ಪಾಕ್ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಇಬ್ಬರು ಯೋಧರಿಗೆ ಗಾಯ
ಜಮ್ಮು, ಜೂ.29: ಪೂಂಛ್ ಪ್ರದೇಶದಲ್ಲಿ ಗಡಿನಿಯಂತ್ರಣಾ ರೇಖೆಯ ಬಳಿಯಿರುವ ಭಾರತೀಯ ಸೇನೆಯ ಮುಂಚೂಣಿ ನೆಲೆಗಳ ಮೇಲೆ ಮತ್ತು ನಾಗರಿಕ ಪ್ರದೇಶದ ಮೇಲೆ ಪಾಕ್ ಪಡೆಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಸ್ವಯಂಚಾಲಿತ ಸಣ್ಣ ಶಸ್ತ್ರಾಸ್ತ್ರ ಹಾಗೂ ಮೋರ್ಟರ್ನಿಂದ ಸಜ್ಜಾಗಿದ್ದ ಪಾಕ್ ಪಡೆ ಗಡಿನಿಯಂತ್ರಣ ರೇಖೆಯ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ. ಘಟನೆಯಲ್ಲಿ ಇಬ್ಬರು ಯೋಧರಿಗೆ ಅಲ್ಪಪ್ರಮಾಣದ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೇನಾಪಡೆಯ ವಕ್ತಾರರು ತಿಳಿಸಿದ್ದಾರೆ. ಈ ತಿಂಗಳಲ್ಲಿ ಪಾಕ್ ಪಡೆಗಳು ನಡೆಸುತ್ತಿರುವ ಕದನವಿರಾಮ ಉಲ್ಲಂಘನೆಯ 22ನೇ ಪ್ರಕರಣ ಇದಾಗಿದೆ.
Next Story