Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿಮ್ಮ ನೆಲವನ್ನು ಬಳಸಲು ಭಯೋತ್ಪಾದಕರಿಗೆ...

ನಿಮ್ಮ ನೆಲವನ್ನು ಬಳಸಲು ಭಯೋತ್ಪಾದಕರಿಗೆ ಅವಕಾಶ ನೀಡಬೇಡಿ

ಪಾಕಿಸ್ತಾನಕ್ಕೆ ಭಾರತ,ಅಮೆರಿಕದ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ27 Jun 2017 10:17 PM IST
share
ನಿಮ್ಮ ನೆಲವನ್ನು ಬಳಸಲು ಭಯೋತ್ಪಾದಕರಿಗೆ ಅವಕಾಶ ನೀಡಬೇಡಿ

ವಾಷಿಂಗ್ಟನ್,ಜೂ.27: ಪಾಕಿಸ್ತಾನಕ್ಕೆ ಕಠಿಣ ಸಂದೇಶವೊಂದನ್ನು ರವಾನಿಸಿರುವ ಭಾರತ ಮತ್ತು ಅಮೆರಿಕ, ಇತರ ರಾಷ್ಟ್ರಗಳ ಮೇಲೆ ಭಯೋತ್ಪಾದಕ ದಾಳಿಗಳನ್ನು ನಡೆಸಲು ತನ್ನ ನೆಲದ ಬಳಕೆಯಾಗದಂತೆ ನೋಡಿಕೊಳ್ಳುವಂತೆ ಆ ರಾಷ್ಟ್ರಕ್ಕೆ ಸೂಚಿಸಿವೆ. ಜೊತೆಗೆ ಮುಂಬೈ ಮತ್ತು ಭಾರತದ ಇತರ ಭಾಗಗಳಲ್ಲಿನ ಭಯೋತ್ಪಾದಕ ದಾಳಿಗಳ ರೂವಾರಿಗಳನ್ನು ಕಾನೂನಿನ ಶಿಕ್ಷೆಗೊಳಪಡಿಸುವಂತೆ ಅದಕ್ಕೆ ತಾಕೀತು ಮಾಡಿವೆ.

 ಭೀತಿವಾದವು ಜಾಗತಿಕ ಪಿಡುಗಾಗಿದ್ದು, ಅದರ ವಿರುದ್ಧ ಹೋರಾಟ ಅತ್ಯಗತ್ಯವಾಗಿದೆ ಮತ್ತು ವಿಶ್ವದ ಎಲ್ಲೆಡೆ ಭಯೋತ್ಪಾದಕರ ಸುರಕ್ಷಿತ ನೆಲೆಗಳನ್ನು ಬೇರುಸಹಿತ ನಾಶಗೊಳಿಸ ಬೇಕಿದೆ ಎಂದು ಸೋಮವಾರ ರಾತ್ರಿ ಇಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮಾತುಕತೆಯ ಬಳಿಕ ಹೊರಡಿಸಲಾದ ಜಂಟಿ ಹೇಳಿಕೆಯು ಒತ್ತಿ ಹೇಳಿದೆ.

ಮಾನವತೆಗೆ ಎದುರಾಗಿರುವ ಈ ಗಂಭೀರ ಸವಾಲಿನ ವಿರುದ್ಧ ಭಾರತ ಮತ್ತು ಅಮೆರಿಕ ಜಂಟಿಯಾಗಿ ಹೋರಾಟ ನಡೆಸಲಿವೆ ಎಂದು ಹೇಳಿಕೆಯು ತಿಳಿಸಿದೆ.
ಮುಂಬೈ(2008) ಮತ್ತು ಪಠಾಣಕೋಟ್(2016) ಭಯೋತ್ಪಾದಕ ದಾಳಿಗಳನ್ನು ನಿರ್ದಿಷ್ಟವಾಗಿ ಪ್ರಸ್ತಾಪಿಸಿರುವ ಹೇಳಿಕೆಯು, ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳು ಈ ದಾಳಿಗಳ ರೂವಾರಿಗಳಾಗಿದ್ದು, ಭಯೋತ್ಪಾದಕರನ್ನು ತ್ವರಿತವಾಗಿ ಕಾನೂನಿನ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದೆ.

ಅಲ್ ಕಾಯದಾ, ಐಸಿಸ್, ಜೈಷ್-ಎ-ಮುಹಮ್ಮದ್, ಲಷ್ಕರ್-ಎ-ತೈಬಾ, ಡಿ-ಕಂಪನಿ ಮತ್ತು ಅವುಗಳೊಂದಿಗೆ ಗುರುತಿಸಿಕೊಂಡಿರುವ ಗುಂಪುಗಳಿಂದ ಭಯೋತ್ಪಾದಕ ಬೆದರಿಕೆಗಳ ವಿರುದ್ಧ ಸಹಕಾರವನ್ನು ಇನ್ನಷ್ಟು ಬಲಗೊಳಿಸಲು ಉಭಯ ರಾಷ್ಟ್ರಗಳು ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿವೆ.

ಸೋಮವಾರ ಮೋದಿ-ಟ್ರಂಪ್ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಪಾಕಿಸ್ತಾನದ ಹಿಝ್ಬುಲ್ ಮುಜಾಹಿದೀನ್ ನಾಯಕ ಸೈಯದ್ ಸಲಾಹುದ್ದೀನ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವ ಅಮೆರಿಕದ ನಿರ್ಧಾರವನ್ನು ಪ್ರಶಂಸಿಸಿರುವ ಭಾರತವು, ಇದು ಭಯೋತ್ಪಾದನೆಯನ್ನು ಅದರ ಎಲ್ಲ ರೂಪಗಳಲ್ಲಿ ಅಂತ್ಯಗೊಳಿಸುವ ಅಮೆರಿಕದ ಬದ್ಧತೆಗೆ ನಿದರ್ಶನವಾಗಿದೆ ಎಂದು ಹೇಳಿದೆ.

ತಮ್ಮ ನಿಯೋಗ ಮಟ್ಟದ ಮಾತುಕತೆಗಳ ಬಳಿಕ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಮೋದಿ ಮತ್ತು ಟ್ರಂಪ್ ಭೀತಿವಾದದ ವಿರುದ್ಧ ಹೋರಾಡುವ ತಮ್ಮ ಬದ್ಧತೆಯ ಬಗ್ಗೆ ಮಾತನಾಡಿದರು.

ಭಯೋತ್ಪಾದನೆಯ ವಿರುದ್ಧ ಹೋರಾಟ ಮತ್ತು ಭಯೋತ್ಪಾದಕರ ಅಡಗುದಾಣಗಳ ವಿನಾಶ ಪರಸ್ಪರ ಸಹಕಾರದ ಮಹತ್ವದ ಭಾಗವಾಗಿರಲಿದೆ ಎಂದು ಹೇಳಿದ ಮೋದಿ, ಭಯೋತ್ಪಾದನೆ ಕುರಿತು ನಮ್ಮ ಸಾಮಾನ್ಯ ಕಳವಳಗಳ ನಿವಾರಣೆಗೆ ಸಹಕಾರವನ್ನು ಬಲಗೊಳಿಸಲು ಗುಪ್ತಚರ ಮಾಹಿತಿಗಳ ವಿನಿಮಯವನ್ನು ಹೆಚ್ಚಿಸಲಿದ್ದೇವೆ ಮತ್ತು ಇದಕ್ಕನುಗುಣವಾಗಿ ನಮ್ಮ ನೀತಿ ಸಮನ್ವಯವನ್ನು ಇನ್ನಷ್ಟು ಗಾಢಗೊಳಿಸಲಿದ್ದೇವೆ ಎಂದರು.

ಭಯೋತ್ಪಾದನೆಯಿಂದಾಗಿ ಅಫಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ಅಸ್ಥಿರತೆಯಿಂದಾಗಿ ಭಾರತ ಮತ್ತು ಅಮೆರಿಕ ಕಳವಳಗೊಂಡಿದ್ದು, ಅಲ್ಲಿ ಶಾಂತಿ ನೆಲೆಗೊಳ್ಳುವಂತೆ ಮಾಡಲು ಉಭಯ ರಾಷ್ಟ್ರಗಳು ನಿಕಟ ಸಮಾಲೋಚನೆ, ಸಂವಹನ ಮತ್ತು ಸಮನ್ವಯಗಳನ್ನು ಕಾಯ್ದುಕೊಳ್ಳಲಿವೆ ಎಂದರು.

ಭಾರತ ಮತ್ತು ಅಮೆರಿಕ ಭಯೋತ್ಪಾದನೆ ಸಮಸ್ಯೆಯ ಸುಳಿಗೆ ಸಿಲುಕಿವೆ ಎಂದ ಟ್ರಂಪ್, ಭಯೋತ್ಪಾದಕ ಸಂಘಟನೆಗಳು ಮತ್ತು ಅವುಗಳಿಗೆ ಸ್ಫೂರ್ತಿಯಾಗಿರುವ ಮೂಲಭೂತವಾದಿ ಸಿದ್ಧಾಂತವನ್ನು ನಾಶಗೊಳಿಸಲು ಉಭಯ ರಾಷ್ಟ್ರಗಳು ದೃಢನಿಶ್ಚಯ ಮಾಡಿವೆ. ಮೂಲಭೂತವಾದಿ ಇಸ್ಲಾಮಿಕ್ ಭೀತಿವಾದವನ್ನು ನಾವು ಮಟ್ಟಹಾಕುತ್ತೇವೆ ಎಂದರು.

ನಮ್ಮ ಸೇನೆಗಳು ಪರಸ್ಪರ ಸಹಕಾರವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ದಿನ ಶ್ರಮಿಸುತ್ತಿವೆ. ಮುಂದಿನ ತಿಂಗಳು ನಡೆಯಲಿರುವ, ಹಿಂದು ಮಹಾಸಾಗರದಲ್ಲಿ ಈ ವರೆಗಿನ ಬೃಹತ್ ಸಮುದ್ರ ಯುದ್ಧಾಭ್ಯಾಸದಲ್ಲಿ ಅವು ಜಪಾನ್ ನೌಕಾಪಡೆಯೊಂದಿಗೆ ಸೇರಲಿವೆ ಎಂದರು.

ಭಯೋತ್ಪಾದಕರು ಪ್ರವಾಸಗಳನ್ನು ಮಾಡುವುದನ್ನು ತಡೆಯಲು ಮತ್ತು ವಿಶ್ವಾದ್ಯಂತ ಭಯೋತ್ಪಾದಕರ ಭರ್ತಿ ಕಾರ್ಯಗಳನ್ನು ವಿಫಲಗೊಳಿಸಲು ಪರಸ್ಪರ ಸಹಕಾರವನ್ನು ಹೆಚ್ಚಿಸಲಾಗುವುದು ಎಂದೂ ಜಂಟಿ ಹೇಳಿಕೆಯು ಪ್ರಕಟಿಸಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X