Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ನೋ ಬಾಲ್ ಎಫೆಕ್ಟ್: ಟ್ರಾಫಿಕ್...

​ನೋ ಬಾಲ್ ಎಫೆಕ್ಟ್: ಟ್ರಾಫಿಕ್ ನಿಯಂತ್ರಣಕ್ಕೆ ಬುಮ್ರಾ ಫೋಟೋ ಬಳಸಿದ ಜೈಪುರ ಪೊಲೀಸ್!

ವಾರ್ತಾಭಾರತಿವಾರ್ತಾಭಾರತಿ24 Jun 2017 12:44 PM IST
share
​ನೋ ಬಾಲ್ ಎಫೆಕ್ಟ್: ಟ್ರಾಫಿಕ್ ನಿಯಂತ್ರಣಕ್ಕೆ ಬುಮ್ರಾ ಫೋಟೋ ಬಳಸಿದ ಜೈಪುರ ಪೊಲೀಸ್!

ಜೈಪುರ, ಜೂ.24: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ತಾವು ಎಸೆದ ನೋಬಾಲ್ ಚಿತ್ರವನ್ನು ರಸ್ತೆ ಸುರಕ್ಷತೆಯ ಅಭಿಯಾನಕ್ಕೆ ಬಳಸಿಕೊಂಡ ಜೈಪುರ ಟ್ರಾಫಿಕ್ ಪೊಲೀಸರ ನಿರ್ಧಾರ ಕ್ರಿಕೆಟಿಗ ಜಸ್‌ಪ್ರೀತ್ ಬುಮ್ರಾ ಅವರ ಆಕ್ರೋಶಕ್ಕೆ ಕಾರಣವಾಗಿದೆ.

ಟ್ರಾಫಿಕ್ ಪೊಲೀಸರ ಹೋರ್ಡಿಂಗ್ ನಲ್ಲಿ ಗೆರೆಯ ಹಿಂದೆ ಎರಡು ಕಾರುಗಳು ಹಾಗೂ ಇನ್ನೊಂದು ಬದಿಯಲ್ಲಿ ಬುಮ್ರಾ ನೋಬಾಲ್ ದೃಶ್ಯ, ಜತೆಗೆ ಈ ಅಡಿ ಬರಹ ‘‘ಗೆರೆ ದಾಟಬೇಡಿ, ಅದು ದುಬಾರಿಯಾಗಬಹುದು ಎಂದು ನಿಮಗೆ ಗೊತ್ತು.’’ ಆದರೆ ವೆಸ್ಟ್ ಇಂಡೀಸ್ ಪ್ರವಾಸದಿಂದ ಹೊರಗಿರುವ ಬುಮ್ರಾ ಅವರಿಗೆ ಈ ಚಿತ್ರ ತಮಾಷೆಯಾಗಿ ಕಂಡುಬಂದಿಲ್ಲ. ಟ್ವಿಟ್ಟರಿನಲ್ಲಿ ಪ್ರತಿಕ್ರಿಯಿಸಿದ ಅವರು ‘‘ವೆಲ್ ಡನ್ ಜೈಪುರ್ ಟ್ರಾಫಿಕ್ ಪೊಲೀಸ್, ನಮ್ಮ ದೇಶಕ್ಕಾಗಿ ನಮ್ಮಿಂದಾದಷ್ಟು ಪ್ರಯತ್ನಿಸಿದ ಬಳಿಕ ನಮಗೆಷ್ಟು ಗೌರವ ಸಿಗುತ್ತದೆಯೆಂದು ಇದು ತೋರಿಸಿದೆ’’ ಎಂದು ಬರೆದಿದ್ದಾರೆ. ಮುಂದುವರಿದು ‘‘ಚಿಂತೆ ಬೇಡ, ನೀವು ನಿಮ್ಮ ಕರ್ತವ್ಯದಲ್ಲಿ ಮಾಡುವ ತಪ್ಪುಗಳ ಬಗ್ಗೆ ನಾನು ತಮಾಷೆ ಮಾಡುವುದಿಲ್ಲ, ಮಾನವರು ತಪ್ಪುಗಳನ್ನು ಮಾಡುತ್ತಾರೆಂದು ನನಗೆ ತಿಳಿದಿದೆ’’ ಎಂದು ಬರೆದಿದ್ದಾರೆ.

ಟ್ರಾಫಿಕ್ ಸಿಗ್ನಲ್ ಸಮೀಪ ಗೆರೆಗಳ ಹಿಂದೆ ನಿಲ್ಲುವಂತೆ ಚಾಲಕರಿಗೆ ಎಚ್ಚರಿಸುವ ಸಲುವಾಗಿ ಪಾಕಿಸ್ತಾನದ ಫೈಸಲಾಬಾದ್ ಇಲ್ಲಿನ ಟ್ರಾಫಿಕ್ ಪೊಲೀಸರು ಕೂಡ ಬುಮ್ರಾ ಫೋಟೋ ಬಳಸುತ್ತಿದ್ದಾರೆ.

ಐಸಿಸಿ ಚಾಂಪಿಯನ್ಸ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ಆರಂಭಿಕ ಆಟಗಾರ ಫಖರ್ ಝಮಾನ್ ಅವರ ಸ್ಕೋರ್ 3 ರನ್ ಆಗಿರುವಾಗಲೇ ಬುಮ್ರಾ ಎಸೆದ ಚೆಂಡು ಧೋನಿ ಅವರಿಂದ ಕ್ಯಾಚ್ ಹಿಡಿಯಲ್ಪಟ್ಟಿದ್ದರೂ ನಂತರ ಅಂಪೈರ್ ರಿ-ಪ್ಲೇ ವೀಕ್ಷಿಸಿ ನೋ ಬಾಲ್ ಸಿಗ್ನಲ್ ನೀಡಿದ್ದರು. ಈ ರೀತಿ ಬಚಾವಾದ ಝಮನ್ ನಂತರ 111 ರನ್ ಸಿಡಿಸಿದ್ದು, ಭಾರತದ ಪಾಲಿಗೆ ಭಾರೀ ದುಬಾರಿಯಾಗಿ ಪರಿಣಮಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X