Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3 ಲಕ್ಷ ಮಂದಿಯಿಂದ ವಿಶ್ವದಾಖಲೆಯ ಯೋಗ...

3 ಲಕ್ಷ ಮಂದಿಯಿಂದ ವಿಶ್ವದಾಖಲೆಯ ಯೋಗ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ21 Jun 2017 6:33 PM IST
share
3 ಲಕ್ಷ ಮಂದಿಯಿಂದ ವಿಶ್ವದಾಖಲೆಯ ಯೋಗ ಪ್ರದರ್ಶನ

 ಅಹಮದಾಬಾದ್ , ಜೂ.21: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ರಾಮ್‌ದೇವ್ ನೇತೃತ್ವದಲ್ಲಿ ಸುಮಾರು 3 ಲಕ್ಷ ಮಂದಿ ಇಲ್ಲಿಯ ಜಿಎಂಡಿಸಿ ಮೈದಾನದಲ್ಲಿ ಯೋಗ ಪ್ರದರ್ಶನ ನೀಡಿದ್ದು ಇದು ವಿಶ್ವದಾಖಲೆಯಾಗಿದೆ ಎಂದು ರಾಮ್‌ದೇವ್ ತಿಳಿಸಿದ್ದಾರೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್, ಇತರ ಹಲವು ರಾಜಕೀಯ ಮುಖಂಡರು, ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳು, ಹೈಕೋರ್ಟ್ ನ್ಯಾಯಾಧೀಶರು, ಇತರ ಗಣ್ಯರು ಪಾಲ್ಗೊಂಡಿದ್ದರು.

 ರಾಜ್ಯ ಸರಕಾರ ಮತ್ತು ಪತಂಜಲಿ ಯೋಗಪೀಠದ ವಿಶೇಷ ಆಹ್ವಾನದ ಮೇರೆಗೆ ವಿವಿಧ ಧರ್ಮದ ಮುಖಂಡರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು. ಒಂದೇ ಸ್ಥಳದಲ್ಲಿ ಸುಮಾರು 3 ಲಕ್ಷ ಮಂದಿ ಯೋಗ ಪ್ರದರ್ಶನ ನೀಡಿದ್ದು ಇದು ನೂತನ ಗಿನ್ನೆಸ್ ದಾಖಲೆಯಾಗಿದೆ. ಸ್ಥಳದಲ್ಲಿ ಗಿನ್ನೆಸ್ ವಿಶ್ವದಾಖಲೆ ಪುಸ್ತಕದ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ರಾಮ್‌ದೇವ್ ತಿಳಿಸಿದ್ದಾರೆ. ಯೋಗ ಪ್ರದರ್ಶನ ಸ್ಥಳದ ಪ್ರವೇಶ ದ್ವಾರದಲ್ಲಿರುವ ಕೇಂದ್ರದಲ್ಲಿ ದಾಖಲಾಗಿರುವ ಸಂಖ್ಯೆಯನ್ನು ಪರಿಶೀಲಿಸಿದ ಬಳಿಕ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡವರ ನಿಖರ ಸಂಖ್ಯೆಯನ್ನು ಅಧಿಕಾರಿಗಳು ಘೋಷಿಸಲಿದ್ದಾರೆ ಎಂದವರು ತಿಳಿಸಿದರು.

 ಈ ಹಿಂದೆ 2015ರ ಜೂನ್ 21ರಂದು ದಿಲ್ಲಿಯ ರಾಜಪಥ್‌ನಲ್ಲಿ ಪ್ರಧಾನಿ ಮೋದಿಯವರ ಜೊತೆ 35,985 ಮಂದಿ ಯೋಗ ಪ್ರದರ್ಶನ ನೀಡಿದ್ದು ದಾಖಲೆಗೆ ಸೇರಿತ್ತು.

ವೇದಿಕೆಯಲ್ಲಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದ ರಾಮ್‌ದೇವ್, ಅಮಿತ್ ಶಾ ಮತ್ತು ರೂಪಾನಿಯವರನ್ನು ವೇದಿಕೆಗೆ ಆಹ್ವಾನಿಸಿ ತಾವು ಪ್ರದರ್ಶಿಸುವ ಯೋಗಾಸನವನ್ನು ಅನುಕರಿಸುವಂತೆ ಹೇಳಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಶಾ, ಮೋದಿಯವರ ಮನವಿಯಂತೆ ವಿಶ್ವಸಂಸ್ಥೆ ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿತು. ಆ ಬಳಿಕ ವಿಶ್ವದಾದ್ಯಂತ ಯೋಗದ ಜನಪ್ರಿಯತೆ ಹೆಚ್ಚಿದೆ ಎಂದರು.

 ಗುಜರಾತ್ ರಾಜ್ಯದ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲೂ ಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ರಾಜ್‌ಕೋಟ್‌ನಲ್ಲಿ ಈಜುಕೊಳದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ 792 ಮಹಿಳೆಯರು ಭಾಗವಹಿಸಿ ‘ಅಕ್ವಾಯೋಗ’ ಪ್ರದರ್ಶನ ನೀಡಿದರು. 

 ಸೈಕಲ್ ಯಾತ್ರೆ.. ಉ.ಪ್ರದೇಶದಾದ್ಯಂತ ‘ಸೈಕಲ್ ಯಾತ್ರೆ’ ಹಮ್ಮಿಕೊಳ್ಳುವ ಮೂಲಕ ಸಮಾಜವಾದಿ ಪಕ್ಷ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿತು. ಎಲ್ಲಾ ಜಿಲ್ಲಾ ಕೇಂದ್ರಗಳಿಂದ ಪಕ್ಷದ ಕಾರ್ಯಕರ್ತರು ಬೆಳಿಗ್ಗೆ 6ಗಂಟೆಗೆ ಸೈಕಲ್ ಯಾತ್ರೆ ನಡೆಸಬೇಕು. ಬಳಿಕ ತಮ್ಮ ಮನೆಯಲ್ಲಿ ಅನುಕೂಲಕ್ಕೆ ತಕ್ಕಂತೆ ಯೋಗ ದಿನ ಆಚರಿಸಿಕೊಳ್ಳಬೇಕು ಎಂದು ಎಸ್ಪಿಯ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸೂಚನೆ ನೀಡಿದ್ದರು.

ಲಕ್ನೊದಲ್ಲಿ ಪ್ರಧಾನಿ ಹಾಗೂ ಉ.ಪ್ರದೇಶ ಮುಖ್ಯಮಂತ್ರಿ ಪಾಲ್ಗೊಳ್ಳುವಿಕೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆಗೆ ಪ್ರತಿಯಾಗಿ ಎಸ್ಪಿ ಪಕ್ಷ ಸೈಕಲ್ ಯಾತ್ರೆ ಆಯೋಜಿಸಿದೆ ಎನ್ನಲಾಗಿದೆ. ಸೈಕಲ್ ಸಮಾಜವಾದಿ ಪಕ್ಷದ ಚುನಾವಣಾ ಚಿಹ್ನೆಯಾಗಿದೆ.

ಲಕ್ನೊದಲ್ಲಿ ನಡೆದ ಕಾರ್ಯಕ್ರಮಕ್ಕೆ ಅಖಿಲೇಶ್‌ಗೆ ಆಹ್ವಾನ ಇತ್ತಾದರೂ ಅವರು ಪಾಲ್ಗೊಳ್ಳಲಿಲ್ಲ. ಉ.ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ಸರಕಾರಿ ಅಧಿಕಾರಿಗಳು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಿಂದ ದೂರ ಇರುವಂತೆ ಸೂಚಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X