Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಭೂತದ ಆಜ್ಞೆ’ಯಂತೆ ಮಗುವಿನ ಕಿವಿಗಳನ್ನು...

‘ಭೂತದ ಆಜ್ಞೆ’ಯಂತೆ ಮಗುವಿನ ಕಿವಿಗಳನ್ನು ಕತ್ತರಿಸಿದ ಮಲತಂದೆ

ವಾರ್ತಾಭಾರತಿವಾರ್ತಾಭಾರತಿ23 Jun 2017 4:34 PM IST
share
‘ಭೂತದ ಆಜ್ಞೆ’ಯಂತೆ ಮಗುವಿನ ಕಿವಿಗಳನ್ನು ಕತ್ತರಿಸಿದ ಮಲತಂದೆ

ಹೊಸದಿಲ್ಲಿ,ಜೂ.23: ಪೂರ್ವ ದಿಲ್ಲಿಯ ಜಿಟಿಬಿ ಎನ್‌ಕ್ಲೇವ್‌ನಲ್ಲಿ ಗುರುವಾರ ವ್ಯಕ್ತಿಯೋರ್ವ ತನ್ನ ಮಲಮಗಳ ಎರಡೂ ಕಿವಿಗಳನ್ನು ಕತ್ತರಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಮೃತ್ ಬಹಾದೂರ್(35) 17 ವರ್ಷಗಳ ಹಿಂದೆ ನೇಪಾಳದಿಂದ ದಿಲ್ಲಿಗೆ ಬಂದು ತನ್ನ ಅಣ್ಣನ ಮನೆಯಲ್ಲಿ ವಾಸವಿದ್ದು, ಕ್ಲೀನರ್ ಕೆಲಸ ಮಾಡಿಕೊಂಡಿದ್ದ. ಕೆಲವು ವರ್ಷಗಳ ಹಿಂದೆ ಅಣ್ಣನ ನಿಧನದ ಬಳಿಕ ಅತ್ತಿಗೆಯನ್ನೇ ವಿವಾಹವಾಗಿದ್ದ. ಈಗ ಕಿವಿಗಳನ್ನು ಕಳೆದುಕೊಂಡಿರುವ ಮಗು ಬೀನಾ ಅಮೃತ್‌ನ ಅಣ್ಣನ ಮಗಳಾಗಿದ್ದಾಳೆ.

ಗುರುವಾರ ಬೆಳಗಿನ ಜಾವ ಎರಡು ಗಂಟೆಯ ಸುಮಾರಿಗೆ ಅಮೃತ್ ಬೀನಾಳ ಎರಡೂ ಕಿವಿಗಳನ್ನು ಕತ್ತರಿಸಿ ಪ್ರತ್ಯೇಕಗೊಳಿಸಿದ್ದ. ಆಕೆಯ ಬೊಬ್ಬೆ ಕೇಳಿ ತಾಯಿ ಎದ್ದು ಬಂದಾಗ ಅಮೃತ ಆಕೆಯ ಮೇಲೂ ಹಲ್ಲೆಗೆ ಯತ್ನಿಸಿದ್ದ. ನೆರೆಕರೆಯವರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಗುವಿನ ಕತ್ತನ್ನು ಸೀಳಲು ಮುಂದಾಗಿದ್ದ ಅಮೃತ್‌ನನ್ನು ಹಿಡಿದು ಆತನ ಕೈಯಲ್ಲಿದ್ದ ಚೂರಿಯನ್ನು ಕಿತ್ತುಕೊಳ್ಳುವ ಮೂಲಕ ಮಗುವನ್ನು ರಕ್ಷಿಸಿದ್ದಾರೆ.

 ಕೆಲವು ಸಮಯ ಹಿಂದೆ ಇನ್ನೋರ್ವ ಪುತ್ರಿಯ ನಿಧನದ ಬಳಿಕ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆನ್ನಲಾಗಿರುವ ಅಮೃತ್ ‘‘ಬೀನಾ ಬದುಕಿರಬೇಕೆಂದರೆ ಆಕೆ ಅಳುವಂತೆ ಮಾಡಬೇಕು ಎಂದು ನನಗೆ ಭೂತವು ಹೇಳಿತ್ತು. ಅದರಂತೆ ನಾನು ನಿದ್ರಿಸಿದ್ದ ಆಕೆಯ ಮೇಲೆ ನೀರು ಎರಚಿ ಅಳುವಂತೆ ಮಾಡಿದ್ದೆ. ಬಳಿಕ ಭೂತವು ರಕ್ತ ಬೇಕೆಂದು ಹೇಳಿತ್ತು. ಹೀಗಾಗಿ ನಾನು ಬೀನಾಳ ಕಿವಿಗೆ ಸಣ್ಣಗಾಯವನ್ನು ಮಾಡಿದ್ದೆ. ಆದರೆ ಭೂತವು ಇಡೀ ಕಿವಿಗಳೇ ಬೇಕೆಂದು ಆದೇಶಿಸಿದ್ದು, ಎರಡೂ ಕಿವಿಗಳನ್ನು ಕತ್ತರಿಸಿ ಭೂತವು ತೆಗೆದುಕೊಂಡು ಹೋಗಲೆಂದು ಕೋಣೆಯ ಮೂಲೆಯಲ್ಲಿರಿಸಿದ್ದೆ’’ ಎಂದು ಹೇಳಿಕೊಂಡಿದ್ದಾನೆ.

ಬೀನಾಳನ್ನು ಗುರು ತೇಗ್‌ಬಹಾದೂರ್ ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು ಕತ್ತರಿಸಲಾಗಿದ್ದ ಕಿವಿಗಳನ್ನು ವೈದ್ಯರಿಗೆ ಹಸ್ತಾಂತರಿಸಿದ್ದಾರೆ. ಏಮ್ಸ್‌ನ ವೈದ್ಯರ ನೆರವಿನೊಂದಿಗೆ ಬೀನಾಳಿಗೆ ಕಿವಿಗಳನ್ನು ಮರಳಿ ಜೋಡಿಸಲು ವೈದ್ಯರು ಪ್ರಯತ್ನಿಸಲಿದ್ದಾರೆ. ಕೊಲೆ ಯತ್ನ ಆರೋಪದಲ್ಲಿ ಅಮೃತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X