Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಸರು ಹೊಂಡವಾದ ಈಶ್ವರಮಂಗಲ ಸುಳ್ಯಪದವು...

ಕೆಸರು ಹೊಂಡವಾದ ಈಶ್ವರಮಂಗಲ ಸುಳ್ಯಪದವು ರಸ್ತೆ

ಅಧಿಕಾರಿಗಳು, ಜನಪ್ರತಿನಿಧಿಗಳ ಆಲಸ್ಯಕ್ಕೆ ಬಲಿಯಾಗಿದೆ ಗಡಿಭಾಗದ ರಸ್ತೆ

ವಾರ್ತಾಭಾರತಿವಾರ್ತಾಭಾರತಿ28 Jun 2017 6:11 PM IST
share
ಕೆಸರು ಹೊಂಡವಾದ ಈಶ್ವರಮಂಗಲ ಸುಳ್ಯಪದವು ರಸ್ತೆ

ಪುತ್ತೂರು,ಜೂ.28: ಗಡಿ ಪ್ರದೇಶವಾದ ತಾಲೂಕಿನ ಈಶ್ವರಮಂಗಲ ಸುಳ್ಯಪದವು ಜಿಲ್ಲಾ ಪಂಚಾಯತ್ ಸಾರ್ವಜನಿಕರ ಸಂಪರ್ಕ ರಸ್ತೆ ತೀರಾ ಹದಗೆಟ್ಟಿದ್ದು, ರಸ್ತೆ ನಡುವೆ ಹಲವಾರು ಹೊಂಡ ಗುಂಡಿಗಳಾಗಿ ವಾಹನ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ.

ಈಶ್ವರಮಂಗಲದಿಂದ ಸುಳ್ಯಪದವು ಮೂಲಕ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಅರಣ್ಯ ಪ್ರದೇಶದ ನಡುವೆ ಹಾದು ಹೋಗುವ ಈ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಂಚಾರಕ್ಕೆ ಅಯೋಗ್ಯವಾಗಿದೆ. ಈ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಕಳೆದಿದ್ದು, ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಗಳೇ ಇಲ್ಲಿಲ್ಲ. ಹೊಂಡಗುಂಡಿಗಳಿಂದಲೇ ತುಂಬಿಕೊಂಡಿರುವ ರಸ್ತೆಯಲ್ಲಿ ಡಾಂಬರಿನ ಅವಶೇಷಗಳಷ್ಟೇ ಉಳಿದುಕೊಂಡಿದೆ. ವಾಹನ ಸಂಚಾರಕ್ಕೆ ಮಾತ್ರವಲ್ಲದೆ ಜನಸಂಚಾರಕ್ಕೂ ಕ್ಲಿಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕ ಕೇರಳ ಗಡಿ ಪ್ರದೇಶವಾದ ನೆಟ್ಟಣಿಗೆ ಮುಡ್ನೂರು ಮತ್ತು ಪಡುವನ್ನೂರು ಗ್ರಾಮ ವ್ಯಾಪ್ತಿಯಲ್ಲಿ ಈಶ್ವರಮಂಗಲ ಸುಳ್ಯಪದವು ರಸ್ತೆ ಹಾದು ಹೋಗುತ್ತಿದ್ದು, ಬ್ರಿಟೀಷರ ಕಾಲದಲ್ಲಿ ಬಸ್ ವ್ಯವಸ್ಥೆ ಇದ್ದ ತಾಲ್ಲೂಕಿನ ಕೆಲವೇ ಕೆಲವು ರಸ್ತೆಗಳಲ್ಲಿ ಇದೂ ಒಂದಾಗಿತ್ತು. ಆದರೆ ಸಂಬಂಧಪಟ್ಟ ಜನಪ್ರತಿನಿಧಿಗಳಲ್ಲಿ ಮತ್ತು ಅಧಿಕಾರಿಗಳಲ್ಲಿ ಈ ಹಳೆಯ ರಸ್ತೆಯ ಅಭಿವೃದ್ಧಿ ಚಿಂತನೆ ಇಲ್ಲದಾಗಿರುವುದೇ ಸಮಸ್ಯೆಗೆ ಕಾರಣವಾಗಿದೆ. ಗಡಿಪ್ರದೇಶದ ಅಭಿವೃದ್ಧಿಗಾಗಿ ಮಳೆನಾಡು ಪ್ರದೇಶಾಭಿವೃದ್ಧಿ ಯೋಜನೆ ಇದ್ದರೂ, ರಸ್ತೆಗಳ ಅಭಿವೃದ್ಧಿಗಾಗಿಯೇ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ ಜಾರಿಗೊಂಡಿದ್ದರೂ, ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಇದ್ದರೂ ಈ ರಸ್ತೆಗೆ ತಟ್ಟಿದ ಶಾಪಕ್ಕೆ ಇನ್ನೂ ವಿಮೋಚನೆ ಸಿಗುವ ಕಾಲ ಕೂಡಿ ಬಂದಿಲ್ಲ.

ಡಾಂಬರು ಎದ್ದು ಹೋಗಿ ಸೃಷ್ಠಿಯಾಗಿರುವ ಈ ರಸ್ತೆಯ ಹೊಂಡ ಗುಂಡಿಗಳಲ್ಲಿ ಮಳೆಗಾಲದಲ್ಲಿ ಮಳೆನೀರು ನೀರು ತುಂಬಿಕೊಂಡಿದ್ದು, ರಸ್ತೆಯಲ್ಲೇ ನೀರು ಹರಿದು ಹೋಗುತ್ತಿರುವುದರಿಂದ ಇದು ರಸ್ತೆ ಎಂದು ಹೇಳಲೂ ಸಾಧ್ಯವಾಗುತ್ತಿಲ್ಲ. ವಾಹನ ಚಾಲಕರು ಸರ್ಕಸ್ ನಡೆಸುತ್ತಾ ತೆರಳಬೇಕಾಗಿದ್ದು, ಈ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಶಾಲಾ ಮಕ್ಕಳು ನರಕಯಾಚನೆ ಅನುಭವಿಸಬೇಕಾಗಿ ಬಂದಿದೆ. ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಈ ಸ್ಥಿತಿ ಬಂದಿದೆ ಎಂಬುವುದು ಈ ಭಾಗದ ಜನತೆಯ ಆರೋಪವಾಗಿದೆ.

ಈ ರಸ್ತೆಯ ಅಭಿವೃದ್ಧಿಯ ವಿಚಾರದಲ್ಲಿ ಈ ಹಿಂದಿನ ಶಾಸಕರೂ, ಈಗಿನ ಶಾಸಕರೂ, ಸಂಸದರೂ ಸೇರಿದಂತೆ ಯಾರೊಬ್ಬರೂ ಗಮನಹರಿಸಿಲ್ಲ ಎಂದು ಆರೋಪಿಸುತ್ತಿದ್ದಾರೆ. ಈ ರಸ್ತೆಯ ಅಭಿವೃದ್ಧಿಗೆ ಸಣ್ಣ ಮೊತ್ತದ ಅನುದಾನ ಸಾಕಾಗುವುದಿಲ್ಲ. ರೂ.2 ಕೋಟಿಯಷ್ಟಾದರೂ ಅನುದಾನ ಬೇಕು. ಸಣ್ಣಮೊತ್ತದ ಅನುದಾನವಿಟ್ಟು ಪ್ರಯೋಜನವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದೇ ರಸ್ತೆಯನ್ನು ಸಂಪರ್ಕಿಸುವ ಕುಡ್ಕಾಡಿ ಪದಡ್ಕ ರಸ್ತೆಗೆ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಅನುದಾನ ನೀಡಲಾಗಿದೆ ಎಂದು ಶಾಸಕಿ ಶಕುಂತಳಾ ಶೆಟ್ಟಿ ಹೇಳುತ್ತಾರೆ.

ಈ ರಸ್ತೆಯಲ್ಲಿನ ಗೋಳಿತಡಿ ಎಂಬಲ್ಲಿ ಬೃಹತ್ ಗಾತ್ರದ ಹೊಂಡಗಳಾಗಿದ್ದು, ಇದೇ ಭಾಗದಲ್ಲಿ ಅಳವಡಿಸಲಾಗಿರುವ ಮೋರಿಯ ಮೇಲೆಯೇ ಮಳೆನೀರು ಹರಿದುಹೋಗುತ್ತಿದೆ. ಮಳೆಗಾಲದಲ್ಲಿ ಈ ಭಾಗದ ರಸ್ತೆಯಲ್ಲಿ ತೋಡಿನಂತೆ ನೀರು ಹರಿದು ಹೋಗುತ್ತಿದ್ದು, ಕೆಲವು ವರ್ಷಗಳ ಹಿಂದೆ ಸ್ಥಳೀಯರಾದ ವಿಶ್ವನಾಥ ಶೆಟ್ಟಿ ಎಂಬವರ ಪುತ್ರಿ ನಾಲ್ಕು ವರ್ಷ ಪ್ರಾಯದ ಬಾಲಕಿಯೊಬ್ಬಳು ಈ ಭಾಗದಲ್ಲಿ ಹರಿದುಹೋಗುವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ನಡೆದಿತ್ತು. ಪುತ್ರಿ ಮೃತಪಟ್ಟ ಹಿನ್ನಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಆಕೆಯ ತಾಯಿಯೂ ಆ ಬಳಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಇಲ್ಲಿ ಮತ್ತೊಂದು ಅನಾಹುತ ಸಂಭವಿಸಬಹುದಾದ ಅಪಾಯ ಇಲ್ಲಿ ಎದುರಾಗಿದೆ.

ಗೋಳಿತಡಿಯಲ್ಲಿ ರಸ್ತೆಗೆ ಅಳವಡಿಸಿದ ಮೋರಿಯಲ್ಲಿ ತ್ಯಾಜ್ಯಗಳು ತುಂಬಿಕೊಂಡಿರುವ ಪರಿಣಾಮವಾಗಿ ಮಳೆಗಾಲದಲ್ಲಿ ರಸ್ತೆಯ ಈ ಭಾಗದಲ್ಲಿರುವ ಹೊಂಡಗುಂಡಿಗಳ ಮೇಲೆಯೇ ಮಳೆನೀರು ತೋಡಿನಂತೆ ಹರಿದು ಹರಿದು ಹೋಗುತ್ತಿದೆ. ಬಹಳಷ್ಟು ಮಂದಿ ಎಳೆಯ ಪ್ರಾಯದ ವಿದ್ಯಾರ್ಥಿಗಳು ನೀರು ದಾಟಿಕೊಂಡೇ ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಅಪಾಯ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಳ್ಳಬೇಕಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X