ್ನು ತಮಗೆ ನೀಡಿದರೆ, ಕೇಂದ್ರದ ಮೇಲೆ ಒತ್ತಡ ಹೇರಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X