Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೈಹಿಕ, ಮಾನಸಿಕ ಆರೋಗ್ಯಕ್ಕಾಗಿ ಯೋಗ...

ದೈಹಿಕ, ಮಾನಸಿಕ ಆರೋಗ್ಯಕ್ಕಾಗಿ ಯೋಗ ಅತ್ಯವಶ್ಯಕ: ವೈ.ಕೆ.ತಿಮ್ಮೇಗೌಡ

ವಾರ್ತಾಭಾರತಿವಾರ್ತಾಭಾರತಿ21 Jun 2017 4:46 PM IST
share
ದೈಹಿಕ, ಮಾನಸಿಕ ಆರೋಗ್ಯಕ್ಕಾಗಿ ಯೋಗ ಅತ್ಯವಶ್ಯಕ: ವೈ.ಕೆ.ತಿಮ್ಮೇಗೌಡ

ಹನೂರು, ಜೂ.21: ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಯೋಗ ಅತ್ಯವಶ್ಯಕವಾಗಿದ್ದು, ಪ್ರತಿನಿತ್ಯ ಕೆಲಕಾಲ ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು ಮತ್ತು ಯೋಗದ ಮಹತ್ವವನ್ನು ಇತರರಿಗೂ ತಿಳಿಸಿಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ ತಿಳಿಸಿದರು.

ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ  ಸಾರ್ವಜನಿಕ ಶಿಕ್ಷಣ ಇಲಾಖೆ, ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ಹಾಗೂ ಇನ್ನಿತರ ಸಂಘಸಂಸ್ಥೆಗಳ ನೇತೃತ್ವದಲ್ಲಿ ವಿಶ್ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಬಿಇಒ ವೈ.ಕೆ. ತಿಮ್ಮೇಗೌಡ ಮಾತನಾಡಿ, ದೇಹ ಮತ್ತು ಮನಸ್ಸು ಆರೋಗ್ಯದಿಂದ ಕೂಡಿರಬೇಕಾದರೆ ಯೋಗ ಮಹತ್ವದ ಪಾತ್ರವನ್ನು ವಹಿಸಿದೆ. ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಸುವುದಲ್ಲದೇ ವ್ಯಕ್ತಿಯಲ್ಲಿ ಚಿಂತನಾಶಕ್ತಿ, ಬೌದ್ಧಿಕ ಶಕಿ, ಭಾವನಾತ್ಮಕ ಶಕ್ತಿ ಸದೃಢಗೊಳ್ಳುತ್ತದೆ. ಜತೆಗೆ ಸಂವೇಗಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದರ ಮೂಲಕ ದೇಹ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಬಹುದು. ಇದರಿಂದ ರೋಗಮುಕ್ತ ಜೀವನ ನಡೆಸಲು ಸಾಧ್ಯ. ಹೆಚ್ಚಿನ ಭೌತಿಕ ಸಂಪತ್ತು ಹೊಂದಿದ ಮಾತ್ರಕ್ಕೆ ಯಾವುದೇ ರಾಷ್ಟ್ರ ಸಮೃದ್ಧಿಯಿಂದ ಕೂಡಿರಲು ಸಾಧ್ಯವಿಲ್ಲ. ಬದಲಾಗಿ ಆ ರಾಷ್ಟ್ರದ ಮಾನವ ಸಂಪನ್ಮೂಲ ಸೃಧಡತೆಯಿಂದ ಕೂಡಿರಬೇಕು. ಆರೋಗ್ಯದ ಸೂಚ್ಯಂಕವನ್ನು ಮಾಪನ ಮಾಡುವ ದೇಶದ ಅಭಿವೃದ್ಧಿಯನ್ನು ನಿರ್ಧರಿಸಲಾಗುತ್ತದೆ. ಆದುದರಿಂದ ಪ್ರತಿಯೊಬ್ಬರೂ ಯೋಗವನ್ನು ನಿತ್ಯ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ತಿಳಿಸಿದರು.

2,000 ವಿದ್ಯಾರ್ಥಿಗಳು ಭಾಗಿ:

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ಧ ಯೋಗ ಪ್ರದರ್ಶನದಲ್ಲಿ ಪಟ್ಟಣದ ಜಿವಿ ಗೌಡ ಸರ್ಕಾರಿ ಶಾಲೆ, ವಿವೇಕಾನಂದ ಶಾಲೆ, ಗೌತಮ್ ಶಾಲೆ, ಕ್ರಿಸ್ತರಾಜ ಶಾಲೆ, ಮೊರಾರ್ಜಿ ದೇಸಾಯಿ ಶಾಲೆ, ಏಕಲವ್ಯ ವಸತಿ ಶಾಲೆ ಹಾಗೂ ಇನ್ನಿತರ ಶಾಲೆಗಳಿಂದ ಸುಮಾರು 2000ಕ್ಕೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಳಗ್ಗೆ 7ರಿಂದ 8.30ರವರೆಗೆ ಯೋಗ ಪ್ರದರ್ಶನವು ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಮಮತಾ ಮಹದೇವು, ಮುಖ್ಯಾಧಿಕಾರಿ ಮೋಹನ್‌ಕೃಷ್ಣ, ಸದಸ್ಯ ಬಾಲರಾಜನಾಯ್ಡು, ತಾಪಂ ಇಒ ದರ್ಶನ್, ಉಪ ತಹಶೀಲ್ದಾರ್ ಭೈರಯ್ಯ, ದೈಹಿಕ ಶಿಕ್ಷಣ ಸಂಯೋಜಕ ತೇಜ್‌ಪಾಲ್, ಬಿಆರ್‌ಪಿ ಶ್ರೀನಿವಾಸನಾಯ್ಡು, ಗೌತಮ್ ಸಂಸ್ಥೆಯ ಕಾರ್ಯದರ್ಶಿ ರವೀಂದ್ರ, ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಹಾಗೂ ವಿವಿಧ ಶಾಲೆಯ ಶಿಕ್ಷಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X