Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇನ್ನು ಮುಂದೆ ಮೀನುಗಾರರ ಸಬ್ಸಿಡಿ ಮೊತ್ತ...

ಇನ್ನು ಮುಂದೆ ಮೀನುಗಾರರ ಸಬ್ಸಿಡಿ ಮೊತ್ತ ನೇರ ಖಾತೆಗೆ: ಸಚಿವ ಖಾದರ್‌

ವಾರ್ತಾಭಾರತಿವಾರ್ತಾಭಾರತಿ23 Jun 2017 9:58 PM IST
share
ಇನ್ನು ಮುಂದೆ ಮೀನುಗಾರರ ಸಬ್ಸಿಡಿ ಮೊತ್ತ ನೇರ ಖಾತೆಗೆ: ಸಚಿವ ಖಾದರ್‌

ಮಂಗಳೂರು, ಜೂ. 23: ಮುಂದಿನ ಆಗಸ್ಟ್‌ನಲ್ಲಿ ಆರಂಭವಾಗುವ ಮೀನುಗಾರಿಕಾ ಋತುವಿನಿಂದ ಮೀನುಗಾರರಿಗೆ ಸಿಗುವ ಮಾಸಿಕ ಸೀಮೆಎಣ್ಣೆ ಯ ಸಬ್ಸಿಡಿಯನ್ನು ನೇರವಾಗಿ ಆರ್‌ಟಿಜಿಎಸ್ ಮುಖಾಂತರ ಅವರ ಖಾತೆಗೆ ಜಮಾ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ನಗರದ ಸರ್ಕ್ಯೂಟ್‌ಹೌಸ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೆ ಮೀನುಗಾರರು ಸಬ್ಸಿಡಿಲ್ಲಿ ಸೀಮೆ ಎಣ್ಣೆಯನ್ನು ಒದಗಿಸಲಾಗುತ್ತಿದೆ. ಆದರೆ ಇನ್ನು ಮುಂದೆ ಮೀನುಗಾರರು ತಮ್ಮ ಬೋಟ್‌ಗಳಿಗೆ ಹೊರ ಮಾರುಕಟ್ಟೆಯಲ್ಲಿ ಸೀಮೆಎಣ್ಣೆಯನ್ನು ಖರೀದಿಸಬೇಕು. ಅದರ ಸಬ್ಸಿಡಿ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದರು.

ಶೀಘ್ರದಲ್ಲೇ ಅರ್ಜಿ ಸಲ್ಲಿಸಿದವರಿಗೆ ಹೊಸ ಕಾರ್ಡ್‌: ಪಡಿತರ ಚೀಟಿಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದವರಿಗೆ ಶೀಘ್ರಜದಲ್ಲೇ ಹೊಸ ಪಡಿತರ ಕಾರ್ಡ್ ವಿತರಣೆಯಾಗಲಿದೆ ಎಂದು ಸಚಿವ ಖಾದರ್ ತಿಳಿಸಿದರು.

ಈ ಹಿಂದೆ ತಾಂತ್ರಿಕ ಕಾರಣಗಳಿಂದ ಪಡಿತರ ಅರ್ಜಿಗಳನ್ನು ಪರಿಶೀಲಿಸುವಲ್ಲಿ ತೊಡಕು ಉಂಟಾಗಿತ್ತು. ಈಗ ತೊಂದರೆಯನ್ನು ನಿವಾರಿಸಲಾಗಿದೆ. ಗ್ರಾಮಕರಣಿಕರು ಪಡಿತರ ಅರ್ಜಿಗಳನ್ನು ಅಡ್ಡ ಪರಿಶೀಲನೆ ನಡೆಸಲಿದ್ದಾರೆ. ಆಧಾರ್ ಸಂಖ್ಯೆ, ಕುಟುಂಬದ ವಾರ್ಷಿಕ ಆದಾಯ ಇತ್ಯಾದಿಗಳನ್ನು ಪರಿಶೀಲಿಸಿ ಶಿಫಾರಸು ಮಾಡಿದ ಬಳಿಕವೇ ಹೊಸ ಪಡಿತರ ಕಾರ್ಡ್ ಮುದ್ರಣಗೊಳ್ಳಲಿದೆ ಎಂದು ಖಾದರ್ ಹೇಳಿದರು.

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಲಿ: ರಾಜ್ಯದ ರೈತರು ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಿರುವ ಸರಕಾರದ ಕ್ರಮವನ್ನು ಸ್ವಾಗತಿಸಿರುವ ಸಚಿವ ಖಾದರ್, ಕೇಂದ್ರ ಸರಕಾರವೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಲಿ. ಈ ಮೂಲಕ ಸಾಲ ಮನ್ನಾದ ಲಾಭ ಎಲ್ಲರ ರೈತರು ಪಡೆಯುವಂತಾಗಲಿ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ರೈತರ ಸಾಲವನ್ನು ಮನ್ನಾ ಮಾಡಿದ ಬಳಿಕ ಸರಕಾರದ ಜನಪ್ರಿಯತೆಯನ್ನು ಸಹಿಸದ ವಿಪಕ್ಷಗಳು ಮತ್ತೆ ಡೈರಿ ಲಂಚ ಪ್ರಕರಣವನ್ನು ಎತ್ತಿವೆ ಎಂದು ಆರೋಪಿಸಿದರು.

ಸಚಿವರ ಕ್ರಮ ಸರಿಯಾಗಿದೆ: ಜಿಲ್ಲೆಯ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಜಿಲ್ಲಾ ವರಿಷ್ಠಾಧಿಕಾರಿಯವರನ್ನು ಕರೆಸಿ ಸೂಚನೆ ನೀಡಿರುವ ಕ್ರಮ ಸರಿಯಾಗಿದೆ. ಓರ್ವ ಜನಪ್ರತಿನಿಧಿಯಾಗಿ ಹಾಗೂ ಜಿಲ್ಲಾ ಸಚಿವರಾಗಿ ಅವರು ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ ಎಂದು ಖಾದರ್ ಹೇಳಿದರು.

ಭಾರತದಲ್ಲಿ ಪಾಕ್‌ಗೆ ಕ್ರಿಕೆಟ್ ಅವಕಾಶ ನೀಡಬಾರದು: ಭಾರತದಲ್ಲಿ ಪಾಕಿಸ್ತಾನ ಕ್ರಿಕೆಟ್ ಆಟಕ್ಕೆ ಅವಕಾಶ ನೀಡಬಾರದು. ಇದರಿಂದಾಗಿ ದೇಶದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸುವುದು, ಅಶಾಂತಿಯ ವಾತಾವರಣ ನಿರ್ಮಾಣವಾಗುವುದನ್ನು ತಡೆಯಬಹುದು. ಹಿಂದೆ ಯುಪಿಎ ಸರಕಾರ ಇದ್ದಾಗ ಭಾರತದಲ್ಲಿ ಪಾಕಿಸ್ತಾನದ ಕ್ರಿಕೆಟ್ ಪಂದ್ಯಕ್ಕೆ ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳು ಆಕ್ಷೇಪ ಎತ್ತಿದ್ದವು. ಆದರೆ ಈಗ ಕೇಂದ್ರ ಸರಕಾರ ಭಾರತದಲ್ಲಿ ಪಾಕಿಸ್ತಾನಕ್ಕೆ ಕ್ರಿಕೆಟ್ ಆಟ ಆಡುವುದಕ್ಕೆ ಅವಕಾಶ ನೀಡಿದೆ. ಈ ಮೂಲಕ ದೇಶದಲ್ಲಿ ಅಹಿತಕರ ಘಟನೆಗೆ ಆಸ್ಪದವನ್ನು ನೀಡಿದಂತಾಗಿದೆ ಎಂದು ಯು.ಟಿ.ಖಾದರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿ.ಪಂ. ಸದಸ್ಯೆ ಮಮತಾ ಗಟ್ಟಿ, ತಾ.ಪಂ. ಅಧ್ಯಕ್ಷ ಮುಹಮ್ಮದ್ ಮೋನು, ಮುಖಂಡರಾದ ಸಂತೋಷ್ ಶೆಟ್ಟಿ, ಪದ್ಮನಾಭ ನರಿಂಗಾನ, ರಮೇಶ್ ಶೆಟ್ಟಿ, ಸುರೇಶ್, ಸಿದ್ದೀಕ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X