Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಹಿಂಪ ನಾಯಕನಿಗೆ ಶವಗಳನ್ನು...

ವಿಹಿಂಪ ನಾಯಕನಿಗೆ ಶವಗಳನ್ನು ಒಪ್ಪಿಸುವಂತೆ ಹಿರಿಯ ಅಧಿಕಾರಿಗಳೇ ಸೂಚಿಸಿದ್ದರು: ಗೋಧ್ರಾದ ಮಾಜಿ ತಹಶೀಲ್ದಾರ

2002ರ ಗುಜರಾತ್ ಹತ್ಯಾಕಾಂಡ

ವಾರ್ತಾಭಾರತಿವಾರ್ತಾಭಾರತಿ29 Jun 2017 4:35 PM IST
share
ವಿಹಿಂಪ ನಾಯಕನಿಗೆ ಶವಗಳನ್ನು ಒಪ್ಪಿಸುವಂತೆ ಹಿರಿಯ ಅಧಿಕಾರಿಗಳೇ ಸೂಚಿಸಿದ್ದರು: ಗೋಧ್ರಾದ ಮಾಜಿ ತಹಶೀಲ್ದಾರ

ಅಹ್ಮದಾಬಾದ್,ಜೂ.2: ಗೋಧ್ರಾ ರೈಲುದಹನ ಘಟನೆಯಲ್ಲಿ ಮೃತಪಟ್ಟಿದ್ದ ಕರಸೇವಕರ ಶವಗಳನ್ನು ವಿಶ್ವ ಹಿಂದು ಪರಿಷತ್(ವಿಹಿಂಪ)ನ ನಾಯಕ ಜೈದೀಪ್ ಪಟೇಲ್‌ಗೆ ಒಪ್ಪಿಸುವಂತೆ ತನ್ನ ಹಿರಿಯ ಅಧಿಕಾರಿಗಳು ತನಗೆ ಸೂಚಿಸಿದ್ದರು ಮತ್ತು ಅದಕ್ಕಾಗಿ ತಾನು ಪತ್ರವೊಂದನ್ನು ಸಿದ್ಧಗೊಳಿಸಿದ್ದೆ ಎಂದು ಆಗ ಗೋಧ್ರಾದ ತಹಶೀಲ್ದಾರ್ ಆಗಿದ್ದ ಎಂ.ಎಲ್.ನಲ್ವಯಾ ಅವರು ಬುಧವಾರ 2002ರ ನರೋದಾ ಗಾಮ್ ದಂಗೆ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿರುವ ನಿಯೋಜಿತ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪಟೇಲ್ ನರೋದಾ ಗಾಮ್ ದಂಗೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಸದ್ಯ ಜಾಮೀನಿನಲ್ಲಿ ಹೊರಗಿದ್ದಾನೆ.

 ಗೋಧ್ರಾ ರೈಲು ನಿಲ್ದಾಣದಲ್ಲಿ ನಿಂತಿದ್ದ ಸಾಬರಮತಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗೆ ಬೆಂಕಿ ಹಚ್ಚಿದ ಪರಿಣಾಮ ಅದರಲ್ಲಿದ್ದ ಅಯೋಧ್ಯೆಯಿಂದ ಮರಳುತ್ತಿದ್ದ ಕರಸೇವಕರು ಸಜೀವ ದಹನಗೊಂಡಿದ್ದರು. ಇದು ಗುಜರಾತ್‌ನಾದ್ಯಂತ ಕೋಮುದಂಗೆಗೆ ಕಾರಣ ವಾಗಿತ್ತು.

ನರೋದಾ ಗಾಮ್ ನರಮೇಧದಲ್ಲಿ 11 ಮುಸ್ಲಿಮರು ಕೊಲ್ಲಲ್ಪಟ್ಟಿದ್ದರು. ಮಾಜಿ ಸಚಿವೆ ಮಾಯಾ ಕೊಡ್ನಾನಿ ಸೇರಿದಂತೆ 82 ಜನರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

 ಬುಧವಾರ ನ್ಯಾಯಾಲಯದಲ್ಲಿ ಹಾಜರಾಗಿದ್ದ, ಹಾಲಿ ದಾಹೋದ್‌ನಲ್ಲಿ ಉಪ ವಿಭಾಗಾಧಿಕಾರಿಯಾಗಿರುವ ನಲ್ವಯಾ, ಗೋಧ್ರಾ ರೈಲು ನಿಲ್ದಾಣದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ಗೆ ಬೆಂಕಿ ಹಚ್ಚಲಾಗಿದ್ದ ಸ್ಥಳಕ್ಕೆ ತಾನು ತೆರಳಿದ್ದೆ ಮತ್ತು ತನ್ನ ಮೇಲಧಿಕಾರಿಗಳ ಉಸ್ತುವಾರಿಯಲ್ಲಿ ಶವಗಳನ್ನು ಪರಿಶೀಲಿಸಿದ್ದೆ ಮತ್ತು ಇತರ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ್ದೆ ಎಂದು ತಿಳಿಸಿದರು.

ಅಹ್ಮದಾಬಾದ್‌ನ ಸೋಲಾ ಸರಕಾರಿ ಆಸ್ಪತ್ರೆಯಲ್ಲಿ ಕರಸೇವಕರ ಶವಗಳನ್ನು ಜೈದೀಪ್ ಪಟೇಲ್‌ಗೆ ಹಸ್ತಾಂತರಿಸಬೇಕು ಎಂದು ಸೂಚಿಸಿ ತಾನು ಪತ್ರವೊಂದನ್ನು ಬರೆದಿದ್ದೆ ಎಂದೂ ಅವರು ತಿಳಿಸಿದರು.

 ಪ್ರಕರಣದ ತನಿಖೆಯನ್ನು ನಡೆಸಿದ್ದ ವಿಶೇಷ ತನಿಖಾ ತಂಡ(ಸಿಟ್)ದ ಪರ ವಕೀಲರ ಪಾಟೀಸವಾಲಿಗೆ ಉತ್ತರಿಸಿದ ನಲ್ವಯಾ, ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ತಾನು ಆ ಪತ್ರವನ್ನು ಬರೆದಿದ್ದಾಗಿ ತಿಳಿಸಿದರು. ಪತ್ರಕ್ಕೆ ಪಟೇಲ್ ಸಹಿ ಮಾಡಿರಲಿಲ್ಲ ಮತ್ತು ಅದನ್ನು ಬೇರೆ ಯಾರಿಗೋ ನೀಡಲಾಗಿತ್ತು. ತನಗೆ ಪಟೇಲ್‌ನ ಪರಿಚಯವಿರಲಿಲ್ಲ ಮತ್ತು ತಾನೆಂದು ಆತನನ್ನು ಭೇಟಿಯಾಗಿರಲಿಲ್ಲ ಎಂದೂ ಅವರು ಹೇಳಿದರು.

 ಶವಗಳನ್ನು ಪಡೆದುಕೊಂಡ ಬಗ್ಗೆ ಪತ್ರದಲ್ಲಿ ಯಾವುದೇ ಸಹಿ ಇಲ್ಲ ಎಂಂದು ಸಿಟ್ ಹೇಳಿದೆ.

ಶವಗಳನ್ನು ಗೋಧ್ರಾದಿಂದ ಅಹ್ಮದಾಬಾದ್‌ಗೆ ತರಲಾಗಿತ್ತು ಮತ್ತು ಸಾರ್ವಜನಿಕರ ಸಮ್ಮುಖದಲ್ಲಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿತ್ತು.

ಆರೋಪಿಗಳ ಪರವಾಗಿ ಹೆಚ್ಚುವರಿ ಸಾಕ್ಷಗಳ ಭಾಗವಾಗಿ ನಲ್ವಯಾರ ಹೇಳಿಕೆಯನ್ನು ನ್ಯಾಯಾಲಯವು ದಾಖಲಿಸಿಕೊಂಡಿದೆ. ಹೆಚ್ಚುವರಿ ಪ್ರತಿವಾದಿ ಪರ ಸಾಕ್ಷಿಗಳ ಹೇಳಿಕೆ ಗಳನ್ನು ದಾಖಲಿಸಿಕೊಳ್ಳುವಂತೆ ಕೋರಿ ಆರೋಪಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅದಕ್ಕೆ ನ್ಯಾಯಾಲಯವು ಅಸ್ತು ಎಂದಿದೆ. ಇಂತಹ ಸುಮಾರು 30 ಸಾಕ್ಷಿಗಳನ್ನು ಪಾಟೀಸವಾಲಿಗೆ ಒಳಪಡಿಸಲಾಗಿದೆ ಎಂದು ಸಿಟ್ ಮೂಲಗಳು ತಿಳಿಸಿವೆ.

  ಹಿಂದುಗಳ ಆಸ್ತಿಗಳಿಗೆ ಉಂಟಾದ ನಷ್ಟದ ಬಗ್ಗೆ ಅಹ್ಮದಾಬಾದ್ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಮಹೇಂದ್ರ ಸೋನಿಯವರನ್ನೂ ಬುಧವಾರ ಪ್ರತಿವಾದಿ ಪರ ವಕೀಲರು ಪಾಟೀಸವಾಲಿಗೆ ಒಳಪಡಿಸಲಿದ್ದರು. ಸೋನಿ ಅವರು ಹಿಂದು ಮತ್ತು ಮುಸ್ಲಿಮರ ಆಸ್ತಿಗಳಿಗೆ ಆಗಿದ್ದ ಒಟ್ಟು ಹಾನಿಯ ಕುರಿತು ಮಾಹಿತಿಗಳನ್ನು ತನ್ನೊಂದಿಗೆ ತಂದಿದ್ದರು. ಆದರೆ ಪ್ರತಿವಾದಿ ಪರ ವಕೀಲರು ಹಿಂದುಗಳ ಆಸ್ತಿಗಳಿಗೆ ಉಂಟಾಗಿದ್ದ ಹಾನಿ ಮತ್ತು ಪಾವತಿಸಲಾದ ಪರಿಹಾರದ ಕುರಿತು ಪ್ರತ್ಯೇಕ ಮಾಹಿತಿಗಳಿಗಾಗಿ ಆಗ್ರಹಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜು.3ರಂದು ಪ್ರತ್ಯೇಕ ಮಾಹಿತಿಗಳನ್ನು ಸಲ್ಲಿಸುವಂತೆ ಅವರಿಗೆ ನಿರ್ದೇಶ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X