Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೇಜಾವರ ಶ್ರೀ ಇಫ್ತಾರ್ ಕೂಟ ದೇಶಕ್ಕೆ...

ಪೇಜಾವರ ಶ್ರೀ ಇಫ್ತಾರ್ ಕೂಟ ದೇಶಕ್ಕೆ ಮಾದರಿ: ಹುಸೈನ್ ದಾರಿಮಿ

ವಾರ್ತಾಭಾರತಿವಾರ್ತಾಭಾರತಿ27 Jun 2017 7:16 PM IST
share
ಪೇಜಾವರ ಶ್ರೀ ಇಫ್ತಾರ್ ಕೂಟ ದೇಶಕ್ಕೆ ಮಾದರಿ: ಹುಸೈನ್ ದಾರಿಮಿ

 ಪುತ್ತೂರು, ಜೂ. 27: ಇಫ್ತಾರ್ ಕೂಟ ನಡೆಸುವ ಮೂಲಕ ಸಮಾಜಕ್ಕೆ ಹೊಸ ಸಂದೇಶವನ್ನು ನೀಡಿದ ಉಡುಪಿಯ ಪೇಜಾವರ ಮಠದ ಸ್ವಾಮೀಜಿ ಅವರು ಹಿಂದೂ-ಮುಸ್ಲಿಂ ಸಹೋದರತೆಗೆ ಒತ್ತು ನೀಡುವ ಕೆಲಸ ಮಾಡಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ದೇಶಕ್ಕೆ ಮಾದರಿಯಾಗುವ ಸಂದೇಶವನ್ನು ಸ್ವಾಮೀಜಿ ನೀಡಿರುವುದನ್ನು ಮುಸ್ಲಿಂ ಸಮಾಜದ ಪರವಾಗಿ ಮುಕ್ತಕಂಠದಿಂದ ಶ್ಲಾಘಿಸುವುದಾಗಿ ಧಾರ್ಮಿಕ ವಿದ್ವಾಂಸ, ಕರ್ನಾಟಕ ಇಸ್ಲಾಮಿಕ್ ಸೆಂಟರ್‌ನ ವ್ಯವಸ್ಥಾಪಕ ಕೆ.ಆರ್. ಹುಸೈನ್ ದಾರಿಮಿ ತಿಳಿಸಿದ್ದಾರೆ.

ಪುತ್ತೂರಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೌಹಾರ್ದತೆಗೆ ಮತ್ತೊಂದು ಆಯಾಮವನ್ನು ಪೇಜಾವರ ಸ್ವಾಮೀಜಿ ನೀಡಿದ್ದಾರೆ. ಆದರೆ ಪೇಜಾವರ ಸ್ವಾಮೀಜಿ ಅವರು ನಡೆಸಿದ ಇಪ್ತಾರ್ ಕೂಟದ ಬಗ್ಗೆ ಅನಗತ್ಯ ಚರ್ಚೆಗಳು ನಡೆಯುತ್ತಿವೆ. ಆದರೆ ಇದು ಯಾಕೆ ನಡೆಯುತ್ತದೆ ಎಂದೇ ಅರ್ಥವಾಗುತ್ತಿಲ್ಲ. ಭಾರತದ ಇತಿಹಾಸವನ್ನು ನೋಡಿದರೂ ಇಲ್ಲಿ ಎಲ್ಲಾ ಧರ್ಮಗಳ ಹಬ್ಬಗಳಲ್ಲೂ ಸಹೋದರತ್ವವನ್ನು ಮೆರೆದ ಸಾಕ್ಷಿಗಳಿವೆ. ಸೌದಿ, ಮಕ್ಕಾ ಗಳಿಂದ ಭಾರತಕ್ಕೆ ಬಂದ ಮುಸ್ಲಿಂ ಸಮಾಜಕ್ಕೆ ಇಲ್ಲಿನ ಹಿಂದೂ ಬಾಂಧವರು ತಮ್ಮ ದೇವಾಲಯಗಳ ಪಕ್ಕದಲ್ಲೇ ಧಾರ್ಮಿಕ ಚಟುವಟಿಕೆ ನಡೆಸಲು ಜಾಗ ಕೊಟ್ಟು ಸೌಹಾರ್ದತೆ ಮೆರೆದಿದ್ದಾರೆ. ಆ ಕುಟುಂಬಗಳಿಂದ ಮದುವೆಯಾಗಿ ಧಾರ್ಮಿಕ ಬಾಂಧವ್ಯವನ್ನು ಉದ್ದೀಪನಗೊಳಿಸಿದ್ದಾರೆ. ದೀಪಾವಳಿ ಹಬ್ಬವನ್ನು ಎಲ್ಲಾ ಧರ್ಮದವರು ಒಗ್ಗೂಡಿ ಆಚರಣೆ ನಡೆಸಿದ ಉದಾಹರಣೆಗಳಿವೆ. ಪೇಜಾವರ ಸ್ವಾಮೀಜಿ ಮಾಡಿದಂತಹ ಕೆಲಸಗಳೇ ಇಂದು ಭಾರತಕ್ಕೆ ಬೇಕಾಗಿದೆ ಎಂದವರು ಹೇಳಿದರು.

ಶಾಂತಿ ಸೌಹಾರ್ದತೆ ಕಾಪಾಡಲು ಪೇಜಾವರ ಸ್ವಾಮೀಜಿ ತಮ್ಮ ಕೊಡುಗೆಯನ್ನು ಇಫ್ತಾರ್ ಕೂಟ ನಡೆಸುವ ಮೂಲಕ ಸಮಾಜಕ್ಕೆ ನೀಡಿದ್ದಾರೆ. ಇಂತಹ ಚಿಂತನೆಗಳು ಸಮಾಜಕ್ಕೆ ಅಗತ್ಯ. ಕ್ರೈಸ್ತ, ಮುಸ್ಲಿಂ ಹಾಗೂ ಹಿಂದೂ ಧರ್ಮಗಳ ಜನತೆಯ ಬದುಕಿಗೆ ಹೊಸ ಅರ್ಥ ನೀಡಿದ ಸ್ವಾಮೀಜಿ ಅವರನ್ನು ನಾವೆಲ್ಲರೂ ಒಂದಾಗಿ ಶ್ಲಾಘಿಸಬೇಕಾಗಿದೆ. ಬದಲಿಗೆ ಅನಗತ್ಯವಾದ ಚರ್ಚೆಯ ಅಗತ್ಯವಿಲ್ಲ ಎಂದವರು ಹೇಳಿದರು.

ಎಲ್ಲಾ ಧರ್ಮಗಳಲ್ಲೂ ಹಬ್ಬಗಳ ಮೂಲಕ ಇಂತಹ ಸಂದೇಶ ಸಮಾಜದಲ್ಲಿ ಹರಡಬೇಕಾಗಿದೆ. ಹಿಂದೂ ಸಮಾಜದ ಸ್ವಾಮೀಜಿಗಳು, ಕ್ರೈಸ್ತ ಧರ್ಮದ ಪಾದ್ರಿಗಳು ಹಾಗೂ ಮುಸ್ಲಿಂ ಸಮಾಜದ ಉಲಮಾಗಳು ಒಂದೆಡೆ ಕುಳಿತು ಧರ್ಮಗಳ ಆಚರಣೆಯ ನಡುವೆ ಇರುವ ಕೆಡುಕುಗಳನ್ನು ನಿವಾರಿಸುವ ಕೆಲಸ ಭಾರತದಲ್ಲಿ ನಡೆಯಬೇಕಾಗಿದೆ ಎಂದಿರುವ ಅವರು ಭಾರತ ದೇಶದ ಎಲ್ಲಾ ಮಂದಿಯೂ ಸಹೋದರರಾಗಿ ಬಾಳುವ ವಾತಾವರಣ ನಿರ್ಮಾಣ ಮಾಡುವಲ್ಲಿ ಪೇಜಾವರ ಸ್ವಾಮೀಜಿ ಮಾಡಿರುವಂತಹ ಅತ್ಯುತ್ತಮ ಹಾಗೂ ಕ್ರೀಯಾತ್ಮಕ ಚಟುವಟಿಕೆಗಳನ್ನು ಎಲ್ಲರೂ ಮಾಡಬೇಕಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X