Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಗ್ಲೆಂಡ್‌ಗೆ ಟ್ವೆಂಟಿ-20 ಸರಣಿ:...

ಇಂಗ್ಲೆಂಡ್‌ಗೆ ಟ್ವೆಂಟಿ-20 ಸರಣಿ: ದಕ್ಷಿಣ ಆಫ್ರಿಕಕ್ಕೆ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ26 Jun 2017 11:02 PM IST
share
ಇಂಗ್ಲೆಂಡ್‌ಗೆ ಟ್ವೆಂಟಿ-20 ಸರಣಿ: ದಕ್ಷಿಣ ಆಫ್ರಿಕಕ್ಕೆ ಮುಖಭಂಗ

ಕಾರ್ಡಿಫ್, ಜೂ.27: ಚೊಚ್ಚಲ ಪಂದ್ಯವನ್ನಾಡಿದ ಎಡಗೈ ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಸಾಹಸದ ನೆರವಿನಿಂದ ಇಂಗ್ಲೆಂಡ್ ತಂಡ ದಕ್ಷಿಣ ಆಫ್ರಿಕ ವಿರುದ್ಧದ ಮೂರನೆ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯವನ್ನು 19 ರನ್‌ಗಳ ಅಂತರದಿಂದ ರೋಚಕವಾಗಿ ಗೆದ್ದುಕೊಂಡಿದೆ.

ಈ ಗೆಲುವಿನೊಂದಿಗೆ ಆಂಗ್ಲರು ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದ್ದಾರೆ.

ಸೋಫಿಯಾಗಾರ್ಡನ್‌ನಲ್ಲಿ ರವಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಮಲಾನ್(78 ರನ್, 44 ಎಸೆತ, 12 ಬೌಂಡರಿ, 2 ಸಿಕ್ಸರ್) ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಿತ್ತು.

 ಗೆಲ್ಲಲು ಕಠಿಣ ಸವಾಲು ಪಡೆದಿದ್ದ ದಕ್ಷಿಣ ಆಫ್ರಿಕ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 162 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ಎಬಿಡಿವಿಲಿಯರ್ಸ್(35 ರನ್, 19 ಎಸೆತ, 2 ಬೌಂಡರಿ, 2 ಸಿಕ್ಸರ್) ಒಂದುಹಂತದಲ್ಲಿ ಪಂದ್ಯವನ್ನು ತನ್ನತ್ತ ಸೆಳೆಯುವ ವಿಶ್ವಾಸ ಮೂಡಿಸಿದ್ದರು. ಆದರೆ, 11ನೆ ಓವರ್‌ನಲ್ಲಿ ಮಾಸನ್ ಕ್ರೇನ್ ಎಸೆತದಲ್ಲಿ ಔಟಾದರು. ಡಿವಿಲಿಯರ್ಸ್ ಔಟಾಗಿರುವುದು ಪಂದ್ಯದ ಟರ್ನಿಂಗ್ ಪಾಯಿಂಟ್ ಎನಿಸಿಕೊಂಡಿತು.

ಮೊದಲ 9 ಓವರ್‌ಗಳಲ್ಲಿ ಕೇವಲ 59 ರನ್ ಗಳಿಸಿದ್ದ ಹರಿಣ ಪಡೆ ಚೇಸಿಂಗ್‌ನ ವೇಳೆ ನಿರೀಕ್ಷಿತ ಮಟ್ಟದ ಆರಂಭ ಪಡೆಯಲಿಲ್ಲ. ಅಗತ್ಯದ ರನ್‌ರೇಟ್ ಏರುತ್ತಿದ್ದಾಗ ನಾಯಕ ಡಿವಿಲಿಯರ್ಸ್ ಬಿರುಸಿನ ಬ್ಯಾಟಿಂಗ್‌ನಿಂದ ಇನಿಂಗ್ಸ್‌ಗೆ ಚುರುಕು ಮುಟ್ಟಿಸಿದ್ದರು. ಡಿವಿಲಿಯರ್ಸ್ ಔಟಾದ ಬೆನ್ನಿಗೇ ಡೇವಿಡ್ ಮಿಲ್ಲರ್ ಪೆವಿಲಿಯನ್‌ಗೆ ತೆರಳಿದಾಗ ಆಫ್ರಿಕದ ಸ್ಕೋರ್ 5 ವಿಕೆಟ್ ನಷ್ಟಕ್ಕೆ 86. ಆಫ್ರಿಕದ ಇನಿಂಗ್ಸ್‌ನಲ್ಲಿ ಮೊಸೆಲ್(36) ಹಾಗೂ ಫೆಲುಕ್ವಾವೊ(ಅಜೇಯ 27) ಕೆಳ ಸರದಿಯಲ್ಲಿ ಒಂದಷ್ಟು ಹೋರಾಟ ನೀಡಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ವಿಫಲರಾದರು.

 ಇಂಗ್ಲೆಂಡ್‌ನ ಪರ ಕ್ರಿಸ್ ಜೋರ್ಡನ್(3-31) ಹಾಗೂ ಕರಾನ್(2-22) ಐದು ವಿಕೆಟ್‌ಗಳನ್ನು ಹಂಚಿಕೊಂಡರು.

ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡಕ್ಕೆ ಅಲೆಕ್ಸ್ ಹೇಲ್ಸ್(36) ಹಾಗೂ ಮಲಾನ್(78) ಉತ್ತಮ ಆರಂಭ ಒದಗಿಸಿದರು. ಈ ಜೋಡಿ 2ನೆ ವಿಕೆಟ್‌ಗೆ 105 ರನ್ ಜೊತೆಯಾಟ ನಡೆಸಿತ್ತು. ಈ ಇಬ್ಬರು ಆಟಗಾರರು ದಕ್ಷಿಣ ಆಫ್ರಿಕ ಸರಣಿ ಗೆಲ್ಲುವ ಕನಸನ್ನು ಭಗ್ನಗೊಳಿಸಿದರು.

ಸಂಕ್ಷಿಪ್ತ ಸ್ಕೋರ್

ಇಂಗ್ಲೆಂಡ್: 20 ಓವರ್‌ಗಳಲ್ಲಿ 181/8

(ಮಲಾನ್ 78, ರಾಯ್ 36, ಬಟ್ಲರ್ 31, ಪ್ಯಾಟರ್ಸನ್ 4-32)

ದಕ್ಷಿಣ ಆಫ್ರಿಕ: 20 ಓವರ್‌ಗಳಲ್ಲಿ 162/7

(ಮೊಸೆಲ್ 36, ಡಿವಿಲಿಯರ್ಸ್ 35, ಸ್ಮಟ್ಸ್ 29, ಜೋರ್ಡನ್ 3-31, ಕರಾನ್ 2-22)

ಪಂದ್ಯಶ್ರೇಷ್ಠ: ಡೇವಿಡ್ ಮಲಾನ್(ಇಂಗ್ಲೆಂಡ್).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X