Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೀಟ್ ಫಲಿತಾಂಶ ಪ್ರಕಟ: ಕರ್ನಾಟಕದ...

ನೀಟ್ ಫಲಿತಾಂಶ ಪ್ರಕಟ: ಕರ್ನಾಟಕದ ಸಂಕೀರ್ತ್ ಸದಾನಂದ ನಾಲ್ಕನೆ ರ‍್ಯಾಂಕ್‌

ವಾರ್ತಾಭಾರತಿವಾರ್ತಾಭಾರತಿ23 Jun 2017 9:09 PM IST
share
ನೀಟ್ ಫಲಿತಾಂಶ ಪ್ರಕಟ: ಕರ್ನಾಟಕದ ಸಂಕೀರ್ತ್ ಸದಾನಂದ ನಾಲ್ಕನೆ ರ‍್ಯಾಂಕ್‌

ಹೊಸದಿಲ್ಲಿ/ಬೆಂಗಳೂರು, ಜೂ.23: ಪ್ರಸ್ತುತ ಸಾಲಿನ ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’(ನೀಟ್) ಫಲಿತಾಂಶ ಪ್ರಕಟಗೊಂಡಿದ್ದು, ನಗರದ ಡೆಲ್ಲಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಸಂಕೀರ್ತ್ ಸದಾಂದ ನಾಲ್ಕನೇ ರ‍್ಯಾಂಕ್‌ ಪಡೆದಿದ್ದಾರೆ.

   ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ್ದ ನೀಟ್ ಪರೀಕ್ಷೆಯಲ್ಲಿ ಸಂಕೀರ್ತ್ ಸದಾನಂದ ಒಟ್ಟು 700 ಅಂಕಗಳಿಗೆ 692 ಅಂಕ ಗಳಿಸಿ, 4ನೇ ರ‍್ಯಾಂಕ್‌ ಪಡೆದಿದ್ದಾರೆ. ಅದೇ ರೀತಿ, ಪಂಜಾಬ್‌ನ ನವದೀಪ್ ಸಿಂಗ್ 700ಕ್ಕೆ 697 ಅಂಕ ಪಡೆಯುವ ಮೂಲಕ ಪ್ರಥಮ ರ‍್ಯಾಂಕ್‌ ಗಳಿಸಿದ್ದು, ಮಧ್ಯಪ್ರದೇಶದ ಅರ್ಚಿತ್ ಗುಪ್ತಾ ಮತ್ತು ಮನಿಷ್ ಮುಲ್ಚಂದಾನಿ ಕ್ರಮವಾಗಿ ಎರಡು ಮತ್ತು ಮೂರನೇ ರ‍್ಯಾಂಕ್‌ ಗಳಿಸಿದ್ದಾರೆ.

ಹಾಗೆಯೇ, ಜೈನ್ ವಿವಿಯ ಪಿಯು ಕಾಲೇಜಿನ ವಿದ್ಯಾರ್ಥಿ ರಕ್ಷಿತಾ ರಮೇಶ್ 41ನೆ ರ‍್ಯಾಂಕ್‌ ಪಡೆದಿದ್ದಾರೆ. ಇವರು ಸಿಇಟಿಯಲ್ಲಿ ಭಾರತೀಯ ವೈದ್ಯಪದ್ಧತಿ ವಿಭಾಗದಲ್ಲಿ ಟಾಪರ್ ಆಗಿದ್ದರು. ಇಂದಿರಾನಗರದ ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಾದ ಅನ್ಸಿಕಾ ಗುಪ್ತಾ 413 ಹಾಗೂ ಸಂಜನಾ ಶ್ರೀಕಾಂತ್ 396, ಎಸ್. ಮೋಹಿ್ 271 ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

ಪ್ರಸ್ತುತ ಸಾಲಿನ ಮೇ 7ರಂದು ನೀಟ್ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಪರೀಕ್ಷೆಗೆ ಒಟ್ಟು 11,38,890 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 6,11,539 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಇದರಲ್ಲಿ 2,66,221 ವಿದ್ಯಾರ್ಥಿಗಳು, 3,45,313 ವಿದ್ಯಾರ್ಥಿನಿಯರಿದ್ದಾರೆ. ದೇಶದಲ್ಲಿ ಒಟ್ಟು 470 ವೈದ್ಯಕೀಯ ಕಾಲೇಜುಗಳಿದ್ದು, 65,170 ಸೀಟುಗಳಿವೆ. 308 ದಂತ ವೈದ್ಯಕೀಯ ಕಾಲೇಜುಗಳಿದ್ದು, 25,730 ದಂತ ವೈದ್ಯಕೀಯ ಸೀಟುಗಳಿವೆ.

10 ಭಾಷೆಯಲ್ಲಿ ಪರೀಕ್ಷೆ: ಪ್ರಸ್ತುತ ಸಾಲಿನಲ್ಲಿ ಹತ್ತು ಪ್ರಾದೇಶಿಕ ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದರೂ, ಶೇ.80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂಗ್ಲಿಷ್ ಮಾಧ್ಯಮದಲ್ಲೇ ಪರೀಕ್ಷೆ ಬರೆದಿದ್ದಾರೆ. ಶೇ.10ರಷ್ಟು ವಿದ್ಯಾರ್ಥಿಗಳು ಹಿಂದಿ ಭಾಷೆಯಲ್ಲಿ ಪರೀಕ್ಷೆ ಬರೆದಿದ್ದಾರೆ. ಕನ್ನಡ ಭಾಷೆಯಲ್ಲೂ 712 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ.00.06 ಅಭ್ಯರ್ಥಿಗಳು ಮಾತ್ರವೇ ಉತ್ತೀರ್ಣರಾಗಿದ್ದಾರೆ.

  
ಟಾಪ್ 10 ವಿದ್ಯಾರ್ಥಿಗಳು
1. ನವದೀಪ್ ಸಿಂಗ್ (ಪಂಜಾಬ್)- 697 ಅಂಕ
2. ಅರ್ಚಿತ್ ಗುಪ್ತಾ (ಮಧ್ಯಪ್ರದೇಶ)- 695 ಅಂಕ
3. ಮನಿಷ್ ಮುಲ್ಚಂದಾನಿ (ಮಧ್ಯಪ್ರದೇಶ)- 695 ಅಂಕ
4. ಸಂಕೀರ್ತ್ ಸದಾನಂದ (ಕರ್ನಾಟಕ)- 692 ಅಂಕ
5. ಡೋಗ್ರಾ ಅಭಿಷೇಕ್ ವೀರೇಂದ್ರ (ಮಹಾರಾಷ್ಟ್ರ)- 691 ಅಂಕ
6. ಡೆರಿಕ್ ಜೋಸೆಫ್ (ಕೇರಳ)- 691 ಅಂಕ
7. ಕಾನಿಷ್ ತಯಾಲ್ (ಹರಿಯಾಣ)- 691 ಅಂಕ
8. ನಿಖಿತಾ ಗೋಯಲ್ (ಪಂಜಾಬ್)- 690 ಅಂಕ
9. ಆರ್ಯನ್ ರಾಜ್ ಸಿಂಗ್ (ಉತ್ತರ ಪ್ರದೇಶ)- 690 ಅಂಕ
10. ತನಿಷ್ ಬನ್ಸಾಲ್ (ಪಂಜಾಬ್)- 686 ಅಂಕ

ವಿಷಯಗಳಲ್ಲಿನ ಯಾವುದೇ ಗೊಂದಲಗಳನ್ನು ಶಿಕ್ಷಕರ ಸಹಕಾರ ಪಡೆದು ಪರಿಹರಿಸಿಕೊಳ್ಳುತ್ತಿದ್ದೆ. ವಿಷಯಗಳನ್ನು ಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತಿದ್ದೆ. ಅಂದಿನ ಪಾಠವನ್ನು ಅಂದೇ ಓದುತ್ತಿದ್ದೆ. ಮುಂದೆ ಹೃದ್ರೋಗ ತಜ್ಞ ಅಥವಾ ನರರೋಗ ತಜ್ಞನಾಗಬೇಕೆಂದುಕೊಂಡಿದ್ದೇನೆ.
-ಸಂಕೀರ್ತ್ ಸದಾನಂದ, 4ನೆ ರ‍್ಯಾಂಕ್‌, ಡೆಲ್ಲಿ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X