Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಥಾಯಿ ಸಮಿತಿ ಅಧ್ಯಕ್ಷರ ಸಭಾತ್ಯಾಗದ...

ಸ್ಥಾಯಿ ಸಮಿತಿ ಅಧ್ಯಕ್ಷರ ಸಭಾತ್ಯಾಗದ ನಡುವೇ ಮೇಯರ್ ನಿರ್ಣಯ

ಪುರಭವನದ ಬಾಡಿಗೆ ದರ ಶೇ. 50ರಷ್ಟು ಕಡಿತ!

ವಾರ್ತಾಭಾರತಿವಾರ್ತಾಭಾರತಿ29 Jun 2017 6:23 PM IST
share
ಸ್ಥಾಯಿ ಸಮಿತಿ ಅಧ್ಯಕ್ಷರ ಸಭಾತ್ಯಾಗದ ನಡುವೇ ಮೇಯರ್ ನಿರ್ಣಯ

ಕಲಾವಿದರಿಗೆ ಮನ್ನಣೆ ನೀಡಿ ಮಹತ್ವದ ನಿರ್ಧಾರ

ಮಂಗಳೂರು, ಜೂ.29: ನವೀಕೃತ ಪುರಭವನ ಕಲಾವಿದರಿಗೆ ಎಟಕುತ್ತಿಲ್ಲ ಎಂಬ ಆಕ್ಷೇಪದ ಹಿನ್ನೆಲೆಯಲ್ಲಿ ಇಂದು ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪುರಭವನದ ಮುಂಗಡ ಹಾಗೂ ಬಾಡಿಗೆ ದರವನ್ನು ಭಾರೀ ಕಡಿತಗೊಳಿಸುವ ಮೂಲಕ ಮೇಯರ್ ಕವಿತಾ ಸನಿಲ್ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದರು.

ಪುರಭವನದ ಪ್ರಸಕ್ತ ಬಾಡಿಗೆ ದರವನ್ನು ಶೇ. 50ರಷ್ಟು ಕಡಿತ ಮಾಡಲಾಗಿದ್ದು, ಜುಲೈ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಆದರೆ ಮೇಯರ್ ಅವರ ಈ ನಿರ್ಧಾರದಿಂದ ಆಡಳಿತ ಪಕ್ಷದ ಸದಸ್ಯರ ಗದ್ದಲ ಹಾಗೂ ತೆರಿಗೆ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಸಭಾ ತ್ಯಾಗ ಮಾಡಿದ ಘಟನೆಯೂ ನಡೆಯಿತು.

ನವೀಕೃತ ಪುರಭವನದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ನಿಗದಿಗೊಳಿಸಿರುವ ಬಾಡಿಗೆ ದರ ದುಪ್ಪಟ್ಟಾಗಿರುವ ಕಾರಣ ಅದು ಕಲಾವಿದರಿಗೆ ಸಿಗುತ್ತಿಲ್ಲ ಎಂಬುದಾಗಿ ಇತ್ತೀಚೆಗೆ ಮೇಯರ್ ಕರೆದಿದ್ದ ಸಭೆಯಲ್ಲಿ ಕಲಾವಿದರು ಒಕ್ಕೊರಲಿನಿಂದ ಆಗ್ರಹಿಸಿದ್ದರು. ಇದಕ್ಕೆ ಮನ್ನಣೆ ನೀಡಿ ಮೇಯರ್‌ರವರು ಪುರಭವನದ ಬಾಡಿಗೆ ದರವನ್ನು ಶೇ.50ರಷ್ಟು ಕಡಿಮೆ ಮಾಡಿ ಪೂರ್ವಭಾವಿ ಮಂಜೂರಾತಿ ನೀಡಿದ್ದರು. ‘ಈ ತೀರ್ಮಾನವು ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷಳಾದ ನನ್ನ ಗಮನಕ್ಕೆ ಹಾಗೂ ಸ್ಥಾಯಿ ಸಮಿತಿಗೆ ಬಾರದೆ ಮೇಯರ್ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ಆರೋಪಿಸಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಅವರು ಸಭಾತ್ಯಾಗ ಮಾಡುವುದಾಗಿ ಹೇಳಿ ಸಭೆಯಿಂದ ಹೊರನಡೆದರು.

ಈ ಸಂದರ್ಭ ಮೇಯರ್ ನಿರ್ಧಾರವನ್ನು ಬೆಂಬಲಿಸಿ ಬಿಜೆಪಿ ಸದಸ್ಯೆ ಮಾತನಾಡಿ, ಮೇಯರ್ ಕಲಾವಿದರಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಆದರೆ, ಮೇಯರ್ ನಿರ್ಧಾರ ಏಕಪಕ್ಷೀಯ ಎಂಬ ಆಕ್ಷೇಪ ಆಡಳಿತ ಪಕ್ಷದ ಕೆಲ ಸದಸ್ಯರಿಂದ ವ್ಯಕ್ತವಾಯಿತು. 

ಕಾಂಗ್ರೆಸ್‌ನ ಮಹಮ್ಮದ್ ಅವರು ಮಾತನಾಡಿ, ‘ಸದನದ ಅನುಮತಿ ಪಡೆದು ದರ ಕಡಿಮೆ ಮಾಡಬೇಕಿತ್ತು. ಅದಕ್ಕೂ ಮೊದಲೇ ಈ ತೀರ್ಮಾನ ಸರಿಯಲ್ಲ’ ಎಂದರು.

ದೀಪಕ್ ಅವರು ಮಾತನಾಡಿ, ಪುರಭವನದ ಈಗಿನ ಖರ್ಚುವೆಚ್ಚಗಳನ್ನು ಪರಿಗಣಿಸಿ ಎಷ್ಟು ಬರುತ್ತದೆ ಎಂಬುದನ್ನು ಲೆಕ್ಕಹಾಕಿ ದರ ಕಡಿಮೆಯ ಬಗ್ಗೆ ನಿರ್ಧರಿಸಬೇಕಿತ್ತು ಎಂದರು.

ಡಿ.ಕೆ.ಅಶೋಕ್ ಮಾತನಾಡಿ, ಈ ತೀರ್ಮಾನವು ಮತ್ತೆ ತೆರಿಗೆ ಸ್ಥಾಯಿ ಸಮಿತಿಗೆ ಹೋಗಲಿ ಎಂದು ಆಗ್ರಹಿಸಿದರು. ಸಿಪಿಐಎಂನ ದಯಾನಂದ ಶೆಟ್ಟಿ ಕೂಡಾ ವಿರೋಧಿಸಿದರು. ಸದಸ್ಯರ ನಡುವಿನ ಆಕ್ಷೇಪ, ಚರ್ಚೆಯ ವೇಳೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ನಾಗವೇಣಿ ಮಾತನಾಡಿ, ‘ಮೇಯರ್ ಅವರ ಏಕಪಕ್ಷೀಯ ತೀರ್ಮಾನ ಸರಿಯಲ್ಲ’ ಎಂದು ಅವರು ಕೂಡಾ ಸಭೆಯಿಂದ ಹೊರನಡೆದರು. .

ಯಾವುದೇ ರಾಜಕೀಯ ಲಾಭಕ್ಕಾಗಿ ಮಾಡಿದ ಕ್ರಮವಲ್ಲ: ಮೇಯರ್

ಈ ವೇಳೆ ಮೇಯರ್ ಕವಿತಾ ಸನಿಲ್ ಮಾತನಾಡಿ, ‘ಪುರಭವನದ ದರವನ್ನು ಕಡಿಮೆ ಮಾಡುವಂತೆ ಜೂನ್ 17ರಂದು ನಡೆದ ಸಭೆಯಲ್ಲಿ ಕಲಾವಿದರು ಒತ್ತಾಯಿಸಿದ್ದರು. ಕಲಾವಿದರಿಗೆ ಪುರಭವನ ಲಭ್ಯವಾಗಬೇಕೆಂಬ ನಿಟ್ಟಿನಲ್ಲಿ ಅವರ ಬೇಡಿಕೆಗೆ ಮನ್ನಣೆ ನೀಡಿ ಈ ನಿರ್ಧಾರ ಕೈಗೊಳ್ಳಲಾಯಿತು. ಜು.1ರಿಂದಲೇ ಪುರಭವನದ ದರ ಕಡಿಮೆಯಾದರೆ ಬಹುತೇಕ ಕಲಾವಿದರಿಗೆ ಅವಕಾಶ ಸಿಗುತ್ತದೆ ಎಂಬ ಕಾರಣದಿಂದ ಪೂರ್ವಭಾವಿ ಮಂಜೂರಾತಿ ನೀಡಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಲಾಭವೂ ನನಗಿಲ್ಲ. ಸ್ಥಾಯಿ ಸಮಿತಿ ಮೂಲಕ ಈ ಕಡತ ರವಾನೆಯಾದರೆ ಮತ್ತೆ ಸಮಾರು ಐದು ತಿಂಗಳು ಕಲಾವಿದರು ಕಾಯಬೇಕಾಗುತ್ತದೆ ಎಂಬ ಕಾರಣದಿಂದ ಪುರಭವನದ ದರವನ್ನು ಕೈಗೆಟಕುವ ದರಕ್ಕೆ ಸೀಮಿತಗೊಳಿಸಿ ಪೂರ್ವಭಾವಿ ಮಂಜೂರಾತಿ ನೀಡಿದ್ದೇನೆ’ ಎಂದು ಮೇಯರ್ ಕವಿತಾ ಸನಿಲ್ ಸಭೆಯಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X