Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಳೆಯಿಂದ ವನಿತೆಯರ ವಿಶ್ವಕಪ್ ಕ್ರಿಕೆಟ್

ನಾಳೆಯಿಂದ ವನಿತೆಯರ ವಿಶ್ವಕಪ್ ಕ್ರಿಕೆಟ್

ಮೊದಲ ದಿನ ಲಂಕಾ-ನ್ಯೂಝಿಲೆಂಡ್, ಭಾರತ- ಇಂಗ್ಲೆಂಡ್ ಮುಖಾಮುಖಿ

ವಾರ್ತಾಭಾರತಿವಾರ್ತಾಭಾರತಿ23 Jun 2017 11:21 PM IST
share
ನಾಳೆಯಿಂದ ವನಿತೆಯರ ವಿಶ್ವಕಪ್ ಕ್ರಿಕೆಟ್

ಡರ್ಬಿ, ಜೂ.23: ಚಾಂಪಿಯನ್ಸ್ ಟ್ರೋಫಿ ಮುಗಿದು ಒಂದು ವಾರ ಕಳೆಯುವಷ್ಟರಲ್ಲಿ ಇಂಗ್ಲೆಂಡ್‌ನಲ್ಲಿ ಮಹಿಳಾ ವಿಶ್ವಕಪ್ ಟೂರ್ನಮೆಂಟ್ ಶನಿವಾರ ಆರಂಭಗೊಳ್ಳಲಿದೆ.

 ಹನ್ನೊಂದನೆ ಆವೃತ್ತಿಯ ಟೂರ್ನಮೆಂಟ್‌ನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ನ್ಯೂಝಿಲೆಂಡ್‌ನ್ನು , ಎರಡನೆ ಪಂದ್ಯದಲ್ಲಿ ಇಂಗ್ಲೆಂಡ್‌ನ್ನು ಭಾರತ ಎದುರಿಸಲಿದೆ.

ಭಾರತ ತಂಡ 50 ಓವರ್‌ಗಳ ಕ್ರಿಕೆಟ್‌ನಲ್ಲಿ ಬಲಿಷ್ಠವಾಗಿದೆ. ಇತ್ತೀಚೆಗೆ ನಾಲ್ಕು ರಾಷ್ಟ್ರಗಳ ಕ್ರಿಕೆಟ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕ ವಿರುದ್ಧ 8 ವಿಕೆಟ್‌ಗಳ ಜಯ ಗಳಿಸಿತ್ತು.

  2005ರ ವಿಶ್ವಕಪ್‌ನಲ್ಲಿ ಎರಡನೆ ಸ್ಥಾನ ಪಡೆದಿದ್ದ ಭಾರತ 2017ರ ವಿಶ್ವಕಪ್‌ಗೆ ನೇರ ಪ್ರವೇಶ ಪಡೆದಿತ್ತು. ಭಾರತ ತಂಡವನ್ನು ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ನಾಯಕಿಯಾಗಿ ಮುನ್ನಡೆಸುತ್ತಿದ್ದಾರೆ. 100 ಪಂದ್ಯಗಳಲ್ಲಿ ತಂಡವನ್ನು ನಾಯಕಿಯಾಗಿ ಮುನ್ನಡೆಸಿದ ಮೂರನೆ ಆಟಗಾರ್ತಿ.

ಮಿಥಾಲಿ ರಾಜ್ ಅವರ ಮೊದಲ ಗುರಿ ಸೆಮಿಫೈನಲ್ ಆಗಿದೆ. ಸತತ ಆರು ಅರ್ಧಶತಕಗಳನ್ನು ದಾಖಲಿಸಿರುವ ಮಿಥಾಲಿ ರಾಜ್ ಅವರು ಇದೇ ಪ್ರದರ್ಶನವನ್ನು ಮುಂದುವರಿಸಲು ಬಯಸಿದ್ದಾರೆ.

 ನಾಲ್ಕು ರಾಷ್ಟ್ರಗಳ ಟೂರ್ನಮೆಂಟ್‌ನ ಮೊದಲ ಪಂದ್ಯದಲ್ಲಿ ದೀಪ್ತಿ ಶರ್ಮ ಮತ್ತು ಪೂನಮ್ ರಾವತ್ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲ ವಿಕೆಟ್‌ಗೆ 320 ರನ್‌ಗಳ ಜೊತೆಯಾಟ ನೀಡಿದ್ದರು. ಮಹಿಳಾ ಕ್ರಿಕೆಟ್‌ನಲ್ಲಿ ಮೊದಲ ವಿಕೆಟ್‌ಗೆ 300 ರನ್‌ಗಳ ಜೊತೆಯಾಟ ಹೊಸ ದಾಖಲೆಯಾಗಿದೆ.

ಸ್ಮತಿ ಮಂಧಾನ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ವಾಪಸಾಗಿದ್ದಾರೆ. ರಾವುತ್ ಮತ್ತು ಮೊನಾ ಮೆಶ್ರಾಮ್ ಮತ್ತು ಹರ್ಮನ್‌ಪ್ರೀತ್ ಕೌರ್ ಉತ್ತಮ ಫಾರ್ಮ್‌ನಲ್ಲಿದ್ದಾರೆ.

 ಜೂಲನ್ ಗೋಸ್ವಾಮಿ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಪಡೆದವರು. ಭಾರತದ ಬೌಲಿಂಗ್ ದಾಳಿಯನ್ನು ಅವರು ಆರಂಭಿಸಲಿದ್ದಾರೆ. ಇವರೊಂದಿಗೆ ಶಿಖಾ ಪಾಂಡೆ ಹೊಸ ಚೆಂಡನ್ನು ಹಂಚಿಕೊಳ್ಳಲಿದ್ದಾರೆ.ಎಕ್ತಾ ಬಿಶ್ತ್ ಸ್ಪಿನ್ ವಿಭಾಗವನ್ನು ಮುನ್ನಡೆಸುವರು.

 ಭಾರತ ಕಳೆದ ನಾಲ್ಕು ಏಕದಿನ ಸರಣಿಗಳಲ್ಲಿ ಸರಣಿ ಜಯ ದಾಖಲಿಸಿದೆ. 17 ಪಂದ್ಯಗಳಲ್ಲಿ 16 ಪಂದ್ಯಗಳನ್ನು ಭಾರತ ಗೆದ್ದುಕೊಂಡಿತ್ತು. ಲಂಕಾ ವಿರುದ್ಧ ಕ್ಲೀನ್ ಸ್ವೀಪ್, ತವರಿನಲ್ಲಿ ವೆಸ್ಟ್‌ಇಂಡಿಸ್, ಬಳಿಕ ದಕ್ಷಿಣ ಆಫ್ರಿಕ ವಿರುದ್ಧ ಮತ್ತು ನಾಲ್ಕು ರಾಷ್ಟ್ರಗಳ ಸರಣಿಯಲ್ಲಿ ಜಯ ಗಳಿಸಿತ್ತು.

ಎರಡು ಬಾರಿ ಚಾಂಪಿಯನ್ ಆಗಿದ್ದ ಇಂಗ್ಲೆಂಡ್ ತಂಡದ ಮೊದಲ ಸವಾಲು ಭಾರತಕ್ಕೆ ಎದುರಾಗಿದೆ.

ಭಾರತ: ಮಿಥಾಲಿ ರಾಜ್(ನಾಯಕಿ), ಹರ್ಮನ್‌ಪ್ರೀತ್ ಕೌರ್, ಸ್ಮತಿ ಮಂಧಾನ, ವೇದಾ ಕೃಷ್ಣ ಮೂರ್ತಿ, ಮೋನಾ ಮೆಶ್ರಾಮ್, ಪೂನಮ್ ರಾವತ್, ದೀಪ್ತಿ ಶರ್ಮ, ಜೂಲಾನ್ ಗೋಸ್ವಾಮಿ, ಶಿಖಾ ಪಾಂಡೆ, ಎಕ್ತಾ ಬಿಶ್ತ್, ಸುಶ್ಮಾ ವರ್ಮ, ಮಂಶಿ ಜೋಶಿ, ರಾಜೇಶ್ವರಿ ಗಾಯಕ್‌ವಾಡ್, ಪೂನಮ್ ಯಾದವ್, ನುಝಾತ್ ಪರ್ವಿನ್.

 ಇಂಗ್ಲೆಂಡ್: ಹೀದರ್ ನೈಟ್(ನಾಯಕಿ), ಜಾರ್ಜಿಯಾ ಎಲ್ವಿಸ್, ಜೆನ್ನು ಗುನ್, ಅಲೆಕ್ಸ್ ಹರ್ಟ್‌ಲೆ, ಸಾರಾ ಟೇಲರ್, ಟಮೈ ಬಿಯಮೊಂಟ್, ಕತ್ರೀನೆ ಬ್ರಂಟ್, ದನಿಯೆಲ್ ಹಝೆಲ್, ಬೆಥ್ ಲಾಂಗ್‌ಸ್ಟನ್, ಲೌರಾ ಮಾರ್ಶ್, ಅನ್ಯ ಶ್ರುಬ್‌ಸೊಲೆ, ನತಾಲಿಯಾ ಸ್ಸಿವೆರ್, ಫಾರನ್ ವಿಲ್ಸನ್, ಡೇನಿಲ್ ವೈಟ್, ಲೌರೆನ್ ವಿನ್‌ಫೀಲ್ಡ್.

ಪಂದ್ಯದ ಸಮಯ: ಸಂಜೆ 3ಗಂಟೆಗೆ ಆರಂಭ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X