Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಬಾಲಕ ರಿಫಾತ್ ನಿರ್ಮಿಸಿದ ವಿಶ್ವದ...

ಭಾರತೀಯ ಬಾಲಕ ರಿಫಾತ್ ನಿರ್ಮಿಸಿದ ವಿಶ್ವದ ಅತಿ ಸಣ್ಣ ಉಪಗ್ರಹ ನಾಸಾದಿಂದ ಉಡಾವಣೆ

ವಾರ್ತಾಭಾರತಿವಾರ್ತಾಭಾರತಿ22 Jun 2017 6:29 PM IST
share
ಭಾರತೀಯ ಬಾಲಕ ರಿಫಾತ್ ನಿರ್ಮಿಸಿದ ವಿಶ್ವದ ಅತಿ ಸಣ್ಣ ಉಪಗ್ರಹ ನಾಸಾದಿಂದ ಉಡಾವಣೆ

ಹೊಸದಿಲ್ಲಿ,ಜೂ.22: ವಿಶ್ವದ ಅತಿ ಸಣ್ಣ ಉಪಗ್ರಹವೊಂದನ್ನು ತಮಿಳುನಾಡಿನ ರಿಫಾತ್ ಶಾರುಖ್ ನೇತೃತ್ವದಲ್ಲಿ ವಿದ್ಯಾರ್ಥಿಗಳ ತಂಡವೊಂದು ನಿರ್ಮಿಸುವ ಮೂಲಕ ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದಾರೆ. 64 ಗ್ರಾಂ ಭಾರದ ಈ ಉಪಗ್ರಹವನ್ನು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಬುಧವಾರ ಉಡಾವಣೆಗೊಳಿಸಿದೆ.

ತಮಿಳುನಾಡಿನ ಪಲ್ಲಪಟ್ಟಿಯ ನಿವಾಸಿಯಾದ 18 ವರ್ಷದ ವಿದ್ಯಾರ್ಥಿ ರಿಫಾತ್ ಶಾರುಖ್ ನಾಸಾಕ್ಕಾಗಿ ಅತ್ಯಂತ ಸಣ್ಣದಾದ ಹಾಗೂ ಹಗುರವಾದ ಈ ಉಪಗ್ರಹವನ್ನು ನಿರ್ಮಿಸಿರುವ ತಂಡದ ನೇತೃತ್ವ ವಹಿಸಿದ್ದರು. ಮಾಜಿ ರಾಷ್ಟ್ರಪತಿ, ಕ್ಷಿಪಣಿ ವಿಜ್ಞಾನಿ ಅಬ್ದುಲ್ ಕಲಾಂ ಅವರ ನೆನಪಿಗಾಗಿ ‘ಕಲಾಂಸ್ಯಾಟ್’ ಎಂದು ಹೆಸರಿಡಲಾದ ಉಪಗ್ರಹದ ಉಡಾವಣೆಯೊಂದಿಗೆ, ರಿಫಾತ್ ಜಾಗತಿಕ ಬಾಹ್ಯಾಕಾಶ ವಿಜ್ಞಾನದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಅಮೆರಿಕದ ವ್ಯಾಲೊಪ್ಸ್ ದ್ವೀಪದಲ್ಲಿರುವ ನಾಸಾದ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಜೂನ್ 21ರಂದು ವಿಶ್ವದ ಈ ಅತ್ಯಂತ ಕಿರಿಯ ಉಪಗ್ರಹವನ್ನು ಉಡಾವಣೆಗೊಳಿಸಲಾಗಿದೆ. ಉಡಾವಣೆ ಬಳಿಕ 240 ನಿಮಿಷಗಳ ಕಾಲ ಭೂಕಕ್ಷೆಯಲ್ಲಿ ಉಪಗ್ರಹ ಕಾರ್ಯನಿರ್ವಹಿಸಿತ್ತು. ಆನಂತರ ಬಾಹ್ಯಾಕಾಶದ ಸೂಕ್ಷ್ಮ ಗುರುತ್ವಾಕರ್ಷಕ ವಾತಾವರಣದಲ್ಲಿ ಅದು 12 ನಿಮಿಷಗಳವರೆಗೆ ಕಾರ್ಯಾಚರಿಸಿರುವುದಾಗಿ ರಿಫಾತ್ ಹೇಳಿದ್ದಾರೆ.

 3-ಡಿ ಮುದ್ರಿತ ಕಾರ್ಬನ್ ಫೈಬರ್‌ನ ಕಾರ್ಯನಿರ್ವಹಣೆಯನ್ನು ಪ್ರದರ್ಶಿಸುವುದೇ ಈ ಉಪಗ್ರಹದ ಮುಖ್ಯ ಪಾತ್ರವಾಗಿತ್ತೆಂದು ರಿಫಾತ್ ತಿಳಿಸಿದ್ದಾರೆ. ನಾಸಾ ಹಾಗೂ ‘ಐ ಡೂಡ್ಲ್ ಲರ್ನಿಂಗ್’ ಎಂಬ ಸಂಘಟನೆ ಜಂಟಿಯಾಗಿ ಆಯೋಜಿಸಿದ್ದ ‘ಕ್ಯೂಬ್ಸ್ ಇನ್ ಸ್ಪೇಸ್’ ಎಂಬ ಸ್ಪರ್ಧೆಯಲ್ಲಿ ತಾನು ಭಾಗವಹಿಸಿದ್ದು, ಅದರಲ್ಲಿ ಈ ಉಪಗ್ರಹವು ಉಡಾವಣೆಗೆ ಆಯ್ಕೆಯಾಗಿದ್ದಾಗಿ ರಿಫಾತ್ ವಿವರಿಸಿದ್ದಾರೆ.

ಬಾಹ್ಯಾಕಾಶಕ್ಕೆ ಕಳುಹಿಸುವಂತಹ ನಿಖರವಾಗಿ ನಾಲ್ಕು ಮೀಟರ್ ಗಾತ್ರದ ಹಾಗೂ ನಿಖರವಾಗಿ 64 ಗ್ರಾಂ. ಭಾರದ ಕ್ಯೂಬ್ (ಘನ) ಉಪಗ್ರಹವನ್ನು ನಿರ್ಮಿಸುವುದೇ ಈ ಸ್ಪರ್ಧೆಯ ಮುಖ್ಯ ಸವಾಲಾಗಿತ್ತು. ಈ ವಿಶಿಷ್ಟವಾದ ಉಪಗ್ರಹದಲ್ಲಿ ಭೂಮಿಯ ಚಲನೆಯ ವೇಗ, ಪರಿಭ್ರಮಣ ಹಾಗೂ ವಿದ್ಯುತ್ಕಾಂತೀಯ ವಲಯವನ್ನು ಅಳೆಯಲು ವಿನೂತನ ರೀತಿಯ ಆನ್‌ಬೋರ್ಡ್ ಕಂಪ್ಯೂಟರ್ ಹಾಗೂ ಎಂಟು ಸ್ವದೇಶಿ ನಿರ್ಮಿತ ಸೆನ್ಸರ್‌ಗಳನ್ನು ಅಳವಡಿಸಲಾಗಿತ್ತು ಎಂದು ರಿಫಾತ್ ತಿಳಿಸಿದ್ದಾರೆ.

‘ಸ್ಪೇಸ್ ಕಿಡ್ಸ್ ಇಂಡಿಯಾ’ ಎಂಬ ಸಂಘಟನೆ ಈ ಉಪಗ್ರಹದ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಿರುವುದಾಗಿ ರಿಫಾತ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X