Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 1962ರ ಸೋಲಿನಿಂದ ಪಾಠ ಕಲಿಯಿರಿ:...

1962ರ ಸೋಲಿನಿಂದ ಪಾಠ ಕಲಿಯಿರಿ: ಭಾರತಕ್ಕೆ ಚೀನಾ ಸೇನೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ29 Jun 2017 8:51 PM IST
share
1962ರ ಸೋಲಿನಿಂದ ಪಾಠ ಕಲಿಯಿರಿ: ಭಾರತಕ್ಕೆ ಚೀನಾ ಸೇನೆ ಎಚ್ಚರಿಕೆ

ಬೀಜಿಂಗ್, ಜೂ. 28: 1962ರಲ್ಲಿ ಅನುಭವಿಸಿದ ಸೋಲಿನಿಂದ ಭಾರತ ಪಾಠ ಕಲಿಯಬೇಕು ಹಾಗೂ ಯುದ್ಧಕ್ಕಾಗಿ ಕಾತರಿಸುವುದನ್ನು ನಿಲ್ಲಿಸಬೇಕು ಎಂದು ಚೀನಾ ಗುರುವಾರ ಎಚ್ಚರಿಸಿದೆ.

ಸಿಕ್ಕಿಂ ವಲಯದಲ್ಲಿ ಈಗ ಉಂಟಾಗಿರುವ ಬಿಕ್ಕಟ್ಟನ್ನು ಇತ್ಯರ್ಥಪಡಿಸುವ ಮಾತುಕತೆಯ ಪೂರ್ವ ಶರತ್ತಾಗಿ ಭಾರತ ತನ್ನ ಸೈನಿಕರನ್ನು ಅಲ್ಲಿಂದ ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದಿದೆ.

 ತನ್ನ ಸೈನಿಕರು ತನ್ನದೇ ನೆಲದಲ್ಲಿ ರಸ್ತೆ ನಿರ್ಮಿಸುತ್ತಿದ್ದಾರೆ, ಭೂತಾನ್‌ಗೆ ಸೇರಿದ ಜಮೀನಿನಲ್ಲಿ ಅಲ್ಲ ಎಂದು ಚೀನಾ ಹೇಳಿದೆ.

ಚೀನಾ, ಪಾಕಿಸ್ತಾನ ಮತ್ತು ಆಂತರಿಕ ಭದ್ರತಾ ವಿಷಯಗಳನ್ನು ಎದುರಿಸಲು ಭಾರತ ಸಿದ್ಧವಾಗಿದೆ ಎಂಬುದಾಗಿ ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ನೀಡಿರುವ ಹೇಳಿಕೆಗೆ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ)ಯ ವಕ್ತಾರ ವು ಕಿಯನ್ ಪ್ರತಿಕ್ರಿಯಿಸುತ್ತಿದ್ದರು.

‘‘ಇಂಥ ಹೇಳಿಕೆಗಳು ಅತ್ಯಂತ ಬೇಜವಾಬ್ದಾರಿಯುತ. ಭಾರತೀಯ ಸೇನೆಯಲ್ಲಿರುವ ಈ ನಿರ್ದಿಷ್ಟ ವ್ಯಕ್ತಿ ಇತಿಹಾಸದಿಂದ ಪಾಠ ಕಲಿಯುತ್ತಾರೆ ಹಾಗೂ ಯುದ್ಧಕ್ಕಾಗಿ ಹಪಹಪಿಸುವುದನ್ನು ನಿಲ್ಲಿಸುತ್ತಾರೆ ಎಂದು ನಾವು ಆಶಿಸುತ್ತೇವೆ’’ ಎಂದು ಬೀಜಿಂಗ್‌ನಲ್ಲಿ ನಡೆದ ರಕ್ಷಣಾ ಸಚಿವಾಲಯದ ತಿಂಗಳ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಭಾರತವನ್ನು ಗುರಿಯಾಗಿಸಿ ಟಿಬೆಟ್‌ನಲ್ಲಿ ಚೀನೀ ಟ್ಯಾಂಕ್ ನಿಯೋಜನೆ

ಭಾರತವನ್ನು ಗುರಿಯಾಗಿಸಿ ಟಿಬೆಟ್ ಸ್ವಾಯತ್ತ ಪ್ರದೇಶ (ಟಿಎಆರ್)ದಲ್ಲಿ ಚೀನಾ ನೂತನ 35 ಟನ್ ಸಾಮರ್ಥ್ಯದ ಯುದ್ಧ ಟ್ಯಾಂಕೊಂದನ್ನು ನಿಯೋಜಿಸಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

 ಟಿಬೆಟ್‌ನ ಬಯಲು ಸೀಮೆಯಲ್ಲಿ ಸೇನೆಯು ಈ ಟ್ಯಾಂಕ್‌ನಲ್ಲಿ ಇತ್ತೀಚೆಗೆ ತಾಲೀಮು ನಡೆಸಿದೆ ಎಂದು ಪೀಪಲ್ಸ್ ಲಿಬರೇಶನ್ ಆರ್ಮಿಯ ವಕ್ತಾರ ವು ಕಿಯನ್ ಗುರುವಾರ ತಿಳಿಸಿದರು.

ಆದಾಗ್ಯೂ, ಯಾವುದೇ ದೇಶವನ್ನು ಗುರಿಯಾಗಿಸಿ ಟ್ಯಾಂಕನ್ನು ಇಲ್ಲಿ ನಿಯೋಜಿಸಲಾಗಿಲ್ಲ ಹಾಗೂ ತಾಲೀಮು ನಡೆಸಿಲ್ಲ ಎಂದು ಅವರು ಹೇಳಿಕೊಂಡರು.

ಆದಾಗ್ಯೂ, ಭಾರತೀಯ ಸೇನೆಯನ್ನು ಹಿಮ್ಮೆಟ್ಟಿಸುವ ಉದ್ದೇಶದಿಂದ ಚೀನಾವು ಟಿಬೆಟ್‌ನಲ್ಲಿ ತನ್ನ ಸೇನಾ ಉಪಸ್ಥಿತಿಯನ್ನು ಹೆಚ್ಚಿಸುತ್ತಿದೆ ಎಂಬುದಾಗಿ ‘ಗ್ವಾಂಚ’ ವೆಬ್‌ಸೈಟ್‌ನಲ್ಲಿ ಇತ್ತೀಚೆಗೆ ಪ್ರಕಟಗೊಂಡ ವರದಿಯೊಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X