Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನದ ಆಶಯ ಈಡೇರಿಸುವುದೇ...

ಸಂವಿಧಾನದ ಆಶಯ ಈಡೇರಿಸುವುದೇ ರಾಷ್ಟ್ರೀಯತೆ: ಸುಭಾಷಿಣಿ ಅಲಿ

‘ರಾಷ್ಟ್ರೀಯತೆ-ಭಾರತವೆಂಬ ಪರಿಕಲ್ಪನೆ’ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ29 Jun 2017 7:25 PM IST
share

ಬೆಂಗಳೂರು, ಜೂ.29: ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ನಿಜವಾದ ರಾಷ್ಟ್ರೀಯತೆ ಎಂಬುದನ್ನು ದೇಶದ ಜನತೆಗೆ ಪರಿಣಾಮಕಾರಿಯಾಗಿ ಮುಟ್ಟಿಸುವಂತಹ ಕೆಲಸವಾಗಬೇಕಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಉಪಾಧ್ಯಕ್ಷೆ ಸುಭಾಷಿಣಿ ಅಲಿ ತಿಳಿಸಿದ್ದಾರೆ.

ಗುರುವಾರ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯತೆ-ಭಾರತವೆಂಬ ಪರಿಕಲ್ಪನೆ’ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅನಾದಿ ಕಾಲದಿಂದಲೂ ದೇಶದಲ್ಲಿ ಜಾರಿಯಲ್ಲಿರುವ ಬಹುಸಂಸ್ಕೃತಿಗಳನ್ನು ಗೌರವಿಸುವಂತಹ ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸೋಣವೆಂದು ತಿಳಿಸಿದರು.

ಪ್ರಸ್ತುತ ದೇಶದಲ್ಲಿ ಕೆಲವು ಹಿಂದೂ ಮೂಲಭೂತವಾದಿ ಸಂಘಟನೆಗಳು ರಾಷ್ಟ್ರೀಯತೆ ಕಲ್ಪನೆಯನ್ನು ಸಂಕುಚಿತಗೊಳಿಸುವ ಮೂಲಕ ತಮ್ಮ ಸ್ವಾರ್ಥ ಹಿತಾಸಕ್ತಿಗೆ ಬಳಸಿಕೊಳ್ಳುತ್ತಿದ್ದಾರೆ. ‘ಹಸು’ವನ್ನು ರಾಷ್ಟ್ರೀಯತೆಯ ಒಂದು ಸಂಕೇತವಾಗಿಸಿ, ಹಸುವನ್ನು ತಿನ್ನುವವರ ಮೇಲೆ ಮಾರಣಾಂತಿಕ ಹಲ್ಲೆಗಳನ್ನು ನಡೆಸುತ್ತಿದ್ದಾರೆ. ಹಾಗೆಯೇ ಕೇವಲ ‘ಭಾರತ ಮಾತಾ ಕೀ ಜೈ’ ಘೋಷಣೆಗೆ ರಾಷ್ಟ್ರೀಯತೆಯನ್ನು ಸೀಮಿತಗೊಳಿಸಿ, ತಮಗೆ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ದೇಶದಲ್ಲಿರುವ ಪ್ರತಿಯೊಬ್ಬರು ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾನತೆಯನ್ನು ಹೊಂದಿದಾಗ ಮಾತ್ರವೇ ರಾಷ್ಟ್ರೀಯತೆಯ ಕಲ್ಪನೆ ಯಶಸ್ವಿಗೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿಯೇ ಅಸಮಾನತೆಯಿಂದ ನರಳುತ್ತಿರುವ ಭಾರತದಂತಹ ದೇಶದಲ್ಲಿ ರಾಷ್ಟ್ರೀಯತೆಯನ್ನು ಒಪ್ಪುವುದಿಲ್ಲವೆಂದು ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಠಾಗೂರ್ 1920ರಲ್ಲಿಯೇ ಹೇಳಿದ್ದರು ಎಂದು ಅವರು ನೆನಪು ಮಾಡಿಕೊಂಡರು.

ಡಾ.ಬಿ.ಆರ್.ಅಂಬೇಡ್ಕರ್‌ರವರು ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ನೀಡುವ ಮೂಲಕ ರಾಷ್ಟ್ರೀಯತೆಗೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಆದರೆ, ದೇಶವನ್ನಾಳಿದ ಎಲ್ಲ ರಾಜಕೀಯ ಪಕ್ಷಗಳು ಅಂಬೇಡ್ಕರ್ ಆಶಯವನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಸಂಘಪರಿವಾರದ ಅಂಗವಾದ ಬಿಜೆಪಿಯಂತೂ ಅಂಬೇಡ್ಕರ್‌ರವರ ಸಂವಿಧಾನದ ಜಾಗದಲ್ಲಿ ಮನುಸ್ಮತಿಯನ್ನು ತರಲು ಹೊರಟಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಮೂಲಭೂತವಾದಿ ಪಠ್ಯಪುಸ್ತಕ ಹಾಗೂ ಇತಿಹಾಸ ರಚನೆಯಲ್ಲಿ ಜಾತ್ಯತೀತ ವೌಲ್ಯಗಳ ಬದಲಿಗೆ ಬ್ರಾಹ್ಮಣೀಕರಣಕ್ಕೆ ಪರವಾದ ಇತಿಹಾಸವನ್ನು ತುಂಬಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಆಡಳಿತ ನಡೆಸಿದ ಮನುವಾದಿ ರಾಜರಾದ ಪೇಶ್ವೆಗಳನ್ನು ಸ್ವಾತಂತ್ರ ಹೋರಾಟಗಾರರೆಂದು ಬಿಂಬಿಸುವ ಮೂಲಕ ಜಾತ್ಯತೀಯ ವೌಲ್ಯಗಳಿಗೆ ಅಪಮಾನ ಮಾಡಲಾಗಿದೆ. ಹೀಗೆ ಹಲವಾರು ವಿಷಯಗಳು ಮನುಸ್ಮತಿಯನ್ನು ಆಧರಿಸಿ ರಚಿತವಾಗಿದೆ. ಈ ಬಗ್ಗೆ ಜನತೆಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಕರ್ನಾಟಕ ಸರಕಾರದ ಮಾಜಿ ಅಡ್ವೋಕೆಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಮಾತನಾಡಿ, 9 ಧರ್ಮ, 300ಭಾಷೆ ಹಾಗೂ 5ಸಾವಿರ ಜಾತಿಗಳನ್ನು ಒಳಗೊಂಡಿರುವ ಭಾರತದಲ್ಲಿ ಜಾತ್ಯತೀತ ವೌಲ್ಯಗಳನ್ನೊಳಗೊಂಡಿರುವುದೇ ನಿಜವಾದ ರಾಷ್ಟ್ರೀಯತೆಯಾಗಿದೆ. ಇದನ್ನು ಹಾಳುಮಾಡಲು ಸಂಘಪರಿವಾರದ ಅಂಗ ಸಂಸ್ಥೆಗಳು ಸದಾ ಪ್ರಯತ್ನಿಸುತ್ತಿವೆ. ಈ ಬಗ್ಗೆ ಸದಾ ಎಚ್ಚರವಿರಬೇಕು ಎಂದು ತಿಳಿಸಿದರು.

ಬ್ರಾಹ್ಮಣ ಧರ್ಮವನ್ನೇ ಹಿಂದೂ ಧರ್ಮವನ್ನಾಗಿಸಿ ದೇಶದಲ್ಲಿ ಅನಾದಿ ಕಾಲದಿಂದಲೂ ಇದ್ದ ಬಹುಸಂಸ್ಕೃತಿಯನ್ನು ವ್ಯವಸ್ಥಿತವಾಗಿ ಹಾಳು ಮಾಡಿ, ದೇಶದಲ್ಲಿ ಅಶಾಂತಿಯನ್ನು ಉಂಟು ಮಾಡಲಾಗುತ್ತಿದೆ. ಬ್ರಾಹ್ಮಣ ಸಮುದಾಯದಲ್ಲಿಯೇ 300ಜಾತಿಗಳಿದ್ದು, ಅಲ್ಲಿಯೂ ಅಸ್ಪಶ್ಯತೆ ಜೀವಂತವಾಗಿದೆ. ಹೀಗಾಗಿ ಬ್ರಾಹ್ಮಣ ಧರ್ಮದ ಪದ್ಧತಿಯನ್ನು ಅನುಸರಿಸಲು ಯೋಗ್ಯವಾಗಿಲ್ಲ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ದಿನೇಶ್ ಅಮಿನ್ ಮಟ್ಟು, ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಗೀತಾ, ಕಾರ್ಯದರ್ಶಿ ಗೌರಮ್ಮ, ಲಕ್ಷ್ಮಿ ಸೇರಿದಂತೆ ಸಂಟನೆಯ ಹಲವು ಮುಖಂಡರು ಭಾಗವಹಿಸಿದ್ದರು.

ಮುಸ್ಲಿಮರು ಉಡುಪಿ ಮಠದಲ್ಲಿ ನಮಾಝ್ ಮಾಡುವ ಮೂಲಕ ಉಡುಪಿ ಮಠವನ್ನು ಪವಿತ್ರಗೊಳಿಸಿದ್ದಾರೆ. ಇದಕ್ಕಾಗಿ ಮುಸ್ಲಿಮರಿಗೆ ಅಭಿನಂದನೆ ಸಲ್ಲಿಸಬೇಕು. ಒಮ್ಮೊಮ್ಮೆ ಪೇಜಾವರರು ಪ್ರಗತಿಪರರಂತೆ ವರ್ತಿಸುವ ಮೂಲಕ ಪೇಚಿಗೆ ಸಿಲುಕಿಸುತ್ತಾರೆ ಎಂದೂ ರವಿವರ್ಮ ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X