Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳಪು: ವಿಜ್ಞಾನ ಸಂಶೋಧನಾ ಕೇಂದ್ರಕ್ಕೆ...

ಬೆಳಪು: ವಿಜ್ಞಾನ ಸಂಶೋಧನಾ ಕೇಂದ್ರಕ್ಕೆ ಅನುದಾನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ23 Jun 2017 8:18 PM IST
share

ಪಡುಬಿದ್ರೆ, ಜೂ.23: ಉಡುಪಿ ಜಿಲ್ಲೆಯ ಬೆಳಪು ಗ್ರಾಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಸ್ಥಾಪಿಸಲ್ಪಡುವ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರಕ್ಕೆ ತಗಲುವ ಅಂದಾಜು ವೆಚ್ಚ 126 ಕೋಟಿ ರೂ. ಮಂಜೂರಾತಿ ನೀಡಿ, 50 ಕೋಟಿ ರೂ. ಕರ್ನಾಟಕ ಸರಕಾರ ತಕ್ಷಣ ಬಿಡುಗಡೆಗೊಳಿಸುವಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕಳೆದ 2 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಳಪುವಿಗೆ ಆಗಮಿಸಿ ಯೋಜನೆಗೆ ಚಾಲನೆ ನೀಡಿದ್ದು, 2016-17ನೇ ಸಾಲಿನ ಬಜೆಟ್‌ನಲ್ಲಿ ಅನುದಾನ ಘೋಷಿಸಿದ್ದರು. ದಕ್ಷಿಣ ಭಾರತದಲ್ಲಿ ಪ್ರಪ್ರಥಮವೆಂಬಂತೆ ಅತ್ಯಾಧುನಿಕವಾಗಿ ಜಪಾನ್ ಮಾದರಿಯಲ್ಲಿ ಸ್ಥಾಪಿಸಲ್ಪಡುವ ಸಂಶೋಧನಾ ಕೇಂದ್ರ ಇದಾಗಿದ್ದು, ಅವಿಭಜಿತ ಜಿಲ್ಲೆಯಲ್ಲಿ ಸಂಶೋಧನಾ ಕೇಂದ್ರಕ್ಕೆ ಅವಕಾಶ ನೀಡುವ ಮೂಲಕ ಸಂಶೋಧಕರಿಗೆ, ಮುಂದಿನ ಯುವ ಪೀಳಿಗೆಗೆ ಉಜ್ವಲ ಅವಕಾಶ ಲಭಿಸಿದಂತಾಗಿದೆ.

ಭೀಕರ ರೋಗಗಳಿಗೆ ಔಷಧ ಸಂಶೋಧನೆ, ಪಶ್ಚಿಮ ಘಟ್ಟ ತಪ್ಪಲಿನ ಗಿಡ-ಮೂಲಿಕೆಗಳಿಂದ ಔಷಧಿ ತಯಾರಿಕಾ ಸಂಶೋಧನೆ ಸಹಿತ ನ್ಯಾನೊ ಮಾದರಿಯ ಕಾರುಗಳ ತಯಾರಿಕೆಯ ಬಗ್ಗೆ ಸಂಶೋಧನಾ ಕೇಂದ್ರವಾಗಿದೆ.

ಕಾಮಗಾರಿಗೆ ಶೀಘ್ರ ಚಾಲನೆ :

ಬೆಳಪು ಗ್ರಾಮದಲ್ಲಿ ವಿಶ್ವವಿದ್ಯಾನಿಲಯದ ಕೋರಿಕೆಯಂತೆ 20 ಎಕ್ರೆ ಜಮೀನು ಹಸ್ತಾಂತರಿಸಿದ್ದು, ಮತ್ತೆ 10 ಎಕ್ರೆ ಹೆಚ್ಚುವರಿ ಭೂಮಿ ನೀಡಲು ಜಿಲ್ಲಾಧಿಕಾರಿಯವರಿಗೆ ಉಪಕುಲಪತಿಯವರು ಮನವಿ ಮಾಡಿದ್ದಾರೆ. ಇದು ಕೂಡಾ ಮಂಜೂರಾತಿ ಹಂತದಲ್ಲಿದ್ದು, ಪ್ರಥಮ ಹಂತದ ರೂ. 126 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ರೂ. 50 ಕೋಟಿ ಮಂಜೂರಾತಿ ನೀಡಿದೆ. ಉಳಿದ  76 ಕೋಟಿ ರೂ. ವೆಚ್ಚವನ್ನು ವಿಶ್ವವಿದ್ಯಾನಿಲಯದಿಂದ ಭರಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಂದೆ ರುಸ್ಸಾ ಯೋಜನೆಯಡಿ 400 ಕೋಟಿಯಷ್ಟು ಅನುದಾನ ಬರಲಿದ್ದು, ಇದೊಂದು ವಿಶ್ವದರ್ಜೆ ಮಾದರಿಯಲ್ಲಿ ಸಂಶೋಧನಾ ಕೇಂದ್ರವಾಗಲಿದೆ. ಕರಾವಳಿ ಜಿಲ್ಲೆ ಬ್ಯಾಂಕಿಂಗ್, ಕೈಗಾರಿಕೆ, ಶಿಕ್ಷಣ ಮತ್ತು ಪ್ರವಾಸೋದ್ಯಮದ ಕ್ಷೇತ್ರದ ಉಗಮವಾಗಿದ್ದು ಇದೀಗ ಸಂಶೋಧನಾ ಕೇಂದ್ರ ಸ್ಥಾಪನೆಯಾಗುವ ಮೂಲಕ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ ಎಂದು ಕಾಪು ಕ್ಷೇತ್ರದ ಶಾಸಕ ವಿನಯಕುಮಾರ್ ಸೊರಕೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X