Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿಯನ್ನು ಮರೆಯುತ್ತಿರುವ ಪತ್ರಿಕೋದ್ಯಮ:...

ಕೃಷಿಯನ್ನು ಮರೆಯುತ್ತಿರುವ ಪತ್ರಿಕೋದ್ಯಮ: ಪಿ.ಸಾಯಿನಾಥ್

‘ಸಾಮಾಜಿಕ ಮಾಧ್ಯಮ ಮತ್ತು ಸುದ್ದಿಕೊಠಡಿ’ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ22 Jun 2017 8:35 PM IST
share
ಕೃಷಿಯನ್ನು ಮರೆಯುತ್ತಿರುವ ಪತ್ರಿಕೋದ್ಯಮ: ಪಿ.ಸಾಯಿನಾಥ್

 ಬೆಂಗಳೂರು, ಜೂ.22: ಈಗಿನ ಪತ್ರಿಕೋದ್ಯಮ ಕೃಷಿಯನ್ನು ಮರೆಯುತ್ತಿದ್ದು, ಜನರಿಗೆ ಬೇಡವಾದದ್ದನ್ನೇ ಹೆಚ್ಚಾಗಿ ನೀಡುತ್ತಿದೆ ಎಂದು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಇಂದಿಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಕಮ್ಯೂನಿಕೇಶನ್ ಫಾರ್ ಡೆವಲಪ್‌ಮೆಂಟ್ ಆ್ಯಂಡ್ ಲರ್ನಿಂಗ್ ಹಾಗೂ ನ್ಯಾಶನಲ್ ಫೌಂಡೇಶನ್ ಆಫ್ ಇಂಡಿಯಾ ಹಮ್ಮಿಕೊಂಡಿದ್ದ, ‘ಸಾಮಾಜಿಕ ಮಾಧ್ಯಮ ಮತ್ತು ಸುದ್ದಿಕೊಠಡಿ’ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದಿನನಿತ್ಯ ಪತ್ರಿಕೆಗಳು ಸೇರಿದಂತೆ ಎಲ್ಲ ರೀತಿಯ ಸಂವಹನ ಮಾಧ್ಯಮಗಳು ಮುಖ್ಯವಾಗಿ ಅಪರಾಧ ಸುದ್ದಿಗಳಿಗೆ ಹೆಚ್ಚು ಸ್ಥಾನ ನೀಡುತ್ತಿದ್ದಾರೆ.ಆದರೆ, ದೇಶದಲ್ಲಿ ಶೇಕಡ 69 ರಷ್ಟು ಕೃಷಿಕರಿದ್ದರೂ, ಅವರನ್ನು ಪರಿಗಣಿಸುತ್ತಿಲ್ಲ. 0.61 ರಷ್ಟು ಮಾತ್ರ ಕೃಷಿ ಸಂಬಂಧ ಚಟುವಟಿಕೆಗಳಿಗೆ ಸ್ಥಾನ ಮೀಸಲಿಟ್ಟಿದ್ದೇವೆ. ಅದು ಅಲ್ಲದೆ, ಕೃಷಿ ವಲಯದ ವರದಿಗಾರ ಎಂದರೆ, ಆತ ಕೃಷಿ ಇಲಾಖೆಯ ಬಗ್ಗೆ ಬರೆಯುತ್ತಿದ್ದಾನೆ ಎಂದು ಸಾಯಿನಾಥ್ ನುಡಿದರು.

ಎರಡು ದಶಕಗಳ ಅವಧಿಯಲ್ಲಿ 50 ದಶಲಕ್ಷ ರೈತರು ಕೃಷಿಯಿಂದ ಹಿಂದೆ ಸರಿದಿದ್ದು, ಪ್ರತಿನಿತ್ಯ ಸರಾಸರಿ ಎರಡು ಸಾವಿರ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂದ ಅವರು, ರೈತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಮತ್ತೊಂದು ಕಡೆ ಕೃಷಿ ವಸೂಲಿ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಕೆಲಸಕ್ಕಾಗಿ ಬಹುತೇಕರು ಪಟ್ಟಣ ಸೇರುತ್ತಿದ್ದಾರೆ ಎಂದು ಅವರು ಹೇಳಿದರು.

3.10 ಲಕ್ಷ ರೈತರ ಸಾವು: ದೇಶದಲ್ಲಿ 1995ರಿಂದ 2015ರವರೆಗೆ 3.10 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2013ರಲ್ಲಿ ನಡೆದ ಸಮೀಕ್ಷೆ ಪ್ರಕಾರ ರೈತರ ಕುಟುಂಬದ ಮಾಸಿಕ ಆದಾಯ 6,426 ಇತ್ತು. ಇದೇ ಕಾರಣದಿಂದಾಗಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು.

  ಎಐಸಿಸಿ ಸಂಶೋಧನಾ ವಿಭಾಗದ ಮುಖ್ಯಸ್ಥ ಹಾಗೂ ಸಂಸದ ಪ್ರೊ.ರಾಜೀವ್‌ಗೌಡ ಮಾತನಾಡಿ, ಭೂಮಿಯ ಮೇಲೆ 7 ಶತಕೋಟಿ ಜನಸಂಖ್ಯೆ ಇದ್ದು, ಅದರಲ್ಲಿ ಸ್ಮಾರ್ಟ್‌ೆನ್ ಹಾಗೂ ಅಂತರ್ಜಾಲ ಬಳಸುತ್ತಿರುವುದು ಕಡಿಮೆ. ಈಗ ಎಲ್ಲವೂ ಡಿಜಿಟಲ್ ಆಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ, ದೇಶದ ಅರ್ಧದಷ್ಟು ಜನಸಂಖ್ಯೆ ಇನ್ನು ಅಂತರ್ಜಾಲ ಬಳಕೆಯನ್ನು ಮಾಡುತ್ತಿಲ್ಲ ಎಂದರು.

ಸಾಮಾಜಿಕ ಜಾಲತಾಣಗಳು ಸಾರ್ವಜನಿಕರಿಗೆ ಮುಕ್ತ ವೇದಿಕೆ ಕಲ್ಪಿಸಿರುವುದರಿಂದ ತಮ್ಮ ಅಭಿಪ್ರಾಯ ತಿಳಿಸಲು ಅವಕಾಶವಿದೆ. ಇದರಿಂದ ತಮ್ಮಲ್ಲಿರುವ ಭಾವನೆಗಳನ್ನು ಹೊರ ಜಗತ್ತಿಗೆ ತಿಳಿಸಲು ಅವಕಾಶವಾಗಿದೆ. ಅಷ್ಟೆ ಅಲ್ಲದೇ, ಇಲ್ಲಿ ನೇರವಾಗಿ ಎಲ್ಲರ ಜತೆ ಮಾತನಾಡುವ ಅವಕಾಶವಿದೆ. ಅದಕ್ಕೆ ಇಂದು ಸಾಮಾಜಿಕ ಜಾಲತಾಣ ಹೆಚ್ಚು ಜನಪ್ರಿಯಗೊಳ್ಳುತ್ತಿದೆ ಎಂದು ಅವರು ಹೇಳಿದರು.

 ವಿಚಾರ ಸಂಕಿರಣದಲ್ಲಿ ಹಿರಿಯ ಪತ್ರಕರ್ತರಾದ ಪರಂಜಯ್ ಗುಹಾ ಠಾಕೂರ್ಥ, ನೂಪುರ್ ಬಸೂ, ಟಿ.ಎಂ.ವೀರರಾಘವ್, ಎನ್‌ಎ್ಐ ನಿರ್ದೇಶಕ ಅಮಿತಾಬ್ ಬಿಹಾರ್, ಚಿತ್ರನಿರ್ದೇಶಕ ಪ್ರಕಾಶ್‌ಬೆಳವಾಡಿ, ಐಐಜೆಎನ್‌ಎಂ ಪ್ರಧಾನ ಸಂಚಾಲಕಿ ಕಾಂಚನಾ ಕೌರ್, ವಾಸಂತಿ ಹರಿಪ್ರಕಾಶ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

 ‘ಬಹುರಾಷ್ಟ್ರೀಯ ಕಂಪೆನಿಯ ವಸ್ತುಗಳ ಬಿಡುಗಡೆ ವೇಳೆ 500ಕ್ಕೂ ಹೆಚ್ಚು ಪತ್ರಕರ್ತರು ಪಾಲ್ಗೊಂಡು ಪ್ರಚಾರ ನೀಡಲು ಮುಗಿಬೀಳುತ್ತಾರೆ. ಆದರೆ, ಕೃಷಿ ಚಟುವಟಿಕೆ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಖ್ಯೆ ಕಡಿಮೆಯಾಗಿದ್ದು, ಉದ್ಯಮಕ್ಕೆ ಇಂದಿನ ಪತ್ರಿಕೋದ್ಯಮ ಬಲಿಯಾಗಿದೆ’

-ಪಿ.ಸಾಯಿನಾಥ್, ಹಿರಿಯ ಪತ್ರಕರ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X