ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು
ಉಡುಪಿ, ಜೂ.26: ಅಪರಿಚಿತ ವಾಹನವೊಂದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಬಡಿದು, ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಅಂಬಾಗಿಲು ಜಂಕ್ಷನ್ ಬಳಿ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಸಾಸ್ತಾನದ ಪ್ರಭಾಕರ ನಾವಡ (61) ಎಂದು ಗುರುತಿಸಲಾಗಿದೆ. ನಾವಡ ಅವರು ರಾತ್ರಿ ಅಂಬಾಗಿಲು ಬಳಿ ರಸ್ತೆ ಬದಿ ನಿಂತಿದ್ದಾಗ ಬ್ರಹ್ಮಾವರ ಕಡೆಯಿಂದ ಉಡುಪಿಯತ್ತ ಅತಿವೇಗವಾಗಿ ಧಾವಿಸುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದು ಮೃತಪಟ್ಟರೆಂದು ಹೇಳಲಾಗಿದೆ.
ಢಿಕ್ಕಿ ಹೊಡೆದ ವಾಹನ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





