Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಂಬಿಕೆ-ಮೂಢನಂಬಿಕೆ ಮಧ್ಯೆ ಗೆರೆ...

ನಂಬಿಕೆ-ಮೂಢನಂಬಿಕೆ ಮಧ್ಯೆ ಗೆರೆ ಎಳೆಯಬೇಕು: ಸಿದ್ದರಾಮಯ್ಯ

ರೇಶ್ಮೆ ಶಾಲು-ಪಂಚೆ ಸ್ವಾರಸ್ಯಕರ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ21 Jun 2017 7:37 PM IST
share
ನಂಬಿಕೆ-ಮೂಢನಂಬಿಕೆ ಮಧ್ಯೆ ಗೆರೆ ಎಳೆಯಬೇಕು: ಸಿದ್ದರಾಮಯ್ಯ

ಬೆಂಗಳೂರು, ಜೂ. 21: ನಂಬಿಕೆ ಮತ್ತು ಮೂಢನಂಬಿಕೆಯ ಮಧ್ಯೆ ಒಂದು ಗೆರೆ ಎಳೆಯಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ವಿವಿಧ ಇಲಾಖೆ ಬೇಡಿಕೆಗಳ ಮೇಲೆ ಉತ್ತರದ ಮಧ್ಯೆ 'ಜೆಡಿಎಸ್ ಹಿರಿಯ ಸದಸ್ಯ ಎಚ್.ಡಿ.ರೇವಣ್ಣ ಇಲಾಖೆ ಬೇಡಿಕೆಗಳ ಮೇಲೆ ಮಾತನಾಡಿಲ್ಲ. ಏಕೆಂದರೆ ಈ ತಿಂಗಳು ಒಳ್ಳೆಯ ದಿನಗಳಿಲ್ಲ ಎಂದು ಅವರು ಸದನಕ್ಕೆ ಬಂದಿಲ್ಲ' ಎಂದು ಛೇಡಿಸಿದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ನೀವು ಮುಖ್ಯಮಂತ್ರಿ ಆದ ಬಳಿಕ ರೇವಣ್ಣ ಮಾತನಾಡುವುದನ್ನೇ ಬಿಟ್ಟಿದ್ದಾರೆಂದು ಮಸಾಲೆ ಬೆರೆಸಿದರು. ರೇವಣ್ಣ ನನ್ನ ಒಳ್ಳೆಯ ಹಿತಚಿಂತಕ. ಜೆಡಿಎಸ್‌ನಲ್ಲಿದ್ದಾಗ ತಾನು ಮುಖ್ಯಮಂತ್ರಿ ಆಗಲಿಲ್ಲ ಎಂದು ಕಣ್ಣೀರಿಟ್ಟಿದ್ದ ಎಂದು ಸಿದ್ದರಾಮಯ್ಯ ಸ್ಮರಿಸಿದರು.

ರೇವಣ್ಣ ರಾಹುಕಾಲ-ಗುಳಿಕಕಾಲವನ್ನು ನೋಡಿಕೊಂಡು ಸದನಕ್ಕೆ ಬರುತ್ತಾರೆ. ಇದರಿಂದ ಯಾರಿಗೆ ಏನಾಗಿದೆಯೋ ಗೊತ್ತಿಲ್ಲ. ಆದರೆ, ರೇವಣ್ಣನಿಗೆ ಮಾತ್ರ ಒಳ್ಳೆಯದಾಗಿದೆ. ಮಾತ್ರವಲ್ಲ ಅನುಕೂಲವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದು, ಸದನದಲ್ಲಿ ನಗೆ ಅಲೆಯನ್ನು ಉಕ್ಕಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ರೇವಣ್ಣ, ತಮ್ಮ ಮಾತಿಗೆ ನಮ್ಮದೇನು ಅಭ್ಯಂತರವಿಲ್ಲ ಸ್ವಾಮಿ, ರಾಜ್ಯದಲ್ಲಿನ ರೈತರಿಗೆ ಒಳ್ಳೆಯದಾದರೆ ಅಷ್ಟೇ ಸಾಕು ಎಂದು ಹೇಳಿದರು. ಈ ವೇಳೆ ಬಿಜೆಪಿಯ ಬಸವರಾಜ ಬೊಮ್ಮಾಯಿ, ‘ಏನ್ ಸಾರ್ ಇವತ್ತು ಒಳ್ಳೆಯ ಮನಸ್ಥಿತಿಯಲ್ಲಿದ್ದೀರಿ’ ಎಂದು ಸಿದ್ದರಾಮಯ್ಯನವರನ್ನು ತಿವಿದರು.

ಸದಸ್ಯರ ಪ್ರತಿಕ್ರಿಯೆಗೆ ಸ್ಪಂದಿಸಿದ ಸಿದ್ದರಾಮಯ್ಯ ಆತ್ಮಶುದ್ಧಿ ಇದ್ದರೆ ಒಳ್ಳೆಯ ಮನಸ್ಥಿತಿ ಇರುತ್ತದೆ ಎಂದರು. ಇಂದು ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ ಒಳ್ಳೆಯ ಮನಸ್ಥಿತಿಯಲ್ಲಿ ಇದ್ದಾರೆ ಎಂದು ಬಿಜೆಪಿಯ ಲಕ್ಷ್ಮಣ ಸವದಿ ಚಟಾಕಿ ಹಾರಿಸಿದರು.

ರೇಶ್ಮೆ ಶಾಲು: ಮೈಸೂರು ಸಿಲ್ಕ್ ಜುಬ್ಬಾ-ಪಂಚೆ ಮತ್ತು ರೇಶ್ಮೆ ಶಾಲು ಧರಿಸಿ ಸದನಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯರನ್ನು ಕುರಿತು ಬಿಜೆಪಿಯ ಬಸವರಾಜ ಬೊಮ್ಮಾಯಿ, ‘ಏನ್ ಸಾರ್ ಸಿಲ್ಕ್ ಜುಬ್ಬಾ-ರೇಶ್ಮೆ ಶಾಲು ಧರಿಸಿ ಬಂದಿದ್ದೀರಿ, ರೈತರ ಸಾಲಮನ್ನಾ ಘೋಷಣೆ ಮೂಲಕ ಒಳ್ಳೆಯ ಸುದ್ದಿ ಕೊಡ್ತೀರೀ..’ ಎಂದು ಕೆಣಕಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಬೊಮ್ಮಾಯಿ ನೀನು ನಮ್ಮವನೂ, ನನ್ನ ರೇಶ್ಮೆ ಶಾಲಿನ ಮೇಲೆ ನಿನಗೇಕೆ ಕಣ್ಣು..ನಿನ್ನ ಮಗನ ಮದುವೆಗೆ ನಿನಗೂ ಒಂದು ರೇಶ್ಮೆ ಶಾಲು ಮೈಸೂರು ಸಿಲ್ಕ್ ಪಂಚೆ ಕೊಡ್ಸಿತ್ತೀನಿ, ಬಿಡಪ್ಪ’ ಎಂದು ಸುಮ್ಮನಿರಿಸಲು ಪ್ರಯತ್ನಿಸಿದರು.

ಆಗ ಬಿಜೆಪಿಯ ಸಿ.ಟಿ.ರವಿ, ರೇಶ್ಮೆ ಶಾಲು-ಪಂಚೆ ಅಷ್ಟೇನಾ ಬೇರೆ ಏನಾದರೂ ಇದೆಯೇ ಎಂದು ಸಿಎಂ ಕಾಲೆಳೆದರು. ‘ರವಿ ನಿನಗೇನು ಬೇಕು, ಆಮೇಲೆ ನನ್ನತ್ತರ ಬಂದು ಹೇಳಪ್ಪ’ ಎಂದು ಚರ್ಚೆಗೆ ತೆರೆ ಎಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X