Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹದಿಹರೆಯದ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ...

ಹದಿಹರೆಯದ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ಇರಲಿ: ಪೋಷಕರಿಗೆ ಆರೋಗ್ಯಾಧಿಕಾರಿ ಕರೆ

ವಾರ್ತಾಭಾರತಿವಾರ್ತಾಭಾರತಿ28 Jun 2017 10:16 PM IST
share
ಹದಿಹರೆಯದ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾ ಇರಲಿ: ಪೋಷಕರಿಗೆ ಆರೋಗ್ಯಾಧಿಕಾರಿ ಕರೆ

ಮಂಗಳೂರು, ಜೂ.28: ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಮಕ್ಕಳೇ ಮಾದಕ ವಸ್ತುಗಳಿಗೆ ಆಕರ್ಷಿತರಾಗುತ್ತಿರುವ ಪ್ರಕರಣಗಳು ಕಂಡು ಬರುತ್ತಿದ್ದು, ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳ ಬಾಹ್ಯ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಕರೆ ನೀಡಿದ್ದಾರೆ.

ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಮಾನಸಿಕ ವಿಭಾಗ) ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಕೀಲರ ಸಂಘ ಮತ್ತು ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು ಇವರ ಸಹಯೋಗದೊಂದಿಗೆ ಬುಧವಾರ ವೆನ್‌ಲಾಕ್ ಆಸ್ಪತ್ರೆ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ಹಾಗೂ ಅಕ್ರಮ ಕಳ್ಳಸಾಗಾಣಿಕೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

8 ರಿಂದ ಪಿಯುಸಿವರೆಗಿನ ಹುಡುಗರ ದೈಹಿಕ ಬದಲಾವಣೆ ಸಂದರ್ಭ ಅವರ ಮನಸ್ಸು ಚಂಚಲತೆಯಲ್ಲಿದ್ದು, ಸುಲಭವಾಗಿ ಆಕರ್ಷಿತವಾಗುವಂತಿರುತ್ತದೆ. ಇಂತಹ ಸಂದರ್ಭದಲ್ಲಿ ಮಾದಕ ವಸ್ತುಗಳು ಹಾಗೂ ಅಂತಹ ಚಟ ಹೊಂದಿರುವ ಸ್ನೇಹಿತರ ಸಹವಾಸವು ಬಾಲಕರಿಗೆ ಆಕರ್ಷಿತವಾಗಿ ಅವರ ಜೀವನಾವಸ್ಥೆಯನ್ನೇ ಅಪಾಯಕ್ಕೀಡು ಮಾಡಲಿದೆ. ಈ ನಿಟ್ಟಿನಲ್ಲಿ ಹದಿಹರೆಯದ ಮಕ್ಕಳನ್ನು ಪೋಷಕರು ಬಹಳ ಜಾಗರೂಕತೆಯಿಂದ ಪೋಷಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮವನ್ನು 3ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಉದ್ಘಾಟಿಸಿ, ಇತ್ತೀಚಿನ ದಿನಗಳಲ್ಲಿ ಯುವ ಜನರು, ಬೇರೆ ಬೇರೆ ಕಾರಣಗಳಿಂದಾಗಿ ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಆಧುನಿಕತೆ ಮುಂದುವರಿದಂತೆ ಮಾದಕ ದ್ರವ್ಯ ಚಟುವಟಿಕೆಗಳ ಸಂಖ್ಯೆ ಹೆಚ್ಚಾಗುವುದರೊಂದಿಗೆ ಸಮಾಜಘಾತಕ ಚಟುವಟಿಕೆಗಳು ಹೆಚ್ಚಾಗುತ್ತಿವೆ. ತಂದೆ-ತಾಯಿಗಳು, ಹಿರಿಯರು ತಮ್ಮ ಮಕ್ಕಳ ಬಗ್ಗೆ ಇಟ್ಟುಕೊಂಡಿರುವ ನಿರೀಕ್ಷೆ, ಭರವಸೆಗಳು ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ. ಈ ನಿಟ್ಟಿನಲ್ಲಿ ಉತ್ತಮ ಕಾರ್ಯಕ್ರಮಗಳ ಮೂಲಕ ಎಲ್ಲಾ ಇಲಾಖೆಗಳ ಸಹಾಯ, ಸಹಕಾರದೊಂದಿಗೆ ಯುವ ಜನತೆಗೆ ಆರೋಗ್ಯ ಜಾಗೃತಿ ಮೂಡಿಸುವಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವೆನ್‌ಲಾಕ್ ಅಧೀಕ್ಷಕಿ ಡಾ.ರಾಜೇಶ್ವರಿದೇ ಮಾತನಾಡಿ, ವೆನ್‌ಲಾಕ್‌ನಲ್ಲಿ ಮಾದಕ ವಸ್ತುಗಳ ಅಮಲು ನಿಯಂತ್ರಣಕ್ಕೆ ಪ್ರತ್ಯೇಕ ಘಟಕವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದು ಎಂದು ಹೇಳಿದರು.

ಶ್ರೀನಿವಾಸ ಮೆಡಿಕಲ್ ಕಾಲೇಜಿನ ಮಾನಸಿಕ ರೋಗ ತಜ್ಞೆ ಡಾ. ಕೆರೋಲಿನ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮಲ್ಲನಗೌಡ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮಯ್ಯ, ಡಾ.ಜಯಂತ್, ವಕೀಲರ ಸಂಘದ ಉಪಾಧ್ಯಕ್ಷೆ ಪುಷ್ಪಲತಾ, ಕಾರ್ಯದರ್ಶಿ ದಿನಕರ ಶೆಟ್ಟಿ, ಎಸಿಪಿ ಉದಯ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕುಷ್ಠರೋಗ ಹಾಗೂ ಅಂಧತ್ವ ನಿಯಂತ್ರಣಾಧಿಕಾರಿ ಡಾ. ರತ್ನಾಕರ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ವಂದಿಸಿದರು. ಜಯರಾಮ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೆ ಮುನ್ನ ಗಣಪತಿ ಪದವಿಪೂರ್ವ ಕಾಲೇಜಿನಿಂದ ವೆನ್‌ಲಾಕ್‌ವರೆಗೆ ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X