Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರ ಕೃಷಿ ಸಾಲ ಮನ್ನಾ: ಅಧಿಕೃತ ಆದೇಶ

ರೈತರ ಕೃಷಿ ಸಾಲ ಮನ್ನಾ: ಅಧಿಕೃತ ಆದೇಶ

ವಾರ್ತಾಭಾರತಿವಾರ್ತಾಭಾರತಿ24 Jun 2017 7:29 PM IST
share
ರೈತರ ಕೃಷಿ ಸಾಲ ಮನ್ನಾ: ಅಧಿಕೃತ ಆದೇಶ

ಬೆಂಗಳೂರು, ಜೂ. 24: ರಾಜ್ಯದಲ್ಲಿನ ಬರ ಸ್ಥಿತಿ ಹಿನ್ನೆಲೆಯಲ್ಲಿ ಸಹಕಾರ ಬ್ಯಾಂಕುಗಳ ಮೂಲಕ ರೈತರು ಪಡೆದಿರುವ 50 ಸಾವಿರ ರೂ. ವರೆಗಿನ ಅಲ್ಪಾವಧಿ ಬೆಳೆ ಸಾಲಮನ್ನಾ ಘೋಷಿಸಿದ ಮೂರು ದಿನಗಳಲ್ಲಿ, ಸಾಲ ಮನ್ನಾ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ.

ರೈತರ ಬೆಳೆ ಸಾಲಮನ್ನಾ ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಜೂ.21ರಂದು ವಿಧಾನಸಭೆಯಲ್ಲಿ ಘೋಷಿಸಿದ್ದರು. ಜೂ.22ರ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಣಯವನ್ನೂ ಅಂಗೀಕರಿಸಲಾಗಿತ್ತು, ಇದೀಗ ಅಧಿಕೃತ ಸಾಲಮನ್ನಾ ಸಂಬಂಧ ಆದೇಶ ಹೊರಬಿದ್ದಿದೆ.

ರಾಜ್ಯದ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್, ಡಿಸಿಸಿ ಬ್ಯಾಂಕುಗಳು ಮತ್ತು ಪಿಕಾರ್ಡ್ ಬ್ಯಾಂಕುಗಳ ವಿತರಿಸಿದ ಅಲ್ಪಾವಧಿ ಬೆಳೆ ಸಾಲದ ಪೈಕಿ 2017ರ ಜೂ.20ಕ್ಕೆ ಹೊಂದಿರುವ ಹೊರಬಾಕಿ ಮೊತ್ತದಲ್ಲಿ ಗರಿಷ್ಠ 50 ಸಾವಿರ ರೂ. ಸಾಲಮನ್ನಾಕ್ಕೆ ನಿರ್ಧರಿಸಿದ್ದು, ಷರತ್ತಿಗೊಳಪಟ್ಟಿದೆ.

ಷರತ್ತು: ಸಾಲಮನ್ನಾ ಜೂ.20ರ ವರೆಗೆ ಹೊಂದಿರುವ ಹೊರಬಾಕಿ ಸಾಲಕ್ಕೆ ಮಾತ್ರ ಅನ್ವಯ. ಮಧ್ಯಮಾವಧಿ, ದೀರ್ಘಾವಧಿ ಸಾಲ, ಪಶುಭಾಗ್ಯ ಯೋಜನೆಯಡಿ ನೀಡಿದ ಸಾಲಕ್ಕೆ ಇದು ಅನ್ವಯ ಆಗುವುದಿಲ್ಲ. ಯಾವುದೇ ಸದಸ್ಯರು ಒಂದಕ್ಕಿಂತ ಹೆಚ್ಚು ಸಹಕಾರ ಸಂಘಗಳ ಮೂಲಕ ಸಾಲ ಪಡೆದಿದ್ದರೆ ಒಂದು ಸಂಸ್ಥೆಯಿಂದ ಮಾತ್ರವೇ ಸಾಲಮನ್ನಾ ಸೌಲಭ್ಯ ಪಡೆಯತಕ್ಕದ್ದು.

ಹೊರಬಾಕಿ ಇರುವ ಸಾಲವು ಸುಸ್ತಿಯಾಗಿದ್ದಲ್ಲಿ ಜೂ.20ಕ್ಕೆ ಬಾಕಿ ಇರುವ ಮತ್ತು ಮರು ಪಾವತಿಸುವ ದಿನಾಂಕಕ್ಕೆ ಅನ್ವಯಿಸುವ ಬಡ್ಡಿ ಸೇರಿ 50 ಸಾವಿರ ರೂ.ಕ್ಕಿಂತ ಹೆಚ್ಚಿನ ಮೊತ್ತವನ್ನು ಸಾಲ ಪಡೆದ ರೈತರು 2017ರ ಡಿ.31ರೊಳಗಾಗಿ ಮರು ಪಾವತಿ ಮಾಡಿದಲ್ಲಿ, ಅಸಲು ಮತ್ತು ಬಡ್ಡಿ ಸೇರಿ 50 ಸಾವಿರ ರೂ.ಗಳ ವರೆಗಿನ ಸಾಲವನ್ನು ಮನ್ನಾ ಮಾಡಲಾಗುವುದು ಎಂಬುದು ಸೇರಿದಂತೆ 14 ಷರತ್ತುಗಳನ್ನು ವಿಧಿಸಲಾಗಿದೆ.

ಉತ್ತರ ಪ್ರದೇಶ, ಪಂಜಾಬ್, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಲ್ಲಿ ಸಾಲಮನ್ನಾ ಘೋಷಣೆಯಾಗಿದ್ದರೂ, ಈ ವರೆಗೂ ಆದೇಶ ಹೊರಬಿದ್ದಿಲ್ಲ. ಆದರೆ, ರಾಜ್ಯ ಸರಕಾರ ರೈತರ ಬೆಳೆ ಸಾಲಮನ್ನಾ ನಿಟ್ಟಿನಲ್ಲಿ ಆದೇಶ ಹೊರಡಿಸಿರುವುದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X