Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ...

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಿ: ಬಿಜೆಪಿ ಮುಖಂಡರಿಗೆ ಹೇಮನಾಥ ಶೆಟ್ಟಿ ಸವಾಲು

ವಾರ್ತಾಭಾರತಿವಾರ್ತಾಭಾರತಿ24 Jun 2017 6:00 PM IST
share

ಪುತ್ತೂರು, ಜೂ.24 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ರೂ. 50 ಸಾವಿರ ಸಾಲ ಮನ್ನಾ ಮಾಡಿರುವುದು ರೈತರು ಸಂಭ್ರಮಾಚರಣೆ ನಡೆಸಬೇಕಾದ ವಿಚಾರವಾಗಿದೆ. 22.00,270 ಮಂದಿ ರೈತರ ಒಟ್ಟು ರೂ.8163 ಕೋಟಿ ಅಲ್ಪಾವಧಿ ಸಾಲಮನ್ನಾ ಮಾಡುವ ಮೂಲಕ ಅವರು ಐತಿಹಾಸಿಕ ಸಾಧನೆಯನ್ನು ಮಾಡಿದ್ದು, ತಾಕತ್ತಿದ್ದರೆ ಈ ಭಾಗದ ಬಹಳಷ್ಟು ಪ್ರಭಾವಶಾಲಿ ಬಿಜೆಪಿ ನಾಯಕರಾದ ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ ,ಅನಂತ್‌ಕುಮಾರ್, ಜಗದೀಶ್ ಶೆಟ್ಟರ್, ಶೋಭಾ ಕರಂದ್ಲಾಜೆ ಅವರು ಕೇಂದ್ರದ ಮೇಲೆ ಒತ್ತಡ ಹಾಕಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಲಿ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಸವಾಲು ಹಾಕಿದರು.

ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರೈತರ ಸಾಲದ ರೂ.25 ಸಾವಿರ ಬಡ್ಡಿ ಮನ್ನಾ ಘೋಷಣೆ ಮಾಡಿ ತಮ್ಮ ಅಧಿಕಾರಾವಧಿಯಲ್ಲಿ ಅದನ್ನು ರೈತರಿಗೆ ನೀಡಲಾಗದ ಬಿಜೆಪಿ ನಾಯಕರಾದ ಯಡಿಯೂರಪ್ಪ ಅವರಿಗೆ ನಾವೇ ಹೇಳಿ, ಹೋರಾಟ ಮಾಡಿ ಸಾಲ ಮನ್ನಾ ಮಾಡಿಸಿದ್ದೇವೆ ಎಂದು ಹೇಳಲು ನಾಚಿಕೆಯಾಗಬೇಕು ಎಂದರು. ತಮ್ಮ ಅಧಿಕಾರಾವಧಿಯಲ್ಲಿ ರೈತರ ಕೊಲೆ ಮಾಡಿದವರು, ರೈತರ ಮೇಲೆ ಗೋಲಿಬಾರ್ ಮಾಡಿದವರು ಇದೀಗ ತಾವೇ ಹೋರಾಟ ಮಾಡಿ ಸಾಲ ಮನ್ನಾ ಮಾಡಿಸಿದ್ದೇವೆ ಎಂದರೆ ರೈತರು ಯಾರೂ ನಂಬಲಾರರು ಎಂದು ಅವರು ತಿಳಿಸಿದರು.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಅಲ್ಪಾವಧಿ ಸಾಲದಲ್ಲಿ ಚಿಕ್ಕಾಸು ಮನ್ನಾ ಮಾಡಿಸಲು ಸಾಧ್ಯವಾಗದ ಬಿಜೆಪಿಯ ವೆಂಕಯ್ಯ ನಾಯ್ಡು ಅವರು ಶೋಕಿಗಾಗಿ ,ಫ್ಯಾಶನ್‌ಗಾಗಿ ರೈತರ ಸಾಲ ಮನ್ನಾ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಎಷ್ಟಿದೆ ಎಂಬುವುದು ಇದರಿಂದ ತಿಳಿಯುತ್ತದೆ ಎಂದ ಅವರು ಯಡಿಯೂರಪ್ಪರಿಗೆ ಸಾಲ ಮನ್ನಾ ಮಾಡಿದ ರೂ.50 ಸಾವಿರ ಜುಜುಬಿ ಹಣ ಆಗಿರಬಹುದು, ಆದರೆ ಬಡ ರೈತರ ಪಾಳಿಗೆ ಅದು ದೊಡ್ಡ ಮೊತ್ತ ಆಗಿದೆ ಎಂದರು.

ಜಗದೀಶ್ ಶೆಟ್ಟರ್  ಮುಖ್ಯ ಮಂತ್ರಿಯಾಗಿದ್ದ ವೇಳೆ ರೈತರ ಸಾಲದ ಬಡ್ಡಿ ಮನ್ನಾ ಘೋಷಣೆ ಮಾಡಲಾಗಿದೆಯೇ ಹೊರತು ಅದನ್ನು ರೈತರಿಗೆ ಮುಟ್ಟಿಸುವ ಕೆಲಸ ಮಾಡಿಲ್ಲ. ಅದನ್ನು ಮುಟ್ಟಿಸುವ ಕೆಲಸ ಮಾಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂಬುವುದು ಬಿಜೆಪಿಯವರಿಗೆ ತಿಳಿದಿರಬೇಕು. ರೈತರಿಗೆ ಬಡ್ಡಿಯಲ್ಲಿ ರೂ.3 ಲಕ್ಷ ತನಕ ಸಾಲ, ಶೇ. 3ರ ಬಡ್ಡಿ ದರದಲ್ಲಿ ರೂ.10 ಲಕ್ಷದ ತನಕ ಸಾಲ, 94ಸಿಯಲ್ಲಿ 1 ಲಕ್ಷ ಮಂದಿಗೆ ನಿವೇಶನ, ಹೀಗೆ ಹಲವಾರು ‘ಭಾಗ್ಯ’ ಗಳನ್ನು ಕರುಣಿಸುವ ಮೂಲಕ ಸಿದ್ದರಾಮಯ್ಯ ಅವರು ಸಾಧನೆಗಳ ಚರಿತ್ರೆ ರೂಪಿಸಿದ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ. ಮೂರು ಮುಖ್ಯಮಂತ್ರಿಗಳನ್ನು ಬದಲಾಯಿಸದ್ದೇ ಈ ಹಿಂದಿನ ಬಿಜೆಪಿ ಸರ್ಕಾರದ ಸಾಧನೆಯಾದ್ದು, ಈಗಿನ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ‘ಭಾಷಣ ಭಾಗ್ಯ’ ಬಿಟ್ಟರೆ ಬೇರಾವ ಭಾಗ್ಯವೂ ಇಲ್ಲ ಎಂದು ಅವರು ಟೀಕಿಸಿದರು.

ಯಾವಾಗ ಚುನಾವಣೆ ಬಂದರೂ ಕಾಂಗ್ರೆಸ್ ಗೆಲುವು ಸಾಧಿಸುವ ನಿಟ್ಟಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸಾಧನೆಗಳನ್ನು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಪ್ರತೀ ಗ್ರಾಮಮಟ್ಟದಲ್ಲಿ ಆಂದೋಲನ ನಡೆಸುವ ಯೋಜನೆಯಿದೆ ಎಂದ ಅವರು ಪ್ರಾಮಾಣಿಕವಾಗಿ ಸಾಲ ಮರು ಪಾವತಿಸಿದವರಿಗೂ ಸಾಲ ಮನ್ನಾದ ಹಣವನ್ನು ಮರುಪಾವತಿಸುವ ಕೆಲಸವಾಗಬೇಕೆಂದು ಮುಖ್ಯಮಂತ್ರಿಯವರನ್ನು ಆಗ್ರಹಿಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲೋಕೇಶ್ ಹೆಗ್ಡೆ, ನಗರಸಭೆಯ ಸದಸ್ಯರಾದ ಅನ್ವರ್‌ಖಾಸಿಂ, ಸ್ವರ್ಣಲತಾ ಹೆಗ್ಡೆ, ನಗರ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್ ಮತ್ತು ಬ್ಲಾಕ್ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X