Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಕ್ಕಿಂ ವಿಭಾಗದಲ್ಲಿ ರಸ್ತೆ ನಿರ್ಮಾಣ...

ಸಿಕ್ಕಿಂ ವಿಭಾಗದಲ್ಲಿ ರಸ್ತೆ ನಿರ್ಮಾಣ ಸಮರ್ಥಿಸಿಕೊಂಡ ಚೀನಾ

ವಾರ್ತಾಭಾರತಿವಾರ್ತಾಭಾರತಿ28 Jun 2017 7:30 PM IST
share
ಸಿಕ್ಕಿಂ ವಿಭಾಗದಲ್ಲಿ ರಸ್ತೆ ನಿರ್ಮಾಣ ಸಮರ್ಥಿಸಿಕೊಂಡ ಚೀನಾ

ಬೀಜಿಂಗ್,ಜೂ.28: ಸಿಕ್ಕಿಂ ವಿಭಾಗದಲ್ಲಿ ರಸ್ತೆ ನಿರ್ಮಾಣವು ‘ಕಾನೂನುಬದ್ಧ ’ವಾಗಿದೆ ಎಂದು ಬಣ್ಣಿಸಿದ ಚೀನಾ, ಭಾರತ ಅಥವಾ ಭೂತಾನಕ್ಕೆ ಸೇರಿರದ ಪ್ರದೇಶದಲ್ಲಿ ಈ ರಸ್ತೆಯನ್ನು ನಿರ್ಮಿಸಲಾಗುತ್ತಿದೆ ಮತ್ತು ಇದರಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ದೇಶಕ್ಕೆ ಹಕ್ಕು ಇಲ್ಲ ಎಂದು ಒತ್ತಿ ಹೇಳಿದೆ.

ಭೂತಾನ್ ತನ್ನೊಂದಿಗೆ ಯಾವುದೇ ರಾಜತಾಂತ್ರಿಕ ಸಂಬಂಧ ಹೊಂದಿಲ್ಲವಾದರೂ ಅದರ ಪರವಾಗಿ ಮಾತನಾಡುತ್ತಿರುವ ಭಾರತವು ಸಿಕ್ಕಿಂ ವಿಭಾಗದಲ್ಲಿಯ, ಪ್ರಾಚೀನ ಕಾಲದಿಂದಲೂ ತನಗೆ ಸೇರಿರುವ ಡಂಗ್ಲಾಂಗ್ ಪ್ರದೇಶದಲ್ಲಿ ರಸ್ತೆ ನಿರ್ಮಾಣದ ತನ್ನ ಪ್ರಯತ್ನಗಳನ್ನು ಆಕ್ಷೇಪಿಸುತ್ತಿದೆ ಎಂದೂ ಚೀನಾ ಬೆಟ್ಟು ಮಾಡಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೀನದ ವಿದೇಶಾಂಗ ಸಚಿವಾಲಯದ ವಕ್ತಾರ ಲು ಕಾಂಗ್ ಅವರು, ಈ ಪ್ರದೇಶವನ್ನು ಮುಂದೆ ಮಾಡಿಕೊಂಡು ವಿವಾದವನ್ನೆತ್ತಲು ಭಾರತವು ಬಯಸುತ್ತಿದೆ. ಈ ಪ್ರದೇಶವು ಭೂತಾನ್ ಅಥವಾ ಭಾರತಕ್ಕೆ ಸೇರಿದ್ದಲ್ಲ. ಚೀನಾದಿಂದ ರಸ್ತೆ ನಿರ್ಮಾಣವು ಕಾನೂನುಬದ್ಧವಾಗಿದೆ ಮತ್ತು ಅದು ತನ್ನ ಭೂಪ್ರದೇಶದಲ್ಲಿ ನಡೆಸುತ್ತಿರುವ ಸಹಜ ಕ್ರಿಯೆಯಾಗಿದೆ. ಇತರ ಯಾವುದೇ ದೇಶವು ಹಸ್ತಕ್ಷೇಪ ಮಾಡುವ ಹಕ್ಕು ಹೊಂದಿಲ್ಲ ಎಂದರು.

ಭಾರತವನ್ನು ಟೀಕಿಸಿದ ಅವರು, ಭೂತಾನ್ ಜಾಗತಿಕ ಮಾನ್ಯತೆಯನು ಹೊಂದಿರುವ ಸಾರ್ವಭೌಮ ದೇಶವಾಗಿದೆ. ಇತರ ದೇಶಗಳು ಅದರ ಸಾರ್ವಭೌಮತೆಯನ್ನು ಗೌರವಿಸುತ್ತವೆ ಎಂದು ಆಶಿಸುತ್ತೇನೆ. ಚೀನಾ-ಭೂತಾನ್ ಗಡಿಯನ್ನು ರೇಖಿಸಲಾಗಿಲ್ಲ. ಈ ವಿಷಯದಲ್ಲಿ ಯಾವುದೇ ಮೂರನೇ ದೇಶ ಮಧ್ಯಪ್ರವೇಶಿಸುವಂತಿಲ್ಲ ಮತ್ತು ಬೇಜವಾಬ್ದಾರಿಯ ಹೇಳಿಕೆಗಳನ್ನು ನೀಡುವಂತಿಲ್ಲ ಎಂದರು.

 ಯಾವುದೇ ಮೂರನೇ ದೇಶವು ತನ್ನ ಗುಪ್ತ ಕಾರ್ಯಸೂಚಿಯೊಂದಿಗೆ ಮಧ್ಯಪ್ರವೇಶ ಮಾಡಿದರೆ ಅದು ಭೂತಾನದ ಸಾರ್ವಭೌಮತೆಗೆ ಅಗೌರವವಾಗುತ್ತದೆ ಮತ್ತು ಇದನ್ನು ನಾವು ಬಯಸುವುದಿಲ್ಲ ಎಂದು ಲು ಹೇಳಿದರು.

‘ಚಿಕನ್ಸ್ ನೆಕ್’ ಎಂದು ಕರೆಯಲಾಗುವ ಆಯಕಟ್ಟಿನ ಪ್ರದೇಶದ ಬಳಿಯಿರುವ ,ಭಾರತ,ಚೀನಾ ಮತ್ತು ಭೂತಾನ್ ಗಡಿಗಳು ಸೇರುವ ಸಿಕ್ಕಿಂ ಭಾಗದಲ್ಲಿ ಡಂಗ್ಲಾಂಗ್ ಇದೆ.
ಭಾರತ-ಚೀನಾ ಗಡಿಯ ಸಿಕ್ಕಿಂ ಭಾಗವು ಇತ್ಯರ್ಥಗೊಂಡಿದೆ, ಹೀಗಾಗಿ ರಸ್ತೆ ನಿರ್ಮಾಣವನ್ನು ಆಕ್ಷೇಪಿಸಲು ಭಾರತಕ್ಕೆ ಯಾವುದೇ ಹಕ್ಕು ಇಲ್ಲ ಎಂದು ಚೀನಾ ಪ್ರತಿಪಾದಿಸುತ್ತಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X