Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳದ ಜೆಸಿಂತಾರನ್ನು ಕೂಡಲೇ ಭಾರತಕ್ಕೆ...

ಕಾರ್ಕಳದ ಜೆಸಿಂತಾರನ್ನು ಕೂಡಲೇ ಭಾರತಕ್ಕೆ ಕಳುಹಿಸಲು ಸುಶ್ಮಾ ಸ್ವರಾಜ್ ಆದೇಶ

ಫಲ ನೀಡುತ್ತಿರುವ ಮಾನವ ಹಕ್ಕುಗಳ ಪ್ರತಿಷ್ಠಾನದ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ27 Jun 2017 9:48 PM IST
share
ಕಾರ್ಕಳದ ಜೆಸಿಂತಾರನ್ನು ಕೂಡಲೇ ಭಾರತಕ್ಕೆ ಕಳುಹಿಸಲು ಸುಶ್ಮಾ ಸ್ವರಾಜ್ ಆದೇಶ

ಉಡುಪಿ, ಜೂ.27: ಅನಧಿಕೃತ ಏಜೆಂಟರನ್ನು ನಂಬಿ ಸೌದಿ ಅರೇಬಿಯಾಕ್ಕೆ ತೆರಳಿ, ಕಳೆದೊಂದು ವರ್ಷದಿಂದ ನರಕಯಾತನೆ ಅನುಭವಿಸುತ್ತಿರುವ ಕಾರ್ಕಳದ ಜೆಸಿಂತಾರನ್ನು ಕೂಡಲೇ ಭಾರತಕ್ಕೆ ಕಳುಹಿಸಬೇಕೆಂದು ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ಆದೇಶಿಸಿದ್ದಾರೆ ಎಂದು ಆಕೆಯ ಬಿಡುಗಡೆ ಮತ್ತು ಭಾರತಕ್ಕೆ ಮರಳಿ ಕರೆತರುವ ಬಗ್ಗೆ ಹೋರಾಡುತ್ತಿರುವ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ ಶ್ಯಾನುಭಾಗ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಿಯಾದ್‌ನ ಭಾರತೀಯ ದೂತವಾಸದ ಅಧಿಕಾರಿ ಜಾವೇದ್ ‘ಜೆಸಿಂತಾಳ ಬಿಡುಗಡೆಗೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು’ ಎಂದು ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನಕ್ಕೆ ಭರವಸೆ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಉಡುಪಿ ಜಿಲ್ಲೆಯ ಕಾರ್ಕಳದ ಜೆಸಿಂತಾರ ಗಂಡ ಕಳೆದ ವರ್ಷ ತೀರಿಕೊಂಡಾಗ ತನ್ನ ಮೂರು ಮಕ್ಕಳ ಪಾಲನೆ ಹಾಗೂ ಅವರ ವಿದ್ಯಾಭ್ಯಾಸಕ್ಕ್ಕಾಗಿ ಆಕೆ ಉದ್ಯೋಗದ ಹುಡುಕಾಟದಲ್ಲಿದ್ದಳು. ಕತಾರ್‌ನಲ್ಲಿ ಭಾರತೀಯ ಕುಟುಂಬವೊಂದಕ್ಕೆ ಮಕ್ಕಳ ಪಾಲನೆಗಾಗಿ ಮಹಿಳೆಯೋರ್ವಳ ಅಗತ್ಯವಿದೆ ಎಂದು ತಿಳಿಸಿದ ಮಂಗಳೂರಿನ ಏಜೆಂಟ್ ಜೇಮ್ಸ್ ಎನ್ನುವವ ತಿಂಗಳಿಗೆ 25,000 ರೂ. ಸಂಬಳದ ಕೆಲಸ ಕೊಡುವುದಾಗಿ ನಂಬಿಸಿದ.
ಯಾವುದೇ ಖರ್ಚುಗಳನ್ನು ತೆಗೆದುಕೊಳ್ಳದೇ ಪ್ರಯಾಣಕ್ಕೆ ಬೇಕಾಗಿರುವ ಪಾಸ್‌ಪೋರ್ಟ್, ವೀಸಾಗಳನ್ನು ಆತನೇ ಏರ್ಪಾಡು ಮಾಡಿದುದರಿಂದ ಜೆಸಿಂತಾಗೆ ಆತನ ಮೇಲೆ ಅತೀವ ನಂಬಿಕೆಯುಂಟಾಯಿತು. ಮುಂಬೈಗೆ ತೆರಳಿದ ಜೆಸಿಂತಾ ಕಳೆದ ವರ್ಷದ ಜೂ.19ರಂದು ಮಧ್ಯಪ್ರಾಚ್ಯದ ವಿಮಾನ ವನ್ನೇರಿದಳು. ಮರುದಿನ ಯಾವುದೋ ಒಂದು ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ತಾನು ಬಂದಿದ್ದು ಕತಾರ್ ದೇಶಕ್ಕಲ್ಲ, ಸೌದಿ ಅರೇಬಿಯಾಕ್ಕೆ ಎಂದು ತಿಳಿದಾಗ ಆಕೆಗೆ ಆಕಾಶವೇ ಕಳಚಿಬಿದ್ದಂತಾಗಿತ್ತು.

ಅಲ್ಲಿನ ಯಂಬು ಎಂಬ ಊರಿನ ಉದ್ಯೋಗದಾತನ ಬೃಹತ್ ಬಂಗ್ಲೆಯಲ್ಲಿ ದಿನದ 16 ಗಂಟೆಗಳ ಕಾಲ ದುಡಿಯುವ ಅನಿವಾರ್ಯತೆ. ಊರು, ಭಾಷೆ ಯಾವುದೂ ಜೆಸಿಂತಾರಿಗೆ ಎದುರಾಯಿತು. ಈ ನಡುವೆ ಆಕೆಯ ಆರೋಗ್ಯ ವಿಷಮಿಸಿ ಊರಿಗೆ ಕಳುಹಿಸುವಂತೆ ಮಾಡಿದ ಮನವಿ ವ್ಯರ್ಥವಾಯಿತು. ಆಕೆಯ ದೈಹಿಕ ಹಿಂಸೆ ಆರಂಭಗೊಂಡಿತು.

ಕಳೆದ ಡಿಸೆಂಬರ್‌ನಲ್ಲಿ ಅದೇ ಊರಿನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಕಾರು ಚಾಲಕರೊರ್ವರ ಮೂಲಕ ಜೆಸಿಂತಾ ಕಾರ್ಕಳದಲ್ಲಿರುವ ತನ್ನ ಮಕ್ಕಳನ್ನು ಸಂಪರ್ಕಿಸಿ ತಾನು ಮೋಸ ಹೋಗಿರುವ ಕುರಿತು ಮಾಹಿತಿ ನೀಡಿದರು. ಅವರು ಗಣ್ಯರೊಬ್ಬರ ನೆರವಿನಿಂದ ಭಾರತ ದೂತಾವಾಸವನ್ನು ಸಂಪರ್ಕಿಸಿದರೂ ತಾಯಿಯ ಸಂಪರ್ಕ ಸಾಧ್ಯವಾಗಲೇ ಇಲ್ಲ. ಬಳಿಕ ಅವರು ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನವನ್ನು ಸಂಪರ್ಕಿಸಿ ತಾಯಿಯನ್ನು ರಕ್ಷಿಸುವಂತೆ ಮನವಿ ಮಾಡಿದರು.

ಪ್ರತಿಷ್ಠಾನದ ಸತತ ಪ್ರಯತ್ನದಿಂದ ಹಾಗೂ ಕೊಲ್ಲಿ ರಾಷ್ಟ್ರದಲ್ಲಿರುವ ಕನ್ನಡಿಗರ ನೆರವಿನಿಂದ ಜೆಸಿಂತಾ ಬಿಡುಗಡೆಗೆ ಪ್ರಯತ್ನಿಸಿ ಸಾಧ್ಯವಾಗದಿದ್ದಾಗ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್‌ರನ್ನು ಸಂಪರ್ಕಿಸಿ ಅವರ ನೆರವು ಪಡೆಯಲಾಯಿತು. ಇದೀಗ ಸುಶ್ಮಾ, ಜೆಸಿಂತಾ ಬಿಡುಗಡೆ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಡಾ.ಶ್ಯಾನುಭಾಗ್ ತಿಳಿಸಿದ್ದಾರೆ. ಪ್ರತಿಷ್ಠಾನದ ಸತತ ಪ್ರಯತ್ನದಿಂದ ಹಾಗೂ ಕೊಲ್ಲಿ ರಾಷ್ಟ್ರದಲ್ಲಿರುವ ಕನ್ನಡಿಗರ ನೆರವಿನಿಂದ ಜೆಸಿಂತಾ ಬಿಡುಗಡೆಗೆ ಪ್ರಯತ್ನಿಸಿ ಸಾಧ್ಯವಾಗದಿದ್ದಾಗ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್‌ರನ್ನು ಸಂಪರ್ಕಿಸಿ ಅವರ ನೆರವು ಪಡೆಯಲಾಯಿತು. ಇದೀಗ ಸುಶ್ಮಾ,ಜೆಸಿಂತಾ ಬಿಡುಗಡೆ ಕ್ರಮಗಳನ್ನುಕೈಗೊಂಡಿದ್ದಾರೆ ಎಂದು ಡಾ.ಶ್ಯಾನುಭಾಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X