Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಸತಿ ನಿಲಯಗಳ ನೌಕರರ ಖಾಯಂಗೆ ಆಗ್ರಹಿಸಿ...

ವಸತಿ ನಿಲಯಗಳ ನೌಕರರ ಖಾಯಂಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Jun 2017 7:04 PM IST
share
ವಸತಿ ನಿಲಯಗಳ ನೌಕರರ ಖಾಯಂಗೆ ಆಗ್ರಹಿಸಿ ಪ್ರತಿಭಟನೆ


ಬೆಂಗಳೂರು, ಜೂ.27: ರಾಜ್ಯಾದ್ಯಂತ ಸರಕಾರಿ ವಸತಿ ನಿಲಯಗಳು, ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಸೇರಿದಂತೆ ಇನ್ನಿತರೆ ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಸಿಟಿ ರೈಲು ನಿಲ್ದಾಣದ ಎದುರು ಹಾಸ್ಟೆಲ್ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ನಿತ್ಯಾನಂದಸ್ವಾಮಿ, ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಇರುವ ಎಸ್ಸಿ, ಎಸ್ಟಿ, ಹಿಂದುಳಿದ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ ವಸತಿ ನಿಲಯಗಳಲ್ಲಿ ಅಡುಗೆ, ಸ್ವಚ್ಛತೆ, ಕಾವಲು ಮುಂತಾದ ಕೆಲಸಗಳನ್ನು ಮಾಡುತ್ತಿರುವ ನೌಕರರು ಹತ್ತಾರು ವರ್ಷಗಳಿಂದ ಗುತ್ತಿಗೆ, ದಿನಗೂಲಿ ನೌಕರರರಾಗಿ ದುಡಿಯುತ್ತಿದ್ದಾರೆ. ಖಾಯಂ ಸ್ಪರೂಪದ ಕೆಲಸಕ್ಕಾಗಿ ಅವರನ್ನು ನಿಯೋಜಿಸಲಾಗಿದ್ದರೂ ನೌಕರರನ್ನು ಖಾಯಂಗೊಳಿಸಿ ಅವರಿಗೆ ಕಾನೂನು ಬದ್ಧವಾಗಿ ವೇತನ ಮತ್ತು ಇನ್ನಿತರೆ ಸೌಲಭ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ. ಒಂದೊಂದು ಜಿಲ್ಲೆಯಲ್ಲಿ ಒಂದೊಂದು ರೀತಿಯ ವೇತನ ನೀಡಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಎನ್‌ಜಿಓಗಳ ಮೂಲಕ ಗುತ್ತಿಗೆ ಆಧಾರದಲ್ಲಿ ದುಡಿಸಲಾಗುತ್ತಿದೆ. ಗುತ್ತಿಗೆದಾರರು ತಿಂಗಳುಗಟ್ಟಲೇ ಸಂಬಳ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನೌಕರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಹರಿಸುತ್ತಿಲ್ಲ. ಹಲವು ಮುಷ್ಕರ, ಪ್ರತಿಭಟನೆ ನಡೆಸಿ ಸರಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಚಿವರು ಪ್ರತಿಬಾರಿ ನೌಕರರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಹೀಗಾಗಿ ಕೂಡಲೇ ಸರಕಾರ ನೌಕರರ ಬೇಡಿಕೆಗಳನ್ನು ಒಪ್ಪಿಕೊಂಡು ಲಿಖಿತ ರೂಪದಲ್ಲಿ ಭರವಸೆ ನೀಡಬೇಕು. ಇಲ್ಲದಿದ್ದರೆ ಮುಷ್ಕರವನ್ನು ಕೈ ಬಿಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಐದು ವರ್ಷ ನರಂತರ ಸೇವೆ ಸಲ್ಲಿಸಿದ ಎಲ್ಲ ಹಾಸ್ಟೆಲ್ ಹಾಗೂ ವಸತಿ ಶಾಲೆ ದಿನಗೂಲಿ ನೌಕರರ ಸೇವೆಯನ್ನು ಕಾಯಂಗೊಳಿಸಿ ಅವರನ್ನು ಸರಕಾರಿ ನೌಕರರೆಂದು ಘೋಷಿಸಬೇಕು. ಎನ್‌ಜಿಓಗಳ ಮೂಲಕ ಮೂಲಕ ದುಡಿಸುವುದನ್ನು ಕೈ ಬಿಡಬೇಕು. ಹಾಸ್ಟೆಲ್ ನೌಕರರಿಗೆ ವೇತನ ಹಾಗೂ ತುಟ್ಟಿಭತ್ತೆ ಸೇರಿ ತಿಂಗಳಿಗೆ ಕನಿಷ್ಠ 10 ಸಾವಿರ ರೂ.ಗಳಷ್ಟು ವೇತನ ನೀಡಬೇಕು. ಅದುವರೆಗೂ 2009ರ ಗೆಜೆಟ್ ನೋಟಿಫಿಕೇಷನ್ ನಿಗದಿಪಡಿಸಿದ ಮೂಲ ವೇತನ ಹಾಗೂ ತುಟ್ಟಿಭತ್ತೆ ಸಹಿತ ಸಂಬಳವನ್ನು ಯಾವುದೇ ತಾರತಮ್ಯವಿಲ್ಲದೆ ಸಂದಾಯ ಮಾಡಬೇಕು.

ಕಾರ್ಮಿಕರಿಗೆ ಅನ್ವಯವಾಗುವ ಎಲ್ಲ ಕಾನೂನು ಸೌಲಭ್ಯಗಳನ್ನು ಹಾಸ್ಟೆಲ್ ಮತ್ತು ವಸತಿ ಶಾಲೆ ಗುತ್ತಿಗೆ, ದಿನಗೂಲಿ ನೌಕರರಿಗೂ ನೀಡಬೇಕು. ಖಾಯಂ ಅಥವಾ ಗುತ್ತಿಗೆ ಎಂಬ ಭೇದವಿಲ್ಲದ ಪ್ರತಿ ತಿಂಗಳ 10ನೆ ತಾರಿಕಿನೊಳಗೆ ಅವರ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ವೇತನವನ್ನು ಜಮಾ ಮಾಡಬೇಕು. ಹಾಸ್ಟೆಲ್ ನೌಕರರ ವೇತನದಲ್ಲಿ ಕಡಿತ ಮಾಡಲಾದ ಇಎಸ್‌ಐ ಮತ್ತು ಪಿಎಫ್ ಹಣವನ್ನು ಸಂಬಂಧಪಟ್ಟ ಇಲಾಖೆಗೆ ಜಮಾ ಮಾಡಿದ ಬಗ್ಗೆ ದಾಖಲೆಗಳನ್ನು ಒದಗಿಸಬೇಕು. ಹಾಸ್ಟೆಲ್‌ಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಸರಕಾರವನ್ನು ಆಗ್ರಹಿಸಿದರು.

ರೈಲ್ವೆ ನಿಲ್ದಾಣದಲ್ಲಿ ತಡೆದ ಪೊಲೀಸರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಸಿಟಿ ರೈಲು ನಿಲ್ದಾಣದಿಂದ ಸ್ವಾತಂತ್ರ ಉದ್ಯಾನದವರೆಗೂ ರ್ಯಾಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಪೊಲೀಸರು ರ್ಯಾಲಿಗೆ ಅನುಮತಿ ನಿರಾಕರಿಸಿದ ಪರಿಣಾಮ 4-5 ಸಾವಿರ ಗುತ್ತಿಗೆ, ಹೊರಗುತ್ತಿಗೆ ನೌಕರರು ಸಿಟಿ ರೈಲು ನಿಲ್ದಾಣದ ರಸ್ತೆಯಲ್ಲಿ ಪ್ರತಿಭಟನೆ ಮುಂದುವರಿಸಿದರು. ಇದರಿಂದಾಗಿ ರೈಲು ನಿಲ್ದಾಣದ ಬಳಿ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X