ಅಪರಿಚಿತ ವಾಹನ ಢಿಕ್ಕಿ: ಪಾದಾಚಾರಿ ಸಾವು

ಉಡುಪಿ, ಜೂ.25: ಅಪರಿಚಿತ ವಾಹನವೊಂದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಬಡಿದು, ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಅಂಬಾಗಿಲು ಜಂಕ್ಷನ್ ಬಳಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಸಾಸ್ತಾನದ ಪ್ರಭಾಕರ ನಾವಡ (61) ಎಂದು ಗುರುತಿಸಲಾಗಿದೆ. ಮನೆಗೆ ಅಪರೂಪಕ್ಕೆ ಹೋಗುವ ನಾವಡ ಅವರು ರಾತ್ರಿ ಅಂಬಾಗಿಲು ಬಳಿ ರಸ್ತೆ ಬದಿ ನಿಂತಿದ್ದಾಗ ಬ್ರಹ್ಮಾವರ ಕಡೆಯಿಂದ ಉಡುಪಿಯತ್ತ ಅತಿವೇಗವಾಗಿ ಧಾವಿಸುತ್ತಿದ್ದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟರೆಂದು ಹೇಳಲಾಗಿದೆ. ಡಿಕ್ಕಿ ಹೊಡೆದ ವಾಹನ ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿ ಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





